ಬ್ರೇಕಿಂಗ್ ನ್ಯೂಸ್
23-08-24 08:24 pm Bangalore Correspondent ಕ್ರೈಂ
ಬೆಂಗಳೂರು, ಆ 23: ಸ್ನೇಹಿತನೊಂದಿಗೆ ಖಾಸಗಿ ವಿಡಿಯೋ ಇರುವುದಾಗಿ ಯುವತಿಗೆ ಬ್ಲ್ಯಾಕ್ಮೇಲ್ ಮಾಡಿ ಆಕೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಸುಲಿಗೆ ಮಾಡಿದ್ದ ಆರೋಪಿಯು ಜಯನಗರ ಪೊಲೀಸರ ಕೈಸೆರೆಯಾಗಿದ್ದಾನೆ.
ಯುವತಿ ಪೋಷಕರು ನೀಡಿದ ದೂರಿನ ಮೇರೆಗೆ ಆರೋಪಿ ಆರ್.ಟಿ.ನಗರದ ಹರ್ಫಾತ್ ಎಂಬಾತನನ್ನು ಬಂಧಿಸಿ 15 ಲಕ್ಷ ಮೌಲ್ಯದ 264 ಗ್ರಾಂ. ಚಿನ್ನದೊಡವೆ ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಜಯನಗರದ ನಿವಾಸಿಯಾಗಿರುವ ಯುವತಿಯು ನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಅರ್ಧಕ್ಕೆ ಮೊಟಕುಗೊಳಿಸಿದ್ದಳು. ಈ ಮಧ್ಯೆ ಆರೋಪಿ ಹರ್ಫಾತ್ ಆಕೆಯ ಸಹ ಯುವತಿಯ ಸ್ನೇಹಿತನಾಗಿದ್ದ. ಕಾಲೇಜಿನಲ್ಲಿ ವ್ಯಾಸಂಗ ಮಾಡುವಾಗ ಡ್ಯಾನಿಶ್ ಎಂಬುನನೊಂದಿಗೆ ಯುವತಿ ಸ್ನೇಹ ಬೆಳೆಸಿಕೊಂಡಿದ್ದಳು. ಇವರಿಬ್ಬರಿಗೂ ಆರೋಪಿ ಕಾಮನ್ ಫ್ರೆಂಡ್ ಆಗಿದ್ದ. ಈ ಮಧ್ಯೆ ಯುವತಿ ಹಾಗೂ ಸ್ನೇಹಿತ ಡ್ಯಾನಿಶ್ ಇಬ್ಬರು ಅಂತರ ಕಾಯ್ದುಕೊಂಡಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಹರ್ಫಾತ್, ಯುವತಿಗೆ ಕರೆ ಮಾಡಿ ಡ್ಯಾನಿಶ್ ಜೊತೆವಿರುವ ಖಾಸಗಿ ವಿಡಿಯೋ ಹಾಗೂ ಫೋಟೋ ಇರುವುದಾಗಿ ಬೆದರಿಸಿದ್ದ. ಈ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿ ಹೆದರಿಸಿದ್ದ. ಮನೆಯಲ್ಲಿ ಚಿನ್ನಾಭರಣ ತಂದುಕೊಡದಿದ್ದರೆ ವಿಡಿಯೋ ವೈರಲ್ ಮಾಡುವುದಾಗಿ ಬ್ಲ್ಯಾಕ್ಮೇಲ್ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Bangalore Youth arrested for blackmailing friend of private video, 15 lakhs gold seized. The arrested has been identified as Harshath who was a close friend of the victim.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm