ಬ್ರೇಕಿಂಗ್ ನ್ಯೂಸ್
27-08-24 10:11 pm HK News Desk ಕ್ರೈಂ
ಹುಬ್ಬಳ್ಳಿ , ಆ 26: ತಂತ್ರಜ್ಞಾನ ಬೆಳೆದಂತೆ ಸೈಬರ್ ಕಳ್ಳರು ಅಮಾಯಕರನ್ನು ವಂಚಿಸಲು ವಿಚಿತ್ರ ದಾರಿಗಳನ್ನು ಕಂಡುಕೊಳ್ಳುತ್ತಿದ್ದಾರೆ. ಸೈಬರ್ ಕಳ್ಳರ ಹಾವಳಿಯಿಂದ ಅನೇಕ ಜನರು ಹಣ ಕಳೆದುಕೊಂಡು ಕಂಗಾಲಾಗುತ್ತಿದ್ದಾರೆ. ಈ ಮಧ್ಯೆ ಹುಬ್ಬಳ್ಳಿ ನಿವಾಸಿಯೊಬ್ಬರು ಸುಮಾರು 64 ಲಕ್ಷ ರೂ. ಕಳೆದುಕೊಂಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನಿವೃತ್ತ ಬ್ಯಾಂಕ್ ಉದ್ಯೋಗಿಯಾಗಿರುವ ಸುತ್ತೂರಿನ ನಿವಾಸಿ ಶಿವರಾಮ್ ಪುರೋಹಿತ್ ವಂಚನೆಗೊಳಗಾದವರು.
ದೂರಿನಲ್ಲೇನಿದೆ?:
01 ಏಪ್ರಿಲ್ 2024 ರಂದು ಇನ್ಸ್ಟಾಗ್ರಾಂನಲ್ಲಿ SNS Investment Old Coin Gallery, Mumbai ಎಂಬ ಕಂಪನಿಯ ಜಾಹೀರಾತು ನೋಡಿದ್ದೆ. ಇದರಲ್ಲಿ ಹಳೆಯ ನೋಟು ಹಾಗೂ ನಾಣ್ಯಗಳನ್ನು ಪಡೆದುಕೊಂಡು ಅದಕ್ಕೆ ಒಳ್ಳೆಯ ಬೆಲೆಯನ್ನು ಕೊಡುವುದಾಗಿ ಪ್ರಕಟಿಸಲಾಗಿತ್ತು. ಆ ಜಾಹೀರಾತು ನಿಜವೆಂದು ನಂಬಿದ ಅದರಲ್ಲಿನ ವಾಟ್ಸಾಪ್ ನಂಬರಿಗೆ ತಮ್ಮ ಬಳಿ ಇರುವ 5 ರೂಪಾಯಿಯ ಫೋಟೋವನ್ನು ಕಳುಹಿಸಿದ್ದೆ.
ಕಂಪನಿಯವರು ಈ ಐದು ರೂಪಾಯಿ ನೋಟಿಗೆ 11 ಲಕ್ಷ ಬೆಲೆಯನ್ನು ನಿಗದಿಪಡಿಸಿದ್ದರು. ಆದ್ರೆ ಈ 11 ಲಕ್ಷ ರೂಪಾಯಿಯನ್ನು ಪಡೆಯಲು ವಿವಿಧ ಶುಲ್ಕ ಪಾವತಿಸಬೇಕು ಎಂದು ನಂಬಿಸಿದ್ದರು. ವಿವಿಧ ಚಾರ್ಜ್ಗಳ ರೂಪದಲ್ಲಿ ನನ್ನ ವಿವಿಧ ಬ್ಯಾಂಕ್ ಖಾತೆಗಳಿಂದ ಆರೋಪಿಗಳು ತಮ್ಮ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು ರೂ. 52,12,654 ಲಕ್ಷ ಹಣವನ್ನ ವರ್ಗಾಯಿಸಿಕೊಂಡಿದ್ದಾರೆ ಎಂದು ಶಿವರಾಮ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
Quikr Company, Kolkota ಸಹ ವಿವಿಧ ಚಾರ್ಜ್ ಗಳ ರೂಪದಲ್ಲಿ ವಿವಿಧ ಬ್ಯಾಂಕ್ ಖಾತೆಗಳಿಂದ ತಮ್ಮ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು ರೂ. 10,89,766 ಹಣವನ್ನು ವರ್ಗಾಯಿಸಿಕೊಂಡು ವಂಚಿಸಿದ್ದಾರೆ ಎಂದು ಶಿವರಾಮ್ ದೂರಿನಲ್ಲಿ ತಿಳಿಸಿದ್ದಾರೆ.
ಹಂತ ಹಂತವಾಗಿ ಒಟ್ಟು 63,02,423 ಲಕ್ಷ ರೂ. ವರ್ಗಾಯಿಸಿಕೊಂಡು ವಂಚಿಸಿದ್ದಾರೆ ಎಂದು ಆರೋಪಿಸಿ ದೂರುದಾರ ಶಿವರಾಮ್ ಅವರು ಮುಂಬೈನ ಶಿವರಾಜ್ ರಾವ್, ಎಸ್ಎನ್ಎಸ್ ಇನ್ವೆಸ್ಟ್ಮೆಂಟ್ ಓಲ್ಡ್ ಕ್ವಾಯಿನ್ ಗ್ಯಾಲರಿ, ಶಹಿಲ್ಮುಂಬೈ, ಪಂಕಜ್ಸಿಂಗ್ ಮುಂಬೈ, ಕ್ವಿಕರ್ ಕೋಲ್ಕತ್ತಾ ಹಾಗೂ ಟ್ಯಾನಮೆ ಸನ್ಬೋಟ್ ಕೋಲ್ಕತ್ತಾ ಅವರ ಮೇಲೆ ಹುಬ್ಬಳ್ಳಿಯ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾರೆ.
Former bank employee from Hubballi looses 64 lakhs in old note exchange fraud. A case has been registered at the cyber crime police station
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
15-05-26 08:54 am
HK News Staffer
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
15-05-26 12:21 pm
HK News Staffer
ಬೇರೊಬ್ಬ ಮಹಿಳೆ ಹೆಸರಲ್ಲಿ ನಕಲಿ ಪಾಸ್ ಪೋರ್ಟ್ ಮಾಡಿಸ...
14-05-26 01:41 pm
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm