ಬ್ರೇಕಿಂಗ್ ನ್ಯೂಸ್
03-09-24 08:40 pm Udupi Correspondent ಕ್ರೈಂ
ಉಡುಪಿ, ಸೆ.3: ರಾಮಮಂದಿರ ಮತ್ತು ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಲ್ಲದೇ ಇಸ್ಲಾಂಗೆ ಮತಾಂತರವಾಗುವಂತೆ ಗೆಳತಿಗೆ ಕಿರುಕುಳ ನೀಡಿದ ಆರೋಪದಲ್ಲಿ ವೈದ್ಯಕೀಯ ವಿದ್ಯಾರ್ಥಿಯೊಬ್ಬನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು 27 ವರ್ಷದ ಮಹಮ್ಮದ್ ಡ್ಯಾನಿಷ್ ಖಾನ್ ಎಂದು ಗುರುತಿಸಲಾಗಿದ್ದು ಆತನ ವಿರುದ್ಧ ಉಡುಪಿ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸಹಪಾಠಿ ಯುವತಿ ನೀಡಿದ ದೂರಿನ ಮೇರೆಗೆ ಡ್ಯಾನಿಷ್ ಖಾನ್ ನನ್ನು ಬಂಧಿಸಲಾಗಿದೆ. ಪೊಲೀಸರ ಪ್ರಕಾರ, ಡ್ಯಾನಿಶ್ ಖಾನ್ ಉಡುಪಿಯ ಪ್ರತಿಷ್ಠಿತ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದ. ಅಲ್ಲಿ ತನ್ನ ಸಹಪಾಠಿಯೊಂದಿಗೆ ಸ್ನೇಹ ಬೆಳೆಸಿದ್ದು ಇಬ್ಬರೂ ಡೇಟಿಂಗ್ ಮಾಡಲು ಪ್ರಾರಂಭಿಸಿದ್ದರು.
ವಿದ್ಯಾರ್ಥಿನಿ ನೀಡಿದ ದೂರಿನ ಪ್ರಕಾರ, ಜನವರಿ 22ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ವೇಳೆ ಡ್ಯಾನಿಶ್ ಖಾನ್ ರಾಮಮಂದಿರ ಮತ್ತು ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಸಿದ್ದಾನೆ. ಅಷ್ಟೇ ಅಲ್ಲದೆ ಮಾರ್ಚ್ 11ರಂದು ಯುವತಿ ಇದ್ದ ರೂಮಿಗೆ ನುಗ್ಗಿ ಮದುವೆ ಆಗುವಂತೆ ಒತ್ತಾಯಿಸಿದ್ದಲ್ಲದೆ ಬಲವಂತವಾಗಿ ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ್ದ ಎಂದು ಉಲ್ಲೇಖಿಸಲಾಗಿದೆ.
ಮದುವೆ ಪ್ರಸ್ತಾಪವನ್ನು ಯುವತಿ ತಿರಸ್ಕರಿಸಿದ್ದಕ್ಕೆ ಡ್ಯಾನಿಷ್ ಖಾನ್ ಗೆಳತಿಯ ಕಪಾಳಕ್ಕೆ ಹೊಡೆದಿದ್ದಾನೆ. ಅಲ್ಲದೆ ತನ್ನ ದೇಹವನ್ನು ಮುಟ್ಟುವ ಮೂಲಕ ಅನುಚಿತವಾಗಿ ವರ್ತಿಸಿದ್ದಾನೆ. ಪದೇ ಪದೇ ವಿರೋಧಿಸಿದರೂ ಆರೋಪಿ ತನ್ನ ಖಾಸಗಿ ಅಂಗಗಳನ್ನು ಮುಟ್ಟಿದ್ದಾನೆ ಎಂದು ಪೊಲೀಸರಿಗೆ ತಿಳಿಸಿದ್ದಾಳೆ. ಆ ಘಟನೆಯ ನಂತರ ಡ್ಯಾನಿಶ್ ಖಾನ್ ತನಗೆ ಫೋನ್ ಮಾಡಿ ಕಿರುಕುಳ ನೀಡಲಾರಂಭಿಸಿದ್ದ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಕೊನೆಗೆ ಒತ್ತಡ ತಡೆದುಕೊಳ್ಳಲಾಗದೆ ಆಗಸ್ಟ್ 31ರಂದು ಪೊಲೀಸರಿಗೆ ದೂರು ನೀಡಿದ್ದಾಳೆ.
ಮಹಿಳೆ ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಡ್ಯಾನಿಷ್ ಖಾನ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Forced Conversion in Karnataka, Dr Mohammed Danish Khan arrested for forcing medical student to convert to Islam in Udupi.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
21-12-25 11:04 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am