ಬ್ರೇಕಿಂಗ್ ನ್ಯೂಸ್
27-08-24 10:11 pm HK News Desk ಕ್ರೈಂ
ಹುಬ್ಬಳ್ಳಿ , ಆ 26: ತಂತ್ರಜ್ಞಾನ ಬೆಳೆದಂತೆ ಸೈಬರ್ ಕಳ್ಳರು ಅಮಾಯಕರನ್ನು ವಂಚಿಸಲು ವಿಚಿತ್ರ ದಾರಿಗಳನ್ನು ಕಂಡುಕೊಳ್ಳುತ್ತಿದ್ದಾರೆ. ಸೈಬರ್ ಕಳ್ಳರ ಹಾವಳಿಯಿಂದ ಅನೇಕ ಜನರು ಹಣ ಕಳೆದುಕೊಂಡು ಕಂಗಾಲಾಗುತ್ತಿದ್ದಾರೆ. ಈ ಮಧ್ಯೆ ಹುಬ್ಬಳ್ಳಿ ನಿವಾಸಿಯೊಬ್ಬರು ಸುಮಾರು 64 ಲಕ್ಷ ರೂ. ಕಳೆದುಕೊಂಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನಿವೃತ್ತ ಬ್ಯಾಂಕ್ ಉದ್ಯೋಗಿಯಾಗಿರುವ ಸುತ್ತೂರಿನ ನಿವಾಸಿ ಶಿವರಾಮ್ ಪುರೋಹಿತ್ ವಂಚನೆಗೊಳಗಾದವರು.
ದೂರಿನಲ್ಲೇನಿದೆ?:
01 ಏಪ್ರಿಲ್ 2024 ರಂದು ಇನ್ಸ್ಟಾಗ್ರಾಂನಲ್ಲಿ SNS Investment Old Coin Gallery, Mumbai ಎಂಬ ಕಂಪನಿಯ ಜಾಹೀರಾತು ನೋಡಿದ್ದೆ. ಇದರಲ್ಲಿ ಹಳೆಯ ನೋಟು ಹಾಗೂ ನಾಣ್ಯಗಳನ್ನು ಪಡೆದುಕೊಂಡು ಅದಕ್ಕೆ ಒಳ್ಳೆಯ ಬೆಲೆಯನ್ನು ಕೊಡುವುದಾಗಿ ಪ್ರಕಟಿಸಲಾಗಿತ್ತು. ಆ ಜಾಹೀರಾತು ನಿಜವೆಂದು ನಂಬಿದ ಅದರಲ್ಲಿನ ವಾಟ್ಸಾಪ್ ನಂಬರಿಗೆ ತಮ್ಮ ಬಳಿ ಇರುವ 5 ರೂಪಾಯಿಯ ಫೋಟೋವನ್ನು ಕಳುಹಿಸಿದ್ದೆ.
ಕಂಪನಿಯವರು ಈ ಐದು ರೂಪಾಯಿ ನೋಟಿಗೆ 11 ಲಕ್ಷ ಬೆಲೆಯನ್ನು ನಿಗದಿಪಡಿಸಿದ್ದರು. ಆದ್ರೆ ಈ 11 ಲಕ್ಷ ರೂಪಾಯಿಯನ್ನು ಪಡೆಯಲು ವಿವಿಧ ಶುಲ್ಕ ಪಾವತಿಸಬೇಕು ಎಂದು ನಂಬಿಸಿದ್ದರು. ವಿವಿಧ ಚಾರ್ಜ್ಗಳ ರೂಪದಲ್ಲಿ ನನ್ನ ವಿವಿಧ ಬ್ಯಾಂಕ್ ಖಾತೆಗಳಿಂದ ಆರೋಪಿಗಳು ತಮ್ಮ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು ರೂ. 52,12,654 ಲಕ್ಷ ಹಣವನ್ನ ವರ್ಗಾಯಿಸಿಕೊಂಡಿದ್ದಾರೆ ಎಂದು ಶಿವರಾಮ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
Quikr Company, Kolkota ಸಹ ವಿವಿಧ ಚಾರ್ಜ್ ಗಳ ರೂಪದಲ್ಲಿ ವಿವಿಧ ಬ್ಯಾಂಕ್ ಖಾತೆಗಳಿಂದ ತಮ್ಮ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು ರೂ. 10,89,766 ಹಣವನ್ನು ವರ್ಗಾಯಿಸಿಕೊಂಡು ವಂಚಿಸಿದ್ದಾರೆ ಎಂದು ಶಿವರಾಮ್ ದೂರಿನಲ್ಲಿ ತಿಳಿಸಿದ್ದಾರೆ.
ಹಂತ ಹಂತವಾಗಿ ಒಟ್ಟು 63,02,423 ಲಕ್ಷ ರೂ. ವರ್ಗಾಯಿಸಿಕೊಂಡು ವಂಚಿಸಿದ್ದಾರೆ ಎಂದು ಆರೋಪಿಸಿ ದೂರುದಾರ ಶಿವರಾಮ್ ಅವರು ಮುಂಬೈನ ಶಿವರಾಜ್ ರಾವ್, ಎಸ್ಎನ್ಎಸ್ ಇನ್ವೆಸ್ಟ್ಮೆಂಟ್ ಓಲ್ಡ್ ಕ್ವಾಯಿನ್ ಗ್ಯಾಲರಿ, ಶಹಿಲ್ಮುಂಬೈ, ಪಂಕಜ್ಸಿಂಗ್ ಮುಂಬೈ, ಕ್ವಿಕರ್ ಕೋಲ್ಕತ್ತಾ ಹಾಗೂ ಟ್ಯಾನಮೆ ಸನ್ಬೋಟ್ ಕೋಲ್ಕತ್ತಾ ಅವರ ಮೇಲೆ ಹುಬ್ಬಳ್ಳಿಯ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾರೆ.
Former bank employee from Hubballi looses 64 lakhs in old note exchange fraud. A case has been registered at the cyber crime police station
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm