ಬ್ರೇಕಿಂಗ್ ನ್ಯೂಸ್
23-08-24 06:15 pm Udupi Correspondent ಕ್ರೈಂ
ಉಡುಪಿ, ಆಗಸ್ಟ್.23: ಆನ್ಲೈನ್ ಮೂಲಕ ಷೇರು ಮಾರ್ಕೆಟ್ ನಲ್ಲಿ ಹಣ ಹೂಡಿಕೆ ಮಾಡಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿ 13 ಲಕ್ಷ ರೂ. ನಗದು ವಶಕ್ಕೆ ಪಡೆದಿದ್ದಾರೆ.
ಉಪೇಂದ್ರ ಭಟ್ ಎಂಬವರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ ವಾಟ್ಸ್ಯಾಪ್ ನಲ್ಲಿ ಮೋತಿಲಾಲ್ ಓಸ್ವಾಲ್ ಪ್ರೈವೇಟ್ ವೆಲ್ತ್ ಮ್ಯಾನೇಜ್ ಮೆಂಟ್ ಗ್ರೂಪ್ ಗೆ ಸೇರಿಸಿ ಹಣ ಹೂಡುವಂತೆ ನಂಬಿಸಿದ್ದರು, ಅಲ್ಲದೆ, ಮೋತಿಲಾಲ್ ಓಸ್ವಾಲ್ ಪ್ರೈವೇಟ್ ವೆಲ್ತ್ ಮ್ಯಾನೇಜ್ಮೆಂಟ್ ಗ್ರೂಪ್ ನ ಅಕೌಂಟ್ ನಂಬರ್ ನೀಡಿದ್ದಾರೆ. ವಾಟ್ಸ್ಯಾಪ್ ನಲ್ಲಿ ಟ್ರೇಡಿಂಗ್ ಹಾಗೂ ಲಾಭಾಂಶಗಳ ಬಗ್ಗೆ ನಂಬಿಸಿ, ಹೆಚ್ಚಿನ ಲಾಭಾಂಶ ಪಡೆಯಬಹುದೆಂದು ಆಸೆ ತೋರಿಸಿ, ಒಟ್ಟು 33,10,000 ಹಣ ಡೆಪಾಸಿಟ್ ಮಾಡಿಸಿದ್ದಾರೆ. ಆದರೆ ಹಣ ಹಿಂಪಡೆಯಲು ಸಾಧ್ಯವಾಗದೆ ಉಪೇಂದ್ರ ಭಟ್ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಈ ಬಗ್ಗೆ ವಿಶೇಷ ತಂಡ ರಚಿಸಿದ ಉಡುಪಿ ಪೊಲೀಸರು, ಆರೋಪಿಗಳ ಪೈಕಿ ಪುತ್ತೂರಿನ ಮಹಮ್ಮದ್ ಮುಸ್ತಫಾ ಪಿ. (36), ಕುಂಬ್ಳೆಯ ಖಾಲಿದ್ ಬಿ. (39 ), ಕಾಸರಗೋಡಿನ ಮೊಹಮ್ಮದ್ ಸಫಾನ್ ಕೆ.ಎ., (22) , ಮಂಗಳೂರಿನ ಸತೀಶ್ ಶೇಟ್(22 ) ಎಂಬವರನ್ನು ವಶಕ್ಕೆ ಪಡೆದು ಅವರಿಂದ 5 ಮೊಬೈಲ್ ಹಾಗೂ 13 ಲಕ್ಷ ರೂ. ನಗದು ವಶಪಡಿಸಿದ್ದಾರೆ. ಪ್ರಕರಣದ ಪ್ರಮುಖ ಸೂತ್ರಧಾರಿಗಳು ತಲೆಮರೆಸಿಕೊಂಡಿದ್ದಾರೆ.
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಮಾರ್ಗದರ್ಶನದಲ್ಕಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಯ್ಯ ಟಿ.ಎಸ್., ಪರಮೇಶ್ವರ ಹೆಗಡೆ , ಸೆನ್ ಠಾಣೆಯ ನಿರೀಕ್ಷಕ ರಾಮಚಂದ್ರ ನಾಯಕ್, ಎಎಸ್ಐ ರಾಜೇಶ್ , ಸಿಬ್ಬಂದಿಗಳಾದ ಪ್ರವೀಣ ಕುಮಾರ್, ಅರುಣ ಕುಮಾರ್, ವೆಂಕಟೇಶ್, ಯತೀನ್ ಕುಮಾರ್, ರಾಘವೇಂದ್ರ, ಪ್ರಶಾಂತ್ ಪ್ರಸನ್ನ ಸಿ ಸಲ್ಮಾನ್, ಚಾಲಕ ಸುದೀಪ್ ಕಾರ್ಯಾಚರಣೆ ನಡೆಸಿದ್ದಾರೆ.
The Udupi police have arrested four persons and seized Rs 13 lakh from them in connection with the online fraud case. The cash has been seized.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm