ಬ್ರೇಕಿಂಗ್ ನ್ಯೂಸ್
09-12-20 02:58 pm Mangalore Correspondent ಕ್ರೈಂ
ಮಂಗಳೂರು, ಡಿ.9 : ಸೋಮವಾರ ರಾತ್ರಿ ಮದುವೆ ಮನೆಯಲ್ಲಿ ನಡೆದ ದಾಂಧಲೆಗೆ ಸಂಬಂಧಿಸಿ ರೌಡಿಶೀಟರ್ ಸಹಿತ ನಾಲ್ವರನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.
ಸ್ಥಳೀಯ ನಿವಾಸಿ ರೌಡಿಶೀಟರ್ ಗೌರೀಶ್, ಆತನ ಸ್ನೇಹಿತರಾದ ತಲಪಾಡಿಯ ಸುಮಂತ್, ಬಜಾಲ್ ನಿವಾಸಿ ಸುಮಂತ್ ಮತ್ತು ಆಶಿತ್ ಬಂಧಿತರು.
ಮುಂಬೈಯಿಂದ ಮದುವೆ ಕಾರ್ಯಕ್ರಮಕ್ಕೆ ಆಗಮಿಸಿದವರು, ಗೌರೀಶ್ ಬಳಿ ದಾರಿ ಕೇಳಿದ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ದಾಂಧಲೆ ನಡೆದಿದೆ. ಈ ಸಂದರ್ಭ ಗೌರೀಶ್ ತನ್ನ ಗೆಳೆಯರನ್ನು ಕರೆಯಿಸಿ ಮಹಿಳೆಯರನ್ನು ಎಳೆದಾಡಿ, ಹೆಲ್ಮೆಟ್ನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ಕಂಟ್ರೋಲ್ ರೂಮಿನಿಂದ ಬಂದ ಸೂಚನೆಯಂತೆ ಸಾಗರ ವಾಹನದಲ್ಲಿ ಕರ್ತವ್ಯದಲ್ಲಿದ್ದ ಕಂಕನಾಡಿ ನಗರ ಠಾಣೆಯ ಹೆಡ್ ಕಾನ್ಸ್ಟೇಬಲ್ ನಾರಾಯಣ ಎಂ.ಕೆ. ಸ್ಥಳಕ್ಕೆ ತೆರಳಿ ಗೌರೀಶ್ ನನ್ನು ವಶಕ್ಕೆ ಪಡೆಯಲು ಮುಂದಾದಾಗ ಆರೋಪಿಗಳು ಪೊಲೀಸರ ಸಮವಸ್ತ್ರಕ್ಕೆ ಕೈ ಹಾಕಿ ಕರ್ತವ್ಯಕ್ಕೆ ಅಡ್ಡಿ ಉಂಟು ಮಾಡಿದ್ದರು. ಅಲ್ಲದೆ, ಬೆದರಿಕೆಯೊಡ್ಡಿ ಪರಾರಿಯಾಗಿದ್ದಾರೆ ಎಂದು ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ.
ಕಂಕನಾಡಿ ನಗರ ಠಾಣೆ ಪೊಲೀಸರು ಅಂದು ರಾತ್ರಿಯೇ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ರೌಡಿಶೀಟರ್ ಗೌರೀಶ್ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಕಳೆದ ವರ್ಷವೂ ಬಂಧಿಸಲು ಹೋಗಿದ್ದ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದ. ಈ ಸಂದರ್ಭ ಆತನ ಕಾಲಿಗೆ ಗುಂಡು ಹೊಡೆದು ಪೊಲೀಸರು ಬಂಧಿಸಿದ್ದರು.
Mangalore Rowdy Shetter Gowrish and three others arrested for creating Chaos in Marriage House in Padil and also for assaulting cop who came to solve the issue.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm