ಬ್ರೇಕಿಂಗ್ ನ್ಯೂಸ್
04-09-24 06:33 pm Mangalore Correspondent ಕ್ರೈಂ
ಬೆಳ್ತಂಗಡಿ, ಸೆ.4: ನಡುರಾತ್ರಿಯಲ್ಲಿ ಗೆಳತಿ ಮನೆಗೆ ಹೋಗಿದ್ದ ವ್ಯಕ್ತಿಯೊಬ್ಬನನ್ನು ಅಡ್ಡಗಟ್ಟಿ ವಿಡಿಯೋ ಮಾಡಿ, ಎರಡು ಲಕ್ಷ ಹಣಕ್ಕಾಗಿ ಪೀಡಿಸಿದ ಘಟನೆ ನಡೆದಿದ್ದು ಪ್ರಕರಣದಲ್ಲಿ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಮುರಿಯಾಳ ಮನೆ ನಿವಾಸಿ ಸಂಶು ಯಾನೆ ಸಂಶುದ್ದೀನ್ (38) ಬಂಧಿತ ಆರೋಪಿ. ಪುತ್ತೂರಿನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿ ಯುವಕನೊಬ್ಬ ಆಗಸ್ಟ್ 31 ರಂದು ಬೆಳ್ತಂಗಡಿಯ ಕರಾಯದ ಮಸೀದಿ ಬಳಿ ತನ್ನ ಬೈಕ್ ನಿಲ್ಲಿಸಿ ಗೆಳತಿ ಮನೆಗೆ ಹೋಗಿದ್ದರು. ನಸುಕಿನ ವೇಳೆ ತನ್ನ ಮನೆಗೆ ಹಿಂದಿರುಗುವ ಸಲುವಾಗಿ ಬೈಕಿನ ಬಳಿಗೆ ಬಂದಾಗ, ಸಂಶುದ್ದೀನ್ ಮತ್ತಾತನ ಸಂಗಡಿಗರು ವಿಡಿಯೋ ಚಿತ್ರೀಕರಣ ಮಾಡುತ್ತಾ ಪ್ರಶ್ನೆ ಮಾಡಿದ್ದಾರೆ.
ಬಳಿಕ ಸಮೀಪದ ಅಂಗಡಿ ಬಳಿಗೆ ಕರೆದೊಯ್ದು ನೀನು ಯಾರು ? ಯಾಕೆ ಇಲ್ಲಿಗೆ ಬಂದದ್ದು? ದರೋಡೆ ಮಾಡಲು ಬಂದಿದ್ದಾ? ಇಲ್ಲಿ ಮೊದಲು ಆಗಿದ್ದ ದರೋಡೆಯನ್ನು ನೀನೇ ಮಾಡಿದ್ದಾ ಎಂದೆಲ್ಲಾ ಪ್ರಶ್ನಿಸಿದ್ದಾರೆ. ತಾನು ದರೋಡೆಗೆ ಬಂದವನಲ್ಲ ಎಂದು ತಿಳಿಸಿದರೂ ಕೇಳದೆ, ನಾವು ಜನ ಮಾಡಿ ನಿನಗೆ ಹೊಡೆಯುತ್ತೇವೆ. ದರೋಡೆ ಮಾಡಲು ಯತ್ನಿಸಿದ್ದಾಗಿ ಪೊಲೀಸ್ ಇಲಾಖೆಗೆ ದೂರು ನೀಡುತ್ತೇವೆ ಎಂದೆಲ್ಲಾ ಬೆದರಿಸಿದ್ದಾರೆ. ನೀನು 2 ಲಕ್ಷ ಹಣ ಕೊಟ್ಟರೆ, ನಿನ್ನ ಮೇಲೆ ಕೇಸು ಇಲ್ಲದಾಗೆ ಮಾಡುತ್ತೇನೆ ಎಂದು ಹೇಳಿದ್ದು, ಭಯದಿಂದ ಹಣವನ್ನು ನಾಳೆ ಕೊಡುತ್ತೇನೆಂದು ಯುವಕ ತಿಳಿಸಿದ್ದ.
ಈ ವೇಳೆ ಆರೋಪಿತರು ಯುವಕನ ಕೈಯಲ್ಲಿದ್ದ ಬೈಕ್ ಕೀಯನ್ನು ಪಡೆದು ಹಣ ಕೊಟ್ಟ ಬಳಿಕ ಬೈಕ್ ತೆಗೆದುಕೊಂಡು ಹೋಗುವಂತೆ ತಿಳಿಸಿದ್ದಾರೆ. ಪೊಲೀಸರಿಗೆ ದೂರು ನೀಡಲು ಹೋದರೆ ನಿನ್ನ ಮೇಲೆ ಬೇರೆಯೇ ಕೇಸು ದಾಖಲಿಸಿ ಒಳಗೆ ಹಾಕಿಸುತ್ತೇವೆ ಎಂದು ಬೆದರಿಸಿದ್ದಾರೆ. ಆರೋಪಿ ತನ್ನ ಮೊಬೈಲ್ ನಂಬ್ರವನ್ನು ಯುವಕನಿಗೆ ನೀಡಿದ್ದು, ಆತ ನೀಡಿದ ನಂಬರಿಗೆ ಒಟ್ಟು 25 ಸಾವಿರ ರೂಪಾಯಿ ಹಣವನ್ನು ಗೂಗಲ್ ಪೇ ಮೂಲಕ ಜಮಾ ಮಾಡಿದ್ದರು. ಉಳಿಕೆ ಮೊತ್ತವಾದ 1,75,000 ರೂ.ವನ್ನು ಐದು ದಿನಗಳಲ್ಲಿ ಪಾವತಿಸಬೇಕು ಹಾಗೂ ಬೈಕ್ ದಾಖಲೆಗಳನ್ನು ಒದಗಿಸಬೇಕೆಂದು ಬೇಡಿಕೆ ಇಟ್ಟಿದ್ದ. ಇದರಿಂದ ಕಂಗೆಟ್ಟ ಸಂತ್ರಸ್ತ ಯುವಕ ಗೆಳೆಯರೊಡನೆ ಚರ್ಚಿಸಿ ಪ್ರಕರಣದ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
Youth arrested for Blackmail of girl by making video in Uppinangady.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm