ಬ್ರೇಕಿಂಗ್ ನ್ಯೂಸ್
29-08-24 09:02 pm Udupi Correspondent ಕ್ರೈಂ
ಉಡುಪಿ, ಆಗಸ್ಟ್.29: ಯುವತಿಯೊಬ್ಬಳು ಕೃಷ್ಣಾಷ್ಟಮಿ ಪ್ರಯುಕ್ತ ರೈಲಿನಲ್ಲಿ ಬೆಂಗಳೂರಿನಿಂದ ಊರಿಗೆ ಬರುತ್ತಿದ್ದಾಗ ಯುವಕನೊಬ್ಬ ಮಾನಭಂಗಕ್ಕೆ ಯತ್ನಿಸಿದ್ದು ದೂರು ದಾಖಲಾದ 24 ಗಂಟೆಯಲ್ಲೇ ಮಣಿಪಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಭಟ್ಕಳ ಮೂಲದ ಮೊಹಮ್ಮದ್ ಶುರೈಮ್ (22) ಬಂಧಿತ ಆರೋಪಿ.
ಮೂಲತಃ ಉಡುಪಿ ತಾಲೂಕಿನ ಮಣಿಪಾಲದ ಯುವತಿ ಬೆಂಗಳೂರಿನಲ್ಲಿ ಐಟಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದು ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಶನಿವಾರ ರಾತ್ರಿ ಊರಿಗೆ ಹೊರಟಿದ್ದರು. ಭಾನುವಾರ ಮುಂಜಾನೆ ರೈಲು ಸಂಚರಿಸುತ್ತಿದ್ದಾಗಲೇ ಯುವಕನೋರ್ವ ಅಸಭ್ಯ ವರ್ತನೆ ತೋರಿದ್ದಾನೆ. ಇನ್ನೇನು ಉಡುಪಿ ತಲುಪಲು ಅರ್ಧ ಗಂಟೆ ಇರುವಾಗ ಮೈಗೆ ಕೈಹಾಕಿ ಮಾನಭಂಗಕ್ಕೆ ಯತ್ನಿಸಿದ್ದಾನೆ. ಯುವತಿ ಆಕ್ಷೇಪ ವ್ಯಕ್ತಪಡಿಸಿದ್ದು ಜೋರು ಮಾಡುತ್ತಲೇ ಆರೋಪಿ ಶುರೈಮ್ ಕ್ಷಮೆ ಯಾಚಿಸಿದ್ದಾನೆ. ಇದೇ ವೇಳೆ, ಯುವತಿ ಆತನ ಫೋಟೊವನ್ನು ಕ್ಲಿಕ್ಕಿಸಿಕೊಂಡಿದ್ದರು.
ಉಡುಪಿಯಲ್ಲಿ ರೈಲಿನಿಂದ ಇಳಿಯುತ್ತಲೇ ರೈಲ್ವೆ ಪೊಲೀಸ್ಗೆ ಯುವತಿ ಮಾಹಿತಿ ನೀಡಿದ್ದಾರೆ. ರೈಲ್ವೆ ಆ್ಯಪ್ ಮೂಲಕವೂ ದೂರು ದಾಖಲಿಸಿದ್ದರು. ಯುವತಿ ನೀಡಿದ ಮಾಹಿತಿ ಆಧರಿಸಿ ಮಣಿಪಾಲ ಪೊಲೀಸರು ಆರೋಪಿ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದಾರೆ.
ದೂರು ಮತ್ತು ಫೋಟೊ ಹಿಡಿದು ಶೋಧಕ್ಕಿಳಿದ ಪೊಲೀಸರು ಮೊದಲಿಗೆ ಅಂದು ರೈಲಿನಲ್ಲಿ ಪ್ರಯಾಣಿಸಿದ್ದ ಎಲ್ಲ ಪ್ರಯಾಣಿಕರ ವಿವರ ಪಡೆದಿದ್ದಾರೆ. ಘಟನೆ ನಡೆದದ್ದು ವೀಕೆಂಡ್ ಆದ ಹಿನ್ನೆಲೆ ಬೆಂಗಳೂರು-ಮುರ್ಡೇಶ್ವರ ನಡುವೆ ಸಂಚರಿಸುವ ಮುರ್ಡೇಶ್ವರ ಎಕ್ಸ್ ಪ್ರೆಸ್ ರೈಲಿನಲ್ಲಿ ಶನಿವಾರ ಸಾವಿರಕ್ಕೂ ಹೆಚ್ಚು ಮಂದಿ ಪ್ರಯಾಣಿಸಿದ್ದರು. ದೂರಿನಲ್ಲಿ ನೀಡಿದ್ದ ಮಾಹಿತಿ ಆಧರಿಸಿ ಮೂರು ಹಂತಗಳಲ್ಲಿ ಶಾರ್ಟ್ ಲಿಸ್ಟ್ ಮಾಡಿ ಶೋಧ ನಡೆಸಿದ್ದಾರೆ. ಜೊತೆಗೆ, ಉಡುಪಿ ಮತ್ತು ಆನಂತರದ ನಿಲ್ದಾಣಗಳಲ್ಲಿ ಇಳಿದು ಹೋದವರನ್ನು ಸಿಸಿಟಿವಿಯಲ್ಲಿ ಪರಿಶೀಲನೆ ನಡೆಸಿದ್ದಾರೆ.
ಆರೋಪಿ ಭಟ್ಕಳದಲ್ಲಿ ಇಳಿದಿದ್ದನ್ನ ಪತ್ತೆಹಚ್ಚಿದ ಪೊಲೀಸರು ಆತನ ಮಾಹಿತಿ ಪಡೆದು ನೇರವಾಗಿ ಭಟ್ಕಳದ ನಿವಾಸದಿಂದಲೇ ಬಂಧಿಸಿದ್ದಾರೆ. ಹೆಸರು, ಮಾಹಿತಿ ಇಲ್ಲದಿದ್ದರೂ ಪೊಲೀಸರು ಕರಾರುವಾಕ್ಕಾಗಿ ಕಾರ್ಯಾಚರಣೆ ನಡೆಸಿದ್ದು ಶ್ಲಾಘನೆಗೆ ಪಾತ್ರವಾಗಿದೆ.
The 22-year-old man, who tried to sexually assault a woman software professional on a running train in the Udupi district of Karnataka, has been arrested, said officials here on Thursday. The incident happened on an express train on Sunday as the woman was travelling from Bengaluru to Manipal town near Udupi City.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm