ಬ್ರೇಕಿಂಗ್ ನ್ಯೂಸ್
20-08-24 11:21 am Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 20: ಎರಡು ಕಾಲೇಜು ತಂಡಗಳ ನಡುವಿನ ಫುಟ್ಬಾಲ್ ಪಂದ್ಯಾಟದಲ್ಲಿ ಕಿರಿಕ್ ಉಂಟಾಗಿ ಒಂದು ತಂಡ ಐದಾರು ವಿದ್ಯಾರ್ಥಿಗಳನ್ನು ಅಪಹರಿಸಿ ವಿವಸ್ತ್ರಗೊಳಿಸಿ ಹಲ್ಲೆಗೈದ ಘಟನೆ ನಡೆದಿದ್ದು ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಪಾಂಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿ ಇಬ್ಬರನ್ನು ಬಂಧಿಸಿದ್ದಾರೆ.
ಮಂಗಳೂರಿನ ನೆಹರು ಮೈದಾನದಲ್ಲಿ ಯೆನಪೋಯ ಮತ್ತು ಅಲೋಶಿಯಸ್ ಕಾಲೇಜು ವಿದ್ಯಾರ್ಥಿಗಳ ಮಧ್ಯೆ ಆಗಸ್ಟ್ 14ರಂದು ಫುಟ್ಬಾಲ್ ಟೂರ್ನಮೆಂಟ್ ನಡೆದಿತ್ತು. ಈ ವೇಳೆ, ಮಹಮ್ಮದ್ ಶುರೈ, ಮಹಮ್ಮದ್ ಅಫ್ರಾನ್, ಇಬ್ರಾಹಿಂ ಖಲೀಲ್ ಮತ್ತು ಮಹಮ್ಮದ್ ಜುನೈದ್ ಎಂಬವರು ಯೆನಪೋಯ ತಂಡಕ್ಕೆ ಬೆಂಬಲಿಸಿದ ದ್ವೇಷದಲ್ಲಿ ಮತ್ತೊಂದು ತಂಡದ ವಿದ್ಯಾರ್ಥಿಗಳು ಇವರನ್ನು ಅಪಹರಿಸಿದ್ದಾರೆ. ಆಗಸ್ಟ್ 19ರ ಸೋಮವಾರ ಸಂಜೆ ಇವರನ್ನು ಪಾಂಡೇಶ್ವರದ ಫೋರಂ ಮಾಲ್ ಬಳಿಯಿಂದ ಕಾರಿನಲ್ಲಿ ಅಪಹರಿಸಿದ್ದು ಮಹಾಕಾಳಿ ಪಡ್ಪು ಎಂಬಲ್ಲಿಗೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ. ದಿಯಾನ್, ಅನ್ನೈ, ತಸ್ಮಿನ್, ಸಲ್ಮಾನ್, ಅನಾಸ್ ಮತ್ತಿತರರು ಸೇರಿ ಹಲ್ಲೆಗೈದಿದ್ದಾಗಿ ಮೊಹಮ್ಮದ್ ಶುರೈ ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ಮಹಾಕಾಳಿ ಪಡ್ಪು ಮತ್ತು ಪಡೀಲ್ ಗೆ ಕರೆದೊಯ್ದು ಹಲ್ಲೆ ನಡೆಸಿದ್ದಲ್ಲದೆ, ಯದ್ವಾತದ್ವಾ ಹೊಡೆದು ಸಿಗರೇಟ್ ನಿಂದ ಸುಟ್ಟು ಚಿತ್ರಹಿಂಸೆ ನೀಡಿದ್ದಾರೆ. ಮಂಗಳೂರು ನಗರದ ಎರಡು ಕಡೆ ಕರೆದೊಯ್ದು ಹಲ್ಲೆ ಕೃತ್ಯ ನಡೆಸಲಾಗಿದ್ದು ಹಲ್ಲೆ ಬಳಿಕ ವಿದ್ಯಾರ್ಥಿಗಳ ಪ್ಯಾಂಟ್ ಶರ್ಟ್ ತೆಗೆಸಿ ಒಳ ಚಡ್ಡಿಯಲ್ಲಿ ನಿಲ್ಲಿಸಿ ಬಸ್ಕಿ ತೆಗೆಸಿದ್ದಾರೆ. ನಿನ್ನೆ ತಡರಾತ್ರಿ ಘಟನೆ ನಡೆದಿದ್ದು ಆರೋಪಿಗಳು ಇದರ ವಿಡಿಯೋ ಮಾಡಿ ತಮ್ಮ ವಾಟ್ಸಪ್ ಗ್ರೂಪಿನಲ್ಲಿ ಷೇರ್ ಮಾಡಿದ್ದರು. ವಿಡಿಯೋ ಆಧರಿಸಿ ಪೊಲೀಸರು ಇಬ್ಬರನ್ನು ಬಂಧಿಸಿದ್ದು ಇತರ ಆರೋಪಿಗಳಿಗೆ ಶೋಧ ನಡೆಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ವಿದ್ಯಾರ್ಥಿಗಳನ್ನು ವಿವಸ್ತ್ರಗೊಳಿಸಿ ಕ್ಷಮೆ ಕೇಳುವಂತೆ ಹೇಳಿ ಹಲ್ಲೆ ಮಾಡಿರುವ ವಿಡಿಯೋ ವೈರಲ್ ಆಗಿದೆ.
ಆರೋಪಿಗಳ ಪೈಕಿ ದಿಯಾನ್ ಮತ್ತು ಸಲ್ಮಾನ್ ಎಂಬಿಬ್ಬರನ್ನು ಬಂಧಿಸಲಾಗಿದೆ. ಇನ್ನಿಬ್ಬರು 17 ವರ್ಷದ ಹುಡುಗರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
Mangalore Clash between two college students over a football tournament, three students were kidnapped and tortured the whole night. The miscrenats have also made the video go viral on social media. Pandeshwar Police have arrested two people in this case.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm