ಬ್ರೇಕಿಂಗ್ ನ್ಯೂಸ್
02-09-24 12:56 pm Mangalore Correspondent ಕ್ರೈಂ
ಪುತ್ತೂರು, ಸೆ.2: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿ ಮಹಿಳೆಯೊಬ್ಬರು ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. 47 ವರ್ಷದ ಮಹಿಳೆ ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
2023 ರ ಜೂನ್ ತಿಂಗಳಲ್ಲಿ ಬೆಂಗಳೂರಿನ ಪೈ ವಿಸ್ತಾ ಹೋಟೆಲ್ ನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ಆರೋಪಿಸಲಾಗಿದೆ. ದೌರ್ಜನ್ಯ ಎಸಗಿರುವ ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡಿದ್ದಾರೆಂದು ದೂರಿನಲ್ಲಿ ಹೇಳಿದ್ದು IPC 417, 354A, 506 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ವಿಧಾನಸಭಾ ಚುನಾವಣೆ ಸಂದರ್ಭ ಬಿಜೆಪಿ ವಿರುದ್ಧ ರೆಬೆಲ್ ಆಗಿದ್ದ ಅರುಣ್ ಕುಮಾರ್ ಪುತ್ತಿಲ, ಪುತ್ತೂರಿನಲ್ಲಿ ಸ್ಪರ್ಧಿಸಿ ಬಿಜೆಪಿಯನ್ನು ಮೂರನೇ ಸ್ಥಾನಕ್ಕೆ ತಳ್ಳಿದ್ದರು. ಇದು ಬಿಜೆಪಿಗೆ ತೀವ್ರ ಮುಖಭಂಗ ಆಗಿತ್ತು. ಬಿಜೆಪಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಹಿಂದುತ್ವದ ಹೆಸರಿನಲ್ಲಿ ಅರುಣ್ ಪುತ್ತಿಲ ಬಂಡಾಯ ಸ್ಪರ್ಧಿಸಿದ್ದರಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ ಆಗಿತ್ತು.
ಪುತ್ತಿಲ ಅಭಿಮಾನಿಯಾಗಿ ಜಾಲತಾಣದಲ್ಲಿ ಫಾಲೋ ಮಾಡಿದ್ದೆ ಎಂದಿರುವ ಮಹಿಳೆ ತನ್ನ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಕೇಸು ದಾಖಲಾದ ಬಗ್ಗೆ ಅರುಣ್ ಪುತ್ತಿಲ ಪ್ರತಿಕ್ರಿಯೆ ನೀಡಿದ್ದು ರಾಜಕೀಯ ಪ್ರೇರಿತ ಸುಳ್ಳು ದೂರು ಎಂದಿದ್ದಾರೆ. ಅಸೆಂಬ್ಲಿ ಚುನಾವಣೆ ಸಂದರ್ಭದಲ್ಲಿ ಬಂಡಾಯ ಸಾರಿದ್ದ ಅರುಣ್ ಪುತ್ತಿಲ, ಲೋಕಸಭೆ ಚುನಾವಣೆ ವೇಳೆಗೆ ಬಿಜೆಪಿ ಸೇರಿದ್ದರು. ಅವರ ಬಿಜೆಪಿ ಸೇರ್ಪಡೆಗೆ ಪುತ್ತೂರಿನಲ್ಲಿ ಬಿಜೆಪಿ ನಾಯಕರೇ ವಿರೋಧಿಸಿದ್ದರು. ಅಲ್ಲದೆ, ಈ ಹಿಂದಿನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಬೆಂಬಲಿಗರು ವಿರೋಧ ಹೊಂದಿದ್ದರು. ಹೀಗಾಗಿ ಪುತ್ತೂರಿನಲ್ಲಿ ಬಿಜೆಪಿ ಒಡೆದ ಮನೆಯಾಗಿದ್ದು ಅರುಣ್ ಪುತ್ತಿಲ ವಿರುದ್ಧ ಸ್ವಪಕ್ಷೀಯರೇ ಪಿತೂರಿ ನಡೆಸಿದ್ದಾರೆ ಎನ್ನಲಾಗುತ್ತಿದೆ.
A sexual harassment case has been registered against Karnataka BJP leader Arun Kumar Puthila based on a complaint by a 47-year-old woman, police said. In her complaint, the woman alleges that the BJP leader sexually assaulted her at a Bengaluru hotel in June 2023. He took photos, selfies, and videos during the alleged assault and used them to blackmail her, the woman claimed.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 06:38 pm
Mangalore Correspondent
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
Mangalore DC Mullai Muhilan Transferred, Dars...
17-06-25 09:57 pm
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm