ಬ್ರೇಕಿಂಗ್ ನ್ಯೂಸ್
02-09-24 02:11 pm Bangalore Correspondent ಕ್ರೈಂ
ಬೆಂಗಳೂರು, ಸೆ 02: ತಲ್ವಾರ್ ಹಿಡಿದು ಡೆಲಿವರಿ ಬಾಯ್ಗಳನ್ನು ಬೆದರಿಸಿ, ರಾಬರಿ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಜೀವನ್ ಭೀಮಾ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೆಚ್ಎಎಲ್ನ ವಿಭೂತಿಪುರದ ಭರತ್, ವಿಘ್ನೇಶ್ ಹಾಗೂ ಜೋಯಲ್ ಅಭಿಷೇಕ್ ಬಂಧಿತರು.
ವಿವಿಧ ಕಂಪನಿಗಳ ಡೆಲಿವರಿ ಬಾಯ್ಗಳನ್ನು ಟಾರ್ಗೆಟ್ ಮಾಡುತ್ತಿದ್ದ ಆರೋಪಿಗಳು, ತಲ್ವಾರ್ ಹಿಡಿದು ಅಡ್ಡಗಟ್ಟುತ್ತಿದ್ದರು. ಬಳಿಕ ಬೆದರಿಸಿ ಅವರ ಬಳಿಯಿರುವ ಊಟ, ತಿಂಡಿ, ವಸ್ತುಗಳು, ದ್ವಿಚಕ್ರ ವಾಹನವನ್ನು ದೋಚಿಕೊಂಡು ಪರಾರಿಯಾಗುತ್ತಿದ್ದರು. ಇದೇ ರೀತಿ ಆಗಸ್ಟ್ 4 ಮತ್ತು 21ರಂದು ಹೆಚ್ಎಎಲ್ನ ಕೋನೇನ ಅಗ್ರಹಾರದಲ್ಲಿ ತಲ್ವಾರ್ ಹಿಡಿದು ಡೆಲಿವರಿ ಬಾಯ್ಗಳನ್ನು ದೋಚಿದ್ದ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಜೀವನ ಭೀಮಾ ನಗರ ಠಾಣೆ ಪೊಲೀಸರು, ಮೊದಲು ಡೆಲಿವರಿ ಬಾಯ್ನನ್ನು ಪತ್ತೆ ಹಚ್ಚಿದ್ದರು. ಆತನಿಂದ ದೂರು ಪಡೆದು, ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳು ಮಾರತ್ತಹಳ್ಳಿ, ಕೆ.ಆರ್.ಪುರಂ ಸೇರಿದಂತೆ ಹಲವು ಕಡೆಗಳಲ್ಲಿ ತಲ್ವಾರ್ ತೋರಿಸಿ ದೋಚಿರುವುದು ವಿಚಾರಣೆ ವೇಳೆ ತಿಳಿದು ಬಂದಿದೆ. ಬಂಧಿತರಿಂದ ನಾಲ್ಕು ದ್ವಿಚಕ್ರ ವಾಹನಗಳು, ತಲ್ವಾರ್ ವಶಕ್ಕೆ ಪಡೆಯಲಾಗಿದೆ. ಪ್ರಕರಣದ ಮತ್ತೋರ್ವ ಆರೋಪಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Three arrested for attack over delivery boys and robbery in Bangalore. The gang will attack the delivery boy steal the food with the bike.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 06:38 pm
Mangalore Correspondent
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
Mangalore DC Mullai Muhilan Transferred, Dars...
17-06-25 09:57 pm
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm