ಬ್ರೇಕಿಂಗ್ ನ್ಯೂಸ್
30-08-24 03:31 pm HK News Desk ಕ್ರೈಂ
ಬೆಳಗಾವಿ, ಆ 29: ಕಿರಾತಕರ ಗ್ಯಾಂಗ್ವೊಂದು ಸಿನಿಮೀಯ ರೀತಿಯಲ್ಲಿ ರಾತೋರಾತ್ರಿ ಪಟ್ಟಣ ಪಂಚಾಯತ್ ಸದಸ್ಯನ ಅಪಹರಣ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರಿನ ಚೌಕಿಮಠ ಬಳಿ ಘಟನೆ ನಡೆದಿದೆ.
ಕಿತ್ತೂರು ಪಟ್ಟಣ ಪಂ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಿಗದಿ ಆಗಿತ್ತು. ಬಿಜೆಪಿ ಸದಸ್ಯ ನಾಗರಾಜ್ ಅಸುಂಡಿ ಎಂಬಾತನನ್ನು ಕಾಂಗ್ರೆಸ್ ಸದಸ್ಯರು ಕಿಡ್ನ್ಯಾಪ್ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸದ್ಯ ಈ ಸಂಬಂಧ ಅಶೋಕ್ ಮಾಳಗಿ, ಬಸವರಾಜ್ ಸಂಗೊಳ್ಳಿ, ಸುರೇಶ ಕಡೆಮನಿ ಎಂಬುವವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಈ ಮೂವರು ಸೇರಿ ನನ್ನ ಮಗನನ್ನು ಕಿಡ್ನ್ಯಾಪ್ ಮಾಡಿದ್ದಾರೆಂದು ನಾಗರಾಜ್ ತಂದೆ ಬಸವರಾಜ್ ಅಸುಂಡಿ ಕಿತ್ತೂರು ಠಾಣೆಗೆ ದೂರು ನೀಡಿದ್ದಾರೆ. ಸೆಪ್ಟಂಬರ್ 3 ರಂದು ಕಿತ್ತೂರು ಪಟ್ಟಣ ಪಂ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಚುನಾವಣೆ ನಿಗದಿಯಾಗಿತ್ತು.
ಕಿತ್ತೂರು ಪಟ್ಟಣ ಪಂಚಾಯತ್ ಬಿಜೆಪಿಯ 9 ಹಾಗೂ ಕಾಂಗ್ರೇಸ್ ನ 5 ಪಕ್ಷೇತರ 4 ಸದಸ್ಯರ ಬಲ ಹೊಂದಿದೆ. ಈ ವೇಳೆ ಬಿಜೆಪಿ ಸದಸ್ಯನ ಕಿಡ್ನ್ಯಾಪ್ ಮಾಡಿ ಕಾಂಗ್ರೆಸ್ ಸದಸ್ಯರು ಅಧ್ಯಕ್ಷ ಸ್ಥಾನಕ್ಕೇರುವ ಪ್ಲಾನ್ ಮಾಡಿದ್ದರು. ಸದ್ಯ ನಾಗರಾಜ್ನನ್ನು ಅಪಹರಿಸಿ ಅಜ್ಞಾತ ಸ್ಥಳದಲ್ಲಿ ಇರಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೂರು ದಾಖಲಾಗುತ್ತಿದ್ದಂತೆ ಅಲರ್ಟ್ ಆದ ಬೆಳಗಾವಿ ಪೊಲೀಸರು ಕಿಡ್ನ್ಯಾಪ್ ಮಾಡಿದವರಿಗೆ ತಲಾಶ್ ನಡೆಸಲು ಬೆಳಗಾವಿ ಎಸ್ಪಿ ಡಾ.ಭೀಮಾಶಂಕರ್ ಗುಳೇದ ಅವರು ಮೂರು ತಂಡಗಳ ರಚನೆ ಮಾಡಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಬಿಜೆಪಿಯ ಕಾರ್ಯಕರ್ತರು ತಡರಾತ್ರಿಯೇ ಕಿತ್ತೂರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಮಾಹಿತಿ ನೀಡಿದ್ದು, ಬಿಜೆಪಿ ಸದಸ್ಯರೊಬ್ಬರ ಅಪಹರಣ ಸಂಬಂಧ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A BJP member of the Town Panchayat, Nagaraj Asundi, was kidnapped from the town on Thursday night in the wake of election for the posts of president and vice president to be held on September 3.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
22-12-25 12:26 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
22-12-25 01:06 pm
Udupi Correspondent
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm