ಬ್ರೇಕಿಂಗ್ ನ್ಯೂಸ್
23-08-24 06:15 pm Udupi Correspondent ಕ್ರೈಂ
ಉಡುಪಿ, ಆಗಸ್ಟ್.23: ಆನ್ಲೈನ್ ಮೂಲಕ ಷೇರು ಮಾರ್ಕೆಟ್ ನಲ್ಲಿ ಹಣ ಹೂಡಿಕೆ ಮಾಡಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿ 13 ಲಕ್ಷ ರೂ. ನಗದು ವಶಕ್ಕೆ ಪಡೆದಿದ್ದಾರೆ.
ಉಪೇಂದ್ರ ಭಟ್ ಎಂಬವರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ ವಾಟ್ಸ್ಯಾಪ್ ನಲ್ಲಿ ಮೋತಿಲಾಲ್ ಓಸ್ವಾಲ್ ಪ್ರೈವೇಟ್ ವೆಲ್ತ್ ಮ್ಯಾನೇಜ್ ಮೆಂಟ್ ಗ್ರೂಪ್ ಗೆ ಸೇರಿಸಿ ಹಣ ಹೂಡುವಂತೆ ನಂಬಿಸಿದ್ದರು, ಅಲ್ಲದೆ, ಮೋತಿಲಾಲ್ ಓಸ್ವಾಲ್ ಪ್ರೈವೇಟ್ ವೆಲ್ತ್ ಮ್ಯಾನೇಜ್ಮೆಂಟ್ ಗ್ರೂಪ್ ನ ಅಕೌಂಟ್ ನಂಬರ್ ನೀಡಿದ್ದಾರೆ. ವಾಟ್ಸ್ಯಾಪ್ ನಲ್ಲಿ ಟ್ರೇಡಿಂಗ್ ಹಾಗೂ ಲಾಭಾಂಶಗಳ ಬಗ್ಗೆ ನಂಬಿಸಿ, ಹೆಚ್ಚಿನ ಲಾಭಾಂಶ ಪಡೆಯಬಹುದೆಂದು ಆಸೆ ತೋರಿಸಿ, ಒಟ್ಟು 33,10,000 ಹಣ ಡೆಪಾಸಿಟ್ ಮಾಡಿಸಿದ್ದಾರೆ. ಆದರೆ ಹಣ ಹಿಂಪಡೆಯಲು ಸಾಧ್ಯವಾಗದೆ ಉಪೇಂದ್ರ ಭಟ್ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಈ ಬಗ್ಗೆ ವಿಶೇಷ ತಂಡ ರಚಿಸಿದ ಉಡುಪಿ ಪೊಲೀಸರು, ಆರೋಪಿಗಳ ಪೈಕಿ ಪುತ್ತೂರಿನ ಮಹಮ್ಮದ್ ಮುಸ್ತಫಾ ಪಿ. (36), ಕುಂಬ್ಳೆಯ ಖಾಲಿದ್ ಬಿ. (39 ), ಕಾಸರಗೋಡಿನ ಮೊಹಮ್ಮದ್ ಸಫಾನ್ ಕೆ.ಎ., (22) , ಮಂಗಳೂರಿನ ಸತೀಶ್ ಶೇಟ್(22 ) ಎಂಬವರನ್ನು ವಶಕ್ಕೆ ಪಡೆದು ಅವರಿಂದ 5 ಮೊಬೈಲ್ ಹಾಗೂ 13 ಲಕ್ಷ ರೂ. ನಗದು ವಶಪಡಿಸಿದ್ದಾರೆ. ಪ್ರಕರಣದ ಪ್ರಮುಖ ಸೂತ್ರಧಾರಿಗಳು ತಲೆಮರೆಸಿಕೊಂಡಿದ್ದಾರೆ.
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಮಾರ್ಗದರ್ಶನದಲ್ಕಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಯ್ಯ ಟಿ.ಎಸ್., ಪರಮೇಶ್ವರ ಹೆಗಡೆ , ಸೆನ್ ಠಾಣೆಯ ನಿರೀಕ್ಷಕ ರಾಮಚಂದ್ರ ನಾಯಕ್, ಎಎಸ್ಐ ರಾಜೇಶ್ , ಸಿಬ್ಬಂದಿಗಳಾದ ಪ್ರವೀಣ ಕುಮಾರ್, ಅರುಣ ಕುಮಾರ್, ವೆಂಕಟೇಶ್, ಯತೀನ್ ಕುಮಾರ್, ರಾಘವೇಂದ್ರ, ಪ್ರಶಾಂತ್ ಪ್ರಸನ್ನ ಸಿ ಸಲ್ಮಾನ್, ಚಾಲಕ ಸುದೀಪ್ ಕಾರ್ಯಾಚರಣೆ ನಡೆಸಿದ್ದಾರೆ.
The Udupi police have arrested four persons and seized Rs 13 lakh from them in connection with the online fraud case. The cash has been seized.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
22-12-25 12:26 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
22-12-25 01:06 pm
Udupi Correspondent
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm