ಬ್ರೇಕಿಂಗ್ ನ್ಯೂಸ್
09-12-20 02:58 pm Mangalore Correspondent ಕ್ರೈಂ
ಮಂಗಳೂರು, ಡಿ.9 : ಸೋಮವಾರ ರಾತ್ರಿ ಮದುವೆ ಮನೆಯಲ್ಲಿ ನಡೆದ ದಾಂಧಲೆಗೆ ಸಂಬಂಧಿಸಿ ರೌಡಿಶೀಟರ್ ಸಹಿತ ನಾಲ್ವರನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.
ಸ್ಥಳೀಯ ನಿವಾಸಿ ರೌಡಿಶೀಟರ್ ಗೌರೀಶ್, ಆತನ ಸ್ನೇಹಿತರಾದ ತಲಪಾಡಿಯ ಸುಮಂತ್, ಬಜಾಲ್ ನಿವಾಸಿ ಸುಮಂತ್ ಮತ್ತು ಆಶಿತ್ ಬಂಧಿತರು.
ಮುಂಬೈಯಿಂದ ಮದುವೆ ಕಾರ್ಯಕ್ರಮಕ್ಕೆ ಆಗಮಿಸಿದವರು, ಗೌರೀಶ್ ಬಳಿ ದಾರಿ ಕೇಳಿದ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ದಾಂಧಲೆ ನಡೆದಿದೆ. ಈ ಸಂದರ್ಭ ಗೌರೀಶ್ ತನ್ನ ಗೆಳೆಯರನ್ನು ಕರೆಯಿಸಿ ಮಹಿಳೆಯರನ್ನು ಎಳೆದಾಡಿ, ಹೆಲ್ಮೆಟ್ನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ಕಂಟ್ರೋಲ್ ರೂಮಿನಿಂದ ಬಂದ ಸೂಚನೆಯಂತೆ ಸಾಗರ ವಾಹನದಲ್ಲಿ ಕರ್ತವ್ಯದಲ್ಲಿದ್ದ ಕಂಕನಾಡಿ ನಗರ ಠಾಣೆಯ ಹೆಡ್ ಕಾನ್ಸ್ಟೇಬಲ್ ನಾರಾಯಣ ಎಂ.ಕೆ. ಸ್ಥಳಕ್ಕೆ ತೆರಳಿ ಗೌರೀಶ್ ನನ್ನು ವಶಕ್ಕೆ ಪಡೆಯಲು ಮುಂದಾದಾಗ ಆರೋಪಿಗಳು ಪೊಲೀಸರ ಸಮವಸ್ತ್ರಕ್ಕೆ ಕೈ ಹಾಕಿ ಕರ್ತವ್ಯಕ್ಕೆ ಅಡ್ಡಿ ಉಂಟು ಮಾಡಿದ್ದರು. ಅಲ್ಲದೆ, ಬೆದರಿಕೆಯೊಡ್ಡಿ ಪರಾರಿಯಾಗಿದ್ದಾರೆ ಎಂದು ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ.
ಕಂಕನಾಡಿ ನಗರ ಠಾಣೆ ಪೊಲೀಸರು ಅಂದು ರಾತ್ರಿಯೇ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ರೌಡಿಶೀಟರ್ ಗೌರೀಶ್ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಕಳೆದ ವರ್ಷವೂ ಬಂಧಿಸಲು ಹೋಗಿದ್ದ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ. ಈ ಸಂದರ್ಭ ಆತನ ಕಾಲಿಗೆ ಗುಂಡು ಹೊಡೆದು ಪೊಲೀಸರು ಬಂಧಿಸಿದ್ದರು.
Mangalore Rowdy Shetter Gowrish and three others arrested for creating Chaos in Marriage House in Padil and also for assaulting cop who came to solve the issue.
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
30-01-26 08:56 pm
Mangalore Correspondent
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm