ಬ್ರೇಕಿಂಗ್ ನ್ಯೂಸ್
01-09-24 11:07 pm Mangalore Correspondent ಕ್ರೈಂ
ಮಂಗಳೂರು, ಸೆ.1: ಎರಡೂವರೆ ವರ್ಷದ ಹೆಣ್ಣು ಮಗುವನ್ನು ಅಪಹರಿಸಿ ರೈಲಿನ ಮೂಲಕ ಕೇರಳಕ್ಕೆ ಒಯ್ಯಲು ಯತ್ನಿಸಿದ ಘಟನೆ ನಡೆದಿದ್ದು ದೂರು ಬಂದ ಎರಡೇ ಗಂಟೆಯೊಳಗೆ ಆರೋಪಿಯನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ.
ಕಂಕನಾಡಿ ಠಾಣಾ ವ್ಯಾಪ್ತಿಯ ಅಳಪೆ ಪಡೀಲ್ ಅರಣ್ಯ ಇಲಾಖೆಯ ಸಸ್ಯವನದಲ್ಲಿ ಕೆಲಸ ಮಾಡಿಕೊಂಡಿದ್ದ ಕೂಲಿ ಕಾರ್ಮಿಕರ ಎರಡೂವರೆ ವರ್ಷದ ಹೆಣ್ಣು ಮಗು ಆಗಸ್ಟ್ 31 ರಂದು ಸಂಜೆ 4.30 ಗಂಟೆಗೆ ಕಾಣೆಯಾಗಿದ್ದು, ಎಲ್ಲ ಕಡೆ ಹುಡುಕಾಡಿ ಸಂಜೆ 7.30 ಗಂಟೆಗೆ ಠಾಣೆಗೆ ಮಾಹಿತಿ ನೀಡಿದ್ದರು. ತಕ್ಷಣ ಕಾರ್ಯ ಪ್ರವೃತ್ತರಾದ ಕಂಕನಾಡಿ ನಗರ ಪೊಲೀಸರು ಎಲ್ಲ ಕಡೆ ಮಾಹಿತಿ ನೀಡಿ, ರೈಲ್ವೇ ಜಂಕ್ಷನ್ ಗೆ ಭೇಟಿ ನೀಡಿ ಸಿಸಿಟಿವಿ ಫೂಟೇಜ್ ಆಧಾರದಲ್ಲಿ ವೃದ್ಧನೋರ್ವ ಮಗುವೊಂದನ್ನು ರೈಲಿನಲ್ಲಿ ಕರೆದುಕೊಂಡು ಹೋಗುತ್ತಿರುವುದನ್ನು ಗಮನಿಸಿದ್ದರು. ಕೇರಳ ಕಡೆಗೆ ಹೋಗುತ್ತಿದ್ದ ರೈಲಿನ ಬಗ್ಗೆ ಕಾಸರಗೋಡು ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿ ಮಗುವಿನೊಂದಿಗೆ ವೃದ್ಧನನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.
ಕಂಕನಾಡಿ ಪೊಲೀಸ್ ನಿರೀಕ್ಷಕರ ತಂಡದ ಪಿ.ಎಸ್.ಐ.ಶಿವಕುಮಾರ್ ಮತ್ತು ಸಿಬ್ಬಂದಿಗಳು ರೈಲ್ವೇ ಪೊಲೀಸರಿಂದ ರಾತ್ರಿ 9.30 ಗಂಟೆಗೆ ವಶಕ್ಕೆ ಪಡೆದು ಹೆತ್ತವರಿಗೆ ಮಗುವನ್ನು ರಾತ್ರಿಯೇ ಒಪ್ಪಿಸಿರುತ್ತಾರೆ. ಆರೋಪಿಯನ್ನು ಎರ್ನಾಕುಲಂ ಜಿಲ್ಲೆಯ ಪರವೂರ್ ನಿವಾಸಿ ಅನೀಶ್ ಕುಮಾರ್ (49) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಗಲಾಟೆ ಮಾಡಿಕೊಂಡು ಮುಂಬೈಗೆ ತಾಯಿ ಬಳಿ ಹೋಗಿ ವಾಪಸ್ಸು ರೈಲಿನಲ್ಲಿ ಮಂಗಳೂರಿಗೆ ಬಂದಿದ್ದ ಆರೋಪಿ, ಪಡೀಲ್ ಸಸ್ಯವನ ಮುಂಭಾಗದ ರಸ್ತೆಯಲ್ಲಿ ಬರುತ್ತಿರುವಾಗ ರಸ್ತೆಯಲ್ಲಿ ಆಟವಾಡಿಕೊಂಡಿದ್ದ ಮಗುವನ್ನು ನೋಡಿದ್ದು, ತನಗೂ 3 ಗಂಡು ಮಕ್ಕಳಿದ್ದು, ಹೆಣ್ಣು ಮಗು ಸಾಕಬೇಕೆಂಬ ಉದ್ದೇಶದಿಂದ ಕರೆದುಕೊಂಡು ಹೋಗಿರುವುದಾಗಿ ತನಿಖೆಯಲ್ಲಿ ಪೊಲೀಸರಿಗೆ ತಿಳಿಸಿದ್ದಾನೆ.
ಕಂಕನಾಡಿ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ನೇತೃತ್ವದಲ್ಲಿ ಪಿಎಸೈ ಶಿವಕುಮಾರ್, ಎಎಸ್ಐ ಅಶೋಕ್, ಸಿಬ್ಬಂದಿಗಳಾದ ಆಶಿತ್ ಡಿಸೋಜ, ಕುಶಾಲ್ ಹೆಗ್ಡೆ, ರಾಘವೇಂದ್ರ, ಪೂಜಾ ರವರು ಮಾಹಿತಿ ಬಂದ ಎರಡು ಗಂಟೆಯೊಳಗೆ ಯಶಸ್ವಿ ಕಾರ್ಯಾಚರಣೆ ನಡೆಸಿದ್ದು ಸಾರ್ವಜನಿಕರ ಶ್ಲಾಘನೆಗೆ ಪಾತ್ರವಾಗಿದೆ.
In a swift operation, the Kankanady town police cracked a kidnapping case within two hours after a two-and-a-half-year-old child was abducted near the Botanical Garden of the Forest Department in Alape of Padil in city. The incident occurred on the evening of August 31.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
22-12-25 12:26 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am