ಬ್ರೇಕಿಂಗ್ ನ್ಯೂಸ್
30-08-24 09:35 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 30: ನಗರದ ಲಾಲ್ ಬಾಗ್ ಬಳಿಯ ಬಾರ್ ಒಂದರಲ್ಲಿ ಇಬ್ಬರು ಸ್ನೇಹಿತರ ಜೊತೆಗೆ ಬಂದಿದ್ದ ಯುವತಿ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಕೈಮಾಡಿದ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾಕಾಳಿ ಪಡ್ಪು ನಿವಾಸಿಯಾದ 26 ವರ್ಷದ ಯುವತಿ ತನ್ನ ಸ್ನೇಹಿತರ ಜೊತೆಗೆ ಲಾಲ್ ಬಾಗ್ ಫುಡ್ ಲ್ಯಾಂಡ್ ಬಾರ್ ಗೆ ಬಂದಿದ್ದಳು. ರಾತ್ರಿ 11.30ರ ಸುಮಾರಿಗೆ ಈಕೆ ಅಲ್ಲಿನ ಲೇಡಿಸ್ ವಾಷ್ ರೂಮ್ ಹೋಗಿದ್ದಾಗ, ಅಪರಿಚಿತ ವ್ಯಕ್ತಿಯೊಬ್ಬ ಅಲ್ಲಿರುವುದನ್ನು ನೋಡಿ, ಲೇಡಿಸ್ ಟಾಯ್ಲೆಟಲ್ಲಿ ಗಂಡಸರು ಏನು ಮಾಡ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾಳೆ. ಆನಂತರ, ಬಾರ್ ಕ್ಯಾಶಿಯರ್ ಬಳಿಯೂ ದೂರು ಹೇಳಿಕೊಂಡಿದ್ದಾಳೆ.
ಆಕೆಯ ಜೊತೆಗೆ ರಮಿತ್ ಪೂಜಾರಿ ಮತ್ತು ಹಮೀದ್ ಎಂಬ ಇಬ್ಬರು ಯುವಕರು ಇದ್ದರು. ಆನಂತರ, ಬಾರ್ ಹೊರಗಡೆ ಬಂದು ತಮ್ಮ ಕಾರಿನಲ್ಲಿ ಕುಳಿತು ಹಿಂದೆ ತೆಗೆಯುತ್ತಿದ್ದಾಗ, ಹಿಂಬದಿ ಬುಲೆಟ್ ಬೈಕಿನಲ್ಲಿ ಬಂದಿದ್ದ ವ್ಯಕ್ತಿಯ ಜೊತೆಗೂ ಕಿರಿಕ್ ಆಗಿದೆ. ಈ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ತನ್ನ ಮೇಲೆ ಕೈಮಾಡಿದ್ದಾನೆಂದು ಆಕೆ ಬರ್ಕೆ ಠಾಣೆಗೆ ದೂರು ನೀಡಿದ್ದಾಳೆ. ಆಗಸ್ಟ್ 25ರಂದು ತಡರಾತ್ರಿ ಘಟನೆ ನಡೆದಿದ್ದು, ಯುವತಿ ದೂರಿನಂತೆ ಪೊಲೀಸರು ಮಾನಭಂಗ, ಜೀವ ಬೆದರಿಕೆ ಸೇರಿ ವಿವಿಧ ಸೆಕ್ಷನ್ ಆಧರಿಸಿ ಪ್ರಕರಣ ದಾಖಲಿಸಿದ್ದಾರೆ.
ಎರಡೂ ಕಡೆಯವರು ಕುಡಿದ ಮತ್ತಿನಲ್ಲಿದ್ದು, ಘಟನಾ ಸ್ಥಳದ ಸಿಸಿಟಿವಿ ದೃಶ್ಯ ನೋಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ತನ್ನ ಮೇಲೆ ಹಲ್ಲೆಯಾಗಿದೆ ಎಂದು ಯುವತಿ ಆರೋಪಿಸುತ್ತಿದ್ದು, ಘಟನೆ ಸಂದರ್ಭ ಕಾರಿನ ಹಿಂಬದಿ ನಿಂತಿದ್ದ ಯುವಕನೊಬ್ಬನ ಫೋಟೋ ತೆಗೆದು ಅದನ್ನು ಮಾಧ್ಯಮಕ್ಕೆ ನೀಡಲಾಗಿದೆ. ಯುವತಿಯೂ ಕುಡಿದ ಮತ್ತಿನಲ್ಲಿ ಕಿರಿಕ್ ಮಾಡಿದ್ದಾಳೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Young girl alleges of harassment by unknown person, case booked at barke police station in Mangalore. The incident allegedly occurred on August 25 when the girl visited the hotel with a close friend.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm