ಬ್ರೇಕಿಂಗ್ ನ್ಯೂಸ್
09-12-20 02:58 pm Mangalore Correspondent ಕ್ರೈಂ
ಮಂಗಳೂರು, ಡಿ.9 : ಸೋಮವಾರ ರಾತ್ರಿ ಮದುವೆ ಮನೆಯಲ್ಲಿ ನಡೆದ ದಾಂಧಲೆಗೆ ಸಂಬಂಧಿಸಿ ರೌಡಿಶೀಟರ್ ಸಹಿತ ನಾಲ್ವರನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.
ಸ್ಥಳೀಯ ನಿವಾಸಿ ರೌಡಿಶೀಟರ್ ಗೌರೀಶ್, ಆತನ ಸ್ನೇಹಿತರಾದ ತಲಪಾಡಿಯ ಸುಮಂತ್, ಬಜಾಲ್ ನಿವಾಸಿ ಸುಮಂತ್ ಮತ್ತು ಆಶಿತ್ ಬಂಧಿತರು.
ಮುಂಬೈಯಿಂದ ಮದುವೆ ಕಾರ್ಯಕ್ರಮಕ್ಕೆ ಆಗಮಿಸಿದವರು, ಗೌರೀಶ್ ಬಳಿ ದಾರಿ ಕೇಳಿದ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ದಾಂಧಲೆ ನಡೆದಿದೆ. ಈ ಸಂದರ್ಭ ಗೌರೀಶ್ ತನ್ನ ಗೆಳೆಯರನ್ನು ಕರೆಯಿಸಿ ಮಹಿಳೆಯರನ್ನು ಎಳೆದಾಡಿ, ಹೆಲ್ಮೆಟ್ನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ಕಂಟ್ರೋಲ್ ರೂಮಿನಿಂದ ಬಂದ ಸೂಚನೆಯಂತೆ ಸಾಗರ ವಾಹನದಲ್ಲಿ ಕರ್ತವ್ಯದಲ್ಲಿದ್ದ ಕಂಕನಾಡಿ ನಗರ ಠಾಣೆಯ ಹೆಡ್ ಕಾನ್ಸ್ಟೇಬಲ್ ನಾರಾಯಣ ಎಂ.ಕೆ. ಸ್ಥಳಕ್ಕೆ ತೆರಳಿ ಗೌರೀಶ್ ನನ್ನು ವಶಕ್ಕೆ ಪಡೆಯಲು ಮುಂದಾದಾಗ ಆರೋಪಿಗಳು ಪೊಲೀಸರ ಸಮವಸ್ತ್ರಕ್ಕೆ ಕೈ ಹಾಕಿ ಕರ್ತವ್ಯಕ್ಕೆ ಅಡ್ಡಿ ಉಂಟು ಮಾಡಿದ್ದರು. ಅಲ್ಲದೆ, ಬೆದರಿಕೆಯೊಡ್ಡಿ ಪರಾರಿಯಾಗಿದ್ದಾರೆ ಎಂದು ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ.
ಕಂಕನಾಡಿ ನಗರ ಠಾಣೆ ಪೊಲೀಸರು ಅಂದು ರಾತ್ರಿಯೇ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ರೌಡಿಶೀಟರ್ ಗೌರೀಶ್ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಕಳೆದ ವರ್ಷವೂ ಬಂಧಿಸಲು ಹೋಗಿದ್ದ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ. ಈ ಸಂದರ್ಭ ಆತನ ಕಾಲಿಗೆ ಗುಂಡು ಹೊಡೆದು ಪೊಲೀಸರು ಬಂಧಿಸಿದ್ದರು.
Mangalore Rowdy Shetter Gowrish and three others arrested for creating Chaos in Marriage House in Padil and also for assaulting cop who came to solve the issue.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am