ಬ್ರೇಕಿಂಗ್ ನ್ಯೂಸ್
27-08-24 10:11 pm HK News Desk ಕ್ರೈಂ
ಹುಬ್ಬಳ್ಳಿ , ಆ 26: ತಂತ್ರಜ್ಞಾನ ಬೆಳೆದಂತೆ ಸೈಬರ್ ಕಳ್ಳರು ಅಮಾಯಕರನ್ನು ವಂಚಿಸಲು ವಿಚಿತ್ರ ದಾರಿಗಳನ್ನು ಕಂಡುಕೊಳ್ಳುತ್ತಿದ್ದಾರೆ. ಸೈಬರ್ ಕಳ್ಳರ ಹಾವಳಿಯಿಂದ ಅನೇಕ ಜನರು ಹಣ ಕಳೆದುಕೊಂಡು ಕಂಗಾಲಾಗುತ್ತಿದ್ದಾರೆ. ಈ ಮಧ್ಯೆ ಹುಬ್ಬಳ್ಳಿ ನಿವಾಸಿಯೊಬ್ಬರು ಸುಮಾರು 64 ಲಕ್ಷ ರೂ. ಕಳೆದುಕೊಂಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನಿವೃತ್ತ ಬ್ಯಾಂಕ್ ಉದ್ಯೋಗಿಯಾಗಿರುವ ಸುತ್ತೂರಿನ ನಿವಾಸಿ ಶಿವರಾಮ್ ಪುರೋಹಿತ್ ವಂಚನೆಗೊಳಗಾದವರು.
ದೂರಿನಲ್ಲೇನಿದೆ?:
01 ಏಪ್ರಿಲ್ 2024 ರಂದು ಇನ್ಸ್ಟಾಗ್ರಾಂನಲ್ಲಿ SNS Investment Old Coin Gallery, Mumbai ಎಂಬ ಕಂಪನಿಯ ಜಾಹೀರಾತು ನೋಡಿದ್ದೆ. ಇದರಲ್ಲಿ ಹಳೆಯ ನೋಟು ಹಾಗೂ ನಾಣ್ಯಗಳನ್ನು ಪಡೆದುಕೊಂಡು ಅದಕ್ಕೆ ಒಳ್ಳೆಯ ಬೆಲೆಯನ್ನು ಕೊಡುವುದಾಗಿ ಪ್ರಕಟಿಸಲಾಗಿತ್ತು. ಆ ಜಾಹೀರಾತು ನಿಜವೆಂದು ನಂಬಿದ ಅದರಲ್ಲಿನ ವಾಟ್ಸಾಪ್ ನಂಬರಿಗೆ ತಮ್ಮ ಬಳಿ ಇರುವ 5 ರೂಪಾಯಿಯ ಫೋಟೋವನ್ನು ಕಳುಹಿಸಿದ್ದೆ.
ಕಂಪನಿಯವರು ಈ ಐದು ರೂಪಾಯಿ ನೋಟಿಗೆ 11 ಲಕ್ಷ ಬೆಲೆಯನ್ನು ನಿಗದಿಪಡಿಸಿದ್ದರು. ಆದ್ರೆ ಈ 11 ಲಕ್ಷ ರೂಪಾಯಿಯನ್ನು ಪಡೆಯಲು ವಿವಿಧ ಶುಲ್ಕ ಪಾವತಿಸಬೇಕು ಎಂದು ನಂಬಿಸಿದ್ದರು. ವಿವಿಧ ಚಾರ್ಜ್ಗಳ ರೂಪದಲ್ಲಿ ನನ್ನ ವಿವಿಧ ಬ್ಯಾಂಕ್ ಖಾತೆಗಳಿಂದ ಆರೋಪಿಗಳು ತಮ್ಮ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು ರೂ. 52,12,654 ಲಕ್ಷ ಹಣವನ್ನ ವರ್ಗಾಯಿಸಿಕೊಂಡಿದ್ದಾರೆ ಎಂದು ಶಿವರಾಮ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
Quikr Company, Kolkota ಸಹ ವಿವಿಧ ಚಾರ್ಜ್ ಗಳ ರೂಪದಲ್ಲಿ ವಿವಿಧ ಬ್ಯಾಂಕ್ ಖಾತೆಗಳಿಂದ ತಮ್ಮ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು ರೂ. 10,89,766 ಹಣವನ್ನು ವರ್ಗಾಯಿಸಿಕೊಂಡು ವಂಚಿಸಿದ್ದಾರೆ ಎಂದು ಶಿವರಾಮ್ ದೂರಿನಲ್ಲಿ ತಿಳಿಸಿದ್ದಾರೆ.
ಹಂತ ಹಂತವಾಗಿ ಒಟ್ಟು 63,02,423 ಲಕ್ಷ ರೂ. ವರ್ಗಾಯಿಸಿಕೊಂಡು ವಂಚಿಸಿದ್ದಾರೆ ಎಂದು ಆರೋಪಿಸಿ ದೂರುದಾರ ಶಿವರಾಮ್ ಅವರು ಮುಂಬೈನ ಶಿವರಾಜ್ ರಾವ್, ಎಸ್ಎನ್ಎಸ್ ಇನ್ವೆಸ್ಟ್ಮೆಂಟ್ ಓಲ್ಡ್ ಕ್ವಾಯಿನ್ ಗ್ಯಾಲರಿ, ಶಹಿಲ್ಮುಂಬೈ, ಪಂಕಜ್ಸಿಂಗ್ ಮುಂಬೈ, ಕ್ವಿಕರ್ ಕೋಲ್ಕತ್ತಾ ಹಾಗೂ ಟ್ಯಾನಮೆ ಸನ್ಬೋಟ್ ಕೋಲ್ಕತ್ತಾ ಅವರ ಮೇಲೆ ಹುಬ್ಬಳ್ಳಿಯ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾರೆ.
Former bank employee from Hubballi looses 64 lakhs in old note exchange fraud. A case has been registered at the cyber crime police station
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm