ಬ್ರೇಕಿಂಗ್ ನ್ಯೂಸ್
20-08-24 05:33 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್. 20: ಪಿಯುಸಿ ವಿದ್ಯಾರ್ಥಿನಿಯ ಕೈಗೆ ಸಹಪಾಠಿ ಬಾಲಕನೊಬ್ಬ ಬ್ಲೇಡ್ ನಲ್ಲಿ ಹಲ್ಲೆಗೈದು ಪರಾರಿಯಾದ ಘಟನೆ ಪುತ್ತೂರು ಪೇಟೆಯ ಕೊಂಬೆಟ್ಟು ಜೂನಿಯರ್ ಕಾಲೇಜು ಆವರಣದಲ್ಲಿ ನಡೆದಿದೆ.
ಇಬ್ಬರು ಒಂದೇ ಕಾಲೇಜಿನಲ್ಲಿ ಕಲಿಯುವ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾಗಿದ್ದು ಇಂದು ಬೆಳಗ್ಗೆ ಹುಡುಗ ಹಿಂಬಾಲಿಸುತ್ತ ಬಂದು ಬಾಲಕಿಯೊಂದಿಗೆ ಮಾತನಾಡುತ್ತಿದ್ದಾಗಲೇ ಸಿಟ್ಟಿಗೆದ್ದು ಕೈಯಲ್ಲಿದ್ದ ಚೂಪಾದ ವಸ್ತುವಿನಿಂದ ಗೀರಿದ್ದು ಬಾಲಕಿಯ ಕೈಗೆ ಗಾಯವಾಗಿದೆ. ಹುಡುಗಿ ಮುಸ್ಲಿಂ ಸಮುದಾಯಕ್ಕೆ ಸೇರಿದ್ದು, ಹುಡುಗ ಹಿಂದೂ ಆಗಿದ್ದಾನೆ. ಮಧ್ಯಾಹ್ನ ಕಾಲೇಜು ಬಿಟ್ಟ ಬಳಿಕ ಹುಡುಗಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾಳೆ.




ಘಟನೆ ತಿಳಿಯುತ್ತಲೇ ಮುಸ್ಲಿಂ ಸಂಘಟನೆ ಪ್ರಮುಖರು ಮತ್ತು ಯುವಕರು ಆಸ್ಪತ್ರೆ ಆವರಣದಲ್ಲಿ ಜಮಾಯಿಸಿದ್ದಾರೆ. ಬಾಲಕನ ವಿರುದ್ಧ ಕ್ರಮಕ್ಕೆ ಆಗ್ರಹ ಮಾಡಿದ್ದಾರೆ. ಬಾಲಕಿ ಹೇಳುವ ಪ್ರಕಾರ, ನಿನ್ನನ್ನು ಲವ್ ಮಾಡುತ್ತೇನೆ ಎಂದು ಹೇಳಿದ್ದಕ್ಕೆ ವಿದ್ಯಾರ್ಥಿನಿ ಬಾಲಕನಿಗೆ ಬೈದಿದ್ದಾಳಂತೆ. ಇದರಿಂದ ಸಿಟ್ಟಿಗೆದ್ದ ಹುಡುಗ, ತನ್ನ ಕೈಯಲ್ಲಿದ್ದ ಚೂಪಾದ ಬ್ಲೇಡ್ ನಲ್ಲಿ ಬಾಲಕಿಯ ಕೈಗೆ ಇರಿದು ಪರಾರಿಯಾಗಿದ್ದಾನೆ. ಈ ವೇಳೆ ಕಾಲೇಜಿನ ಶಿಕ್ಷಕಿಯೊಬ್ಬರು ಕೈಗೆ ಗಾಜು ತಾಗಿ ಗಾಯವಾಗಿದ್ದಾಗಿ ಹೇಳುವಂತೆ ಸಲಹೆ ನೀಡಿದ್ದರು ಎಂದು ಬಾಲಕಿ ಮಾಧ್ಯಮದ ಮುಂದೆ ಆರೋಪಿಸಿದ್ದಾಳೆ.
ಆಸ್ಪತ್ರೆ ಮುಂದೆ ಜನ ಸೇರಿದ್ದು, ಸ್ಥಳದಲ್ಲಿ ಬಿಗುವಿನ ಸ್ಥಿತಿ ನಿರ್ಮಾಣವಾಗಿದೆ. ನೆರೆದಿದ್ದ ಜನರನ್ನು ಪೊಲೀಸರು ಆಸ್ಪತ್ರೆಯಿಂದ ಹೊರಗೆ ಕಳುಹಿಸಿದ್ದಾರೆ. ಕಾಂಗ್ರೆಸ್ ಮುಖಂಡರು, ಮುಸ್ಲಿಂ ಸಂಘಟನೆ ಮುಖಂಡರು ಸೇರಿದ್ದು ಹುಡುಗ ಚೂರಿ ಇರಿದಿದ್ದಾನೆ, ಆತನನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.
PUC girl Student attacked by minor boy in blade, turns into Hindu muslim fight at puttur in Mangalore. Both muslim and Hindu organisations have joined in great numbers at the hospital.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm