ಬ್ರೇಕಿಂಗ್ ನ್ಯೂಸ್
24-08-24 11:44 am Udupi Correspondent ಕ್ರೈಂ
ಉಡುಪಿ, ಆಗಸ್ಟ್ 24: ಬಿಯರ್ ನಲ್ಲಿ ಅಮಲು ಬರಿಸುವ ವಸ್ತುವನ್ನು ಸೇರಿಸಿ ಹಿಂದು ಯುವತಿಯ ಮೇಲೆ ಅತ್ಯಾಚಾರ ಎಸಗಿದ ಕೃತ್ಯ ಕಾರ್ಕಳದಲ್ಲಿ ನಡೆದಿದೆ. 21 ವರ್ಷದ ಬೋವಿ ಸಮುದಾಯದ ಯುವತಿಯನ್ನು ಪ್ರೀತಿಸುವ ನೆಪದಲ್ಲಿ ಕಾಡಿಗೆ ಕರೆದೊಯ್ದು ಅನ್ಯಕೋಮಿನ ವ್ಯಕ್ತಿ ಅತ್ಯಾಚಾರ ಎಸಗಿದ್ದಾಗಿ ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದ ಬಗ್ಗೆ ತ್ವರಿತವಾಗಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಲ್ತಾಫ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಸಂತ್ರಸ್ತ ಯುವತಿಗೆ ಅಲ್ತಾಫ್ ಇನ್ಸ್ ಟಾ ಗ್ರಾಮ್ ನಲ್ಲಿ ಪರಿಚಯವಾಗಿದ್ದು, ನಂತರ ಯುವತಿಯನ್ನು ಪುಸಲಾಯಿಸಿ ಸುತ್ತಾಡಲು ಕರೆದೊಯ್ದಿದ್ದ. ದೂರಿನ ಪ್ರಕಾರ, ಶುಕ್ರವಾರ ಬೆಳಗ್ಗೆ ಅಯ್ಯಪ್ಪ ನಗರ ಜೇನು ಕೃಷಿ ಸ್ಥಳದ ಬಳಿಯಿಂದ ಅಲ್ತಾಫ್ ಯುವತಿಯನ್ನು ಕೌಡೂರು ಗ್ರಾಮದ ರಂಗನಪಲ್ಕೆ ಕಾಡಿನ ಜಾಗಕ್ಕೆ ಕರೆದುಕೊಂಡು ಹೋಗಿದ್ದ. ಅಲ್ಲಿಗೆ ಇತರ ಇಬ್ಬರು ಕಾರಿನಲ್ಲಿ ಬಿಯರ್ ಬಾಟಲಿಗಳನ್ನು ತಂದಿದ್ದು, ಅದರಲ್ಲಿ ಅಮಲು ಬರಿಸುವ ಮಾತ್ರೆಗಳನ್ನು ಹಾಕಿ ಯುವತಿಗೆ ನೀಡಿದ್ದರು ಎನ್ನಲಾಗಿದೆ. ಯುವತಿಗೆ ಬಲಾತ್ಕಾರದಿಂದ ಬಿಯರ್ ಕುಡಿಸಿದ್ದು, ಯುವತಿ ಅಮಲಿನಲ್ಲಿದ್ದಾಗ ಕಾರಿನಲ್ಲಿ ಅತ್ಯಾಚಾರ ಎಸಗಿದ್ದಾಗಿ ದೂರಲಾಗಿದೆ.
ಆದರೆ ಇದೊಂದು ಲವ್ ಜಿಹಾದ್ ಕೃತ್ಯವಾಗಿದ್ದು, ಯುವತಿಯನ್ನು ಪುಸಲಾಯಿಸಿ ಒಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಹಿಂದು ಸಂಘಟನೆಗಳು ಆರೋಪಿಸಿದ್ದು, ಶುಕ್ರವಾರ ತಡರಾತ್ರಿ ಕಾರ್ಕಳ ಠಾಣೆಯ ಬಳಿ ನೂರಾರು ಕಾರ್ಯಕರ್ತರು ಸೇರಿ ಪ್ರತಿಭಟನೆ ನಡೆಸಿದ್ದಾರೆ. ಸಂತ್ರಸ್ತ ಯುವತಿಯ ಹೇಳಿಕೆ ಮತ್ತು ವೈದ್ಯಕೀಯ ವರದಿ ಪಡೆದ ನಂತರ ಕ್ರಮ ಜರುಗಿಸುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ.

ಇಬ್ಬರ ಬಂಧನ - ಉಡುಪಿ ಎಸ್ಪಿ
ಇದೇ ವೇಳೆ, ಉಡುಪಿ ಎಸ್ಪಿ ಅರುಣ್ ಕುಮಾರ್ ಹೇಳಿಕೆ ನೀಡಿದ್ದು, ಪ್ರಕರಣ ಸಂಬಂಧಿಸಿ ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಸಂತ್ರಸ್ತ ಯುವತಿ ಮತ್ತು ಆರೋಪಿ ಮೂರು ತಿಂಗಳಿಂದ ಪರಿಚಯ ಹೊಂದಿದ್ದರು. ಶುಕ್ರವಾರ ಆರೋಪಿ ಅಲ್ತಾಫ್ ಕರೆ ಮಾಡಿ ಯುವತಿಯನ್ನು ಬರಹೇಳಿದ್ದು ಕಾರಿನಲ್ಲಿ ಅಪಹರಿಸಿದ್ದಾನೆ. ಮದ್ಯದಲ್ಲಿ ಏನೋ ಬೆರೆಸಿ ಕಾರಿನಲ್ಲಿ ಅತ್ಯಾಚಾರ ಎಸಗಿದ್ದಾಗಿ ಯುವತಿ ತಿಳಿಸಿದ್ದಾಳೆ. ಆರೋಪಿ ಅಲ್ತಾಫ್ ಮತ್ತು ಆತನಿಗೆ ಬಿಯರ್ ತಂದುಕೊಟ್ಟಿದ್ದ ಇಬ್ಬರ ಪೈಕಿ ಸುಬೇರ್ ಎಂಬಾತನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ ಕಾರನ್ನು ಜಪ್ತಿ ಮಾಡಲಾಗಿದೆ. ಸಂತ್ರಸ್ತ ಯುವತಿಗೆ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
21 year old kidnapped, drugged and raped in car at karkala in Udupi, two arrested. In a shocking incident near a house in Kukundoor, Ayyappa Nagar, a young woman was allegedly abducted by a group of four men, drugged, and sexually assaulted. The woman was later found in an unconscious state and was admitted to the Taluk Government Hospital.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm