ಬ್ರೇಕಿಂಗ್ ನ್ಯೂಸ್
02-09-24 02:11 pm Bangalore Correspondent ಕ್ರೈಂ
ಬೆಂಗಳೂರು, ಸೆ 02: ತಲ್ವಾರ್ ಹಿಡಿದು ಡೆಲಿವರಿ ಬಾಯ್ಗಳನ್ನು ಬೆದರಿಸಿ, ರಾಬರಿ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಜೀವನ್ ಭೀಮಾ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೆಚ್ಎಎಲ್ನ ವಿಭೂತಿಪುರದ ಭರತ್, ವಿಘ್ನೇಶ್ ಹಾಗೂ ಜೋಯಲ್ ಅಭಿಷೇಕ್ ಬಂಧಿತರು.
ವಿವಿಧ ಕಂಪನಿಗಳ ಡೆಲಿವರಿ ಬಾಯ್ಗಳನ್ನು ಟಾರ್ಗೆಟ್ ಮಾಡುತ್ತಿದ್ದ ಆರೋಪಿಗಳು, ತಲ್ವಾರ್ ಹಿಡಿದು ಅಡ್ಡಗಟ್ಟುತ್ತಿದ್ದರು. ಬಳಿಕ ಬೆದರಿಸಿ ಅವರ ಬಳಿಯಿರುವ ಊಟ, ತಿಂಡಿ, ವಸ್ತುಗಳು, ದ್ವಿಚಕ್ರ ವಾಹನವನ್ನು ದೋಚಿಕೊಂಡು ಪರಾರಿಯಾಗುತ್ತಿದ್ದರು. ಇದೇ ರೀತಿ ಆಗಸ್ಟ್ 4 ಮತ್ತು 21ರಂದು ಹೆಚ್ಎಎಲ್ನ ಕೋನೇನ ಅಗ್ರಹಾರದಲ್ಲಿ ತಲ್ವಾರ್ ಹಿಡಿದು ಡೆಲಿವರಿ ಬಾಯ್ಗಳನ್ನು ದೋಚಿದ್ದ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಜೀವನ ಭೀಮಾ ನಗರ ಠಾಣೆ ಪೊಲೀಸರು, ಮೊದಲು ಡೆಲಿವರಿ ಬಾಯ್ನನ್ನು ಪತ್ತೆ ಹಚ್ಚಿದ್ದರು. ಆತನಿಂದ ದೂರು ಪಡೆದು, ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳು ಮಾರತ್ತಹಳ್ಳಿ, ಕೆ.ಆರ್.ಪುರಂ ಸೇರಿದಂತೆ ಹಲವು ಕಡೆಗಳಲ್ಲಿ ತಲ್ವಾರ್ ತೋರಿಸಿ ದೋಚಿರುವುದು ವಿಚಾರಣೆ ವೇಳೆ ತಿಳಿದು ಬಂದಿದೆ. ಬಂಧಿತರಿಂದ ನಾಲ್ಕು ದ್ವಿಚಕ್ರ ವಾಹನಗಳು, ತಲ್ವಾರ್ ವಶಕ್ಕೆ ಪಡೆಯಲಾಗಿದೆ. ಪ್ರಕರಣದ ಮತ್ತೋರ್ವ ಆರೋಪಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Three arrested for attack over delivery boys and robbery in Bangalore. The gang will attack the delivery boy steal the food with the bike.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am