ಬ್ರೇಕಿಂಗ್ ನ್ಯೂಸ್
03-09-24 08:40 pm Udupi Correspondent ಕ್ರೈಂ
ಉಡುಪಿ, ಸೆ.3: ರಾಮಮಂದಿರ ಮತ್ತು ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಲ್ಲದೇ ಇಸ್ಲಾಂಗೆ ಮತಾಂತರವಾಗುವಂತೆ ಗೆಳತಿಗೆ ಕಿರುಕುಳ ನೀಡಿದ ಆರೋಪದಲ್ಲಿ ವೈದ್ಯಕೀಯ ವಿದ್ಯಾರ್ಥಿಯೊಬ್ಬನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು 27 ವರ್ಷದ ಮಹಮ್ಮದ್ ಡ್ಯಾನಿಷ್ ಖಾನ್ ಎಂದು ಗುರುತಿಸಲಾಗಿದ್ದು ಆತನ ವಿರುದ್ಧ ಉಡುಪಿ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸಹಪಾಠಿ ಯುವತಿ ನೀಡಿದ ದೂರಿನ ಮೇರೆಗೆ ಡ್ಯಾನಿಷ್ ಖಾನ್ ನನ್ನು ಬಂಧಿಸಲಾಗಿದೆ. ಪೊಲೀಸರ ಪ್ರಕಾರ, ಡ್ಯಾನಿಶ್ ಖಾನ್ ಉಡುಪಿಯ ಪ್ರತಿಷ್ಠಿತ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದ. ಅಲ್ಲಿ ತನ್ನ ಸಹಪಾಠಿಯೊಂದಿಗೆ ಸ್ನೇಹ ಬೆಳೆಸಿದ್ದು ಇಬ್ಬರೂ ಡೇಟಿಂಗ್ ಮಾಡಲು ಪ್ರಾರಂಭಿಸಿದ್ದರು.
ವಿದ್ಯಾರ್ಥಿನಿ ನೀಡಿದ ದೂರಿನ ಪ್ರಕಾರ, ಜನವರಿ 22ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ವೇಳೆ ಡ್ಯಾನಿಶ್ ಖಾನ್ ರಾಮಮಂದಿರ ಮತ್ತು ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಸಿದ್ದಾನೆ. ಅಷ್ಟೇ ಅಲ್ಲದೆ ಮಾರ್ಚ್ 11ರಂದು ಯುವತಿ ಇದ್ದ ರೂಮಿಗೆ ನುಗ್ಗಿ ಮದುವೆ ಆಗುವಂತೆ ಒತ್ತಾಯಿಸಿದ್ದಲ್ಲದೆ ಬಲವಂತವಾಗಿ ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ್ದ ಎಂದು ಉಲ್ಲೇಖಿಸಲಾಗಿದೆ.
ಮದುವೆ ಪ್ರಸ್ತಾಪವನ್ನು ಯುವತಿ ತಿರಸ್ಕರಿಸಿದ್ದಕ್ಕೆ ಡ್ಯಾನಿಷ್ ಖಾನ್ ಗೆಳತಿಯ ಕಪಾಳಕ್ಕೆ ಹೊಡೆದಿದ್ದಾನೆ. ಅಲ್ಲದೆ ತನ್ನ ದೇಹವನ್ನು ಮುಟ್ಟುವ ಮೂಲಕ ಅನುಚಿತವಾಗಿ ವರ್ತಿಸಿದ್ದಾನೆ. ಪದೇ ಪದೇ ವಿರೋಧಿಸಿದರೂ ಆರೋಪಿ ತನ್ನ ಖಾಸಗಿ ಅಂಗಗಳನ್ನು ಮುಟ್ಟಿದ್ದಾನೆ ಎಂದು ಪೊಲೀಸರಿಗೆ ತಿಳಿಸಿದ್ದಾಳೆ. ಆ ಘಟನೆಯ ನಂತರ ಡ್ಯಾನಿಶ್ ಖಾನ್ ತನಗೆ ಫೋನ್ ಮಾಡಿ ಕಿರುಕುಳ ನೀಡಲಾರಂಭಿಸಿದ್ದ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಕೊನೆಗೆ ಒತ್ತಡ ತಡೆದುಕೊಳ್ಳಲಾಗದೆ ಆಗಸ್ಟ್ 31ರಂದು ಪೊಲೀಸರಿಗೆ ದೂರು ನೀಡಿದ್ದಾಳೆ.
ಮಹಿಳೆ ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಡ್ಯಾನಿಷ್ ಖಾನ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Forced Conversion in Karnataka, Dr Mohammed Danish Khan arrested for forcing medical student to convert to Islam in Udupi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm