ಬ್ರೇಕಿಂಗ್ ನ್ಯೂಸ್
24-08-24 04:24 pm HK News Desk ಕ್ರೈಂ
ಹಾಸನ, ಆಗಸ್ಟ್.24: ಇನ್ಸೂರೆನ್ಸ್ ಹಣ ಹೊಡೆಯುವುದಕ್ಕಾಗಿ ಗಂಡ- ಹೆಂಡತಿ ಸೇರಿ ಖತರ್ನಾಕ್ ಪ್ಲಾನ್ ಮಾಡಿ ಸಿಕ್ಕಿಬಿದ್ದಿದ್ದಾರೆ. ತನ್ನನ್ನೇ ಹೋಲುವ ವ್ಯಕ್ತಿಯ ಪರಿಚಯ ಮಾಡಿಕೊಂಡು ನಂತರ ಆಕ್ಸಿಡೆಂಟ್ ಮಾಡಿಸಿ ಕೊಲೆಗೈದಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಗಂಡಸಿ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
ಬೆಂಗಳೂರಿನ ಹೊಸಕೋಟೆ ತಾಲ್ಲೂಕಿನ ಚಿಕ್ಕಕೋಲಿಗದ ಮುನಿಸ್ವಾಮಿಗೌಡ ಮತ್ತು ಆತನ ಪತ್ನಿ ಶಿಲ್ಪಾರಾಣಿ ಕೃತ್ಯ ಎಸಗಿದವರು. ಗಂಡ ಸತ್ತಿದ್ದಾನೆಂದು ಹೇಳಿ ಇನ್ಸೂರೆನ್ಸ್ ಕಂಪನಿಯಿಂದ ಕೋಟಿ ಹಣ ಪಡೆಯಲು ಪತ್ನಿಯೇ ಮುನಿಸ್ವಾಮಿ ಗೌಡ ರೀತಿಯ ಅಮಾಯಕ ವ್ಯಕ್ತಿಯನ್ನು ಕೊಲ್ಲಿಸಿ ದುಡ್ಡು ಹೊಡೆಯಲು ಪ್ಲಾನ್ ಮಾಡಿದ್ದಳು. ಮುನಿಸ್ವಾಮಿಗೌಡ ತನ್ನ ಹೋಲುವ ವ್ಯಕ್ತಿಯೊಬ್ಬನನ್ನು ಶಿಡ್ಲಘಟ್ಟಕ್ಕೆ ಹೋಗೋಣ ಎಂದು ಕರೆದೊಯ್ದಿದ್ದು ದಾರಿ ಮಧ್ಯೆ ಕಾರು ಪಂಕ್ಚರ್ ಆಗಿದೆ, ಟೈರ್ ಬದಲಿಸು ಅಂತ ಅಮಾಯಕನಿಗೆ ಹೇಳಿದ್ದ. ರಸ್ತೆ ಪಕ್ಕ ಕಾರು ನಿಲ್ಲಿಸಿಕೊಂಡು ಟೈರ್ ಬದಲಿಸುವಾಗ ಅಮಾಯಕನ ಮೇಲೆ ಲಾರಿ ಹರಿದಿತ್ತು. ವ್ಯಕ್ತಿಯನ್ನು ಲಾರಿ ಹರಿಸಿ ಕೊಲ್ಲಲು ಚಾಲಕನ ಮೊದಲೇ ಬುಕ್ ಮಾಡಿಕೊಂಡಿದ್ದ ಮುನಿಸ್ವಾಮಿ, ಅದರಲ್ಲಿ ಸಕ್ಸಸ್ ಆಗಿದ್ದ. ಅಮಾಯಕ ಸತ್ತ ನಂತರ ತನ್ನ ಕಾರನ್ನು ಅಲ್ಲೇ ಬಿಟ್ಟು ಎಸ್ಕೇಪ್ ಆಗಿದ್ದ. ಬಳಿಕ ಜಿಲ್ಲಾಸ್ಪತ್ರೆಗೆ ಮೃತ ವ್ಯಕ್ತಿಯ ಬಾಡಿ ಶಿಫ್ಟ್ ಮಾಡಲಾಗಿತ್ತು.


ಇತ್ತ ಮುನಿಸ್ವಾಮಿ ಗೌಡನ ಪತ್ನಿ ಶಿಲ್ಪಾರಾಣಿ ನನ್ನ ಪತಿ ಸಾವನ್ನಪ್ಪಿದ್ದಾನೆ ಎಂದು ಸ್ಥಳೀಯರು ಮತ್ತು ಸಂಬಂಧಿಕರಲ್ಲಿ ಹೇಳಿಕೊಂಡಿದ್ದಳು. ಅಪಘಾತದಲ್ಲಿ ಸತ್ತ ವ್ಯಕ್ತಿಯ ಶವ ಪಡೆದು ಸ್ವತಃ ಪತ್ನಿಯೇ ಕೋಲಾರದ ಚಿಕ್ಕಕೋಲಿಗದಲ್ಲಿ ಅಂತ್ಯಸಂಸ್ಕಾರ ಮಾಡಿ ಮುಗಿಸಿದ್ದಳು. ಆಕೆ ಮತ್ತು ಆತನ ಸಂಬಂಧಿಕರು ಅಂತ್ಯ ಸಂಸ್ಕಾರದಲ್ಲಿಯೂ ಭಾಗವಹಿಸಿದ್ದರು. ಆಗಸ್ಟ್ 12ರ ರಾತ್ರಿ ಅಪಘಾತದ ರೀತಿ ಕೊಲೆ ಆಗಿದ್ದರೂ, ಎಲ್ಲವೂ ಸದ್ದಿಲ್ಲದೆ ಆಗಿಹೋಗಿತ್ತು.
ಮೂರ್ನಾಲ್ಕು ದಿನದ ನಂತರ, ಈ ಕುಟುಂಬದ ಸಂಬಂಧಿಕರೂ ಆದ ಪೊಲೀಸ್ ಇನ್ಸ್ ಪೆಕ್ಟರ್ ಶಿಡ್ಲಘಟ್ಟದ ಶ್ರೀನಿವಾಸ್ ಬೆಂಗಳೂರಿನಲ್ಲಿ ಮುನಿಸ್ವಾಮಿಯನ್ನು ಪ್ರತ್ಯಕ್ಷವಾಗಿ ನೋಡಿದ್ದು ಅಚ್ಚರಿಗೊಂಡಿದ್ದಾರೆ. ಎಲಾ, ಸತ್ತವನು ಎದ್ದು ಬಂದನಾ ಅಂತ ಶಾಕ್ ಆಗಿದ್ದರು. ಅಲ್ಲಿಯೇ ಆತನನ್ನು ಕರೆದು ವಿಚಾರಿಸಿದಾಗ, ನಿಜ ವಿಚಾರ ಬಾಯಿ ಬಿಟ್ಟಿದ್ದಾನೆ. ವಿಪರೀತ ಸಾಲದ ಕಾರಣಕ್ಕೆ ಇನ್ಸೂರೆನ್ಸ್ ಕ್ಲೈಮ್ ಮಾಡಲು ನಾನೇ ಸತ್ತು ಹೋಗಿರುವ ರೀತಿ ನಾಟಕ ಮಾಡಿದ್ದಾಗಿ ಆರೋಪಿ ತಿಳಿಸಿದ್ದಾನೆ.
ಅಷ್ಟರಲ್ಲಿ ಇನ್ಸ್ ಪೆಕ್ಟರ್ ಶ್ರೀನಿವಾಸ್ ಪೊಲೀಸ್ ಮೈಂಡ್ ಜಾಗೃತಗೊಂಡಿದ್ದು ಕೂಡಲೇ ಗಂಡಸಿ ಪೊಲೀಸರಿಗೆ ವಿಷಯ ಮುಟ್ಟಿಸಿದ್ದರು. ಪೊಲೀಸರು ಮುನಿಸ್ವಾಮಿ ಮತ್ತು ಆತನ ಪತ್ನಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಸಿನಿಮಾ ರೀತಿ ಕೊಂದು ನಾಟಕ ಮಾಡಿ ಕೋಟಿ ಕೋಟಿ ಇನ್ಸೂರೆನ್ಸ್ ಹಣಕ್ಕೆ ಪ್ಲಾನ್ ಮಾಡಿದ್ದ ದಂಪತಿ ಕಂಬಿ ಹಿಂದೆ ಹೋಗುವಂತಾಗಿದೆ.
Hassan couple arrested over murder for of innocent man for insurance.The murder by couple killing a innocent man for insurence has been exposed by Police inspector.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am