ಬ್ರೇಕಿಂಗ್ ನ್ಯೂಸ್
09-12-20 05:48 pm Headline Karnataka News Network ಕ್ರೈಂ
ಕಲಬುರಗಿ, ಡಿ.9 : ಲಂಚ ಸ್ವೀಕಾರ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಕಲಬುರಗಿಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (ಸಿಆರ್ ಇ ಸೆಲ್)ದಲ್ಲಿ ಡಿವೈಎಸ್ಪಿ ಆಗಿರುವ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಜಿಲ್ಲಾ ಪ್ರಧಾನ ಹಾಗೂ ವಿಶೇಷ ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ವಿಜಯಲಕ್ಷ್ಮೀ ಶಿಕ್ಷೆಗೆ ಗುರಿಯಾದವರು. ಇವರಿಗೆ 4 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ಜಿಲ್ಲಾ ವಿಶೇಷ ಸತ್ರ ನ್ಯಾಯಾಧೀಶ ಸತೀಶ್ ಸಿಂಗ್ ಆದೇಶ ಮಾಡಿದ್ದಾರೆ.
ವಿಜಯಲಕ್ಷ್ಮಿ ಶಹಾಬಾದ್ ಠಾಣೆ ಇನ್ಸ್ ಪೆಕ್ಟರ್ ಆಗಿದ್ದ ವೇಳೆ ಲಂಚ ಸ್ವೀಕಾರ ವಿಚಾರದಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಅವರು ಕಲಬುರಗಿಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (ಸಿಆರ್ಇ ಸೆಲ್)ದಲ್ಲಿ ಡಿವೈಎಸ್ಪಿಯಾಗಿದ್ದಾರೆ.
2015ರ ಡಿಸೆಂಬರ್ ತಿಂಗಳಲ್ಲಿ ಪೆಟ್ರೋಲ್ ಬಂಕ್ ಒಂದರಲ್ಲಿ ವಾಹನಕ್ಕೆ ಡೀಸೆಲ್ ಹಾಕಿಸಲು ತೆರಳಿದಾಗ ಸಿಬ್ಬಂದಿ ಜತೆ ಜಗಳವಾಡಿದ್ದ ಆರೋಪದಲ್ಲಿ ರಾಜು ಎಂಬುವರ ವಿರುದ್ಧ ಶಹಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ರಾಜುನನ್ನು ಬಂಧಿಸಿ ಅವರ ವಾಹನವನ್ನು ಜಪ್ತಿ ಮಾಡಲಾಗಿತ್ತು. ನ್ಯಾಯಾಲಯದಿಂದ ಜಾಮೀನು ಪಡೆದು ವಾಹನ ಬಿಡಿಸಿಕೊಳ್ಳಲು ಶಹಾಬಾದ್ ಠಾಣೆಗೆ ರಾಜು ಬಂದಿದ್ದರು. ಈ ವೇಳೆ, ವಿಜಯಲಕ್ಷ್ಮೀ 25 ಸಾವಿರ ರೂ. ಬೇಡಿಕೆ ಇಟ್ಟಿದ್ದರೆನ್ನಲಾಗಿತ್ತು. ರಾಜು ಲೋಕಾಯುಕ್ತರಿಗೆ ದೂರು ನೀಡಿದ್ದರಿಂದ ದಾಳಿ ನಡೆಸಿದ್ದು ಹಣದ ಸಮೇತ ವಿಜಯಲಕ್ಷ್ಮೀ ಸಿಕ್ಕಿಬಿದ್ದಿದ್ದರು.
ಕಲಬುರಗಿ ಲೋಕಾಯುಕ್ತ ಕಚೇರಿಯಲ್ಲಿ ಪ್ರಕರಣದ ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು. ನ್ಯಾಯಾಧೀಶರು ತೀರ್ಪು ಪ್ರಕಟಿಸಿದ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರು ಡಿವೈಎಸ್ಪಿ ವಿಜಯಲಕ್ಷ್ಮೀ ಅವರನ್ನು ವಶಕ್ಕೆ ಪಡೆದು, ಕೇಂದ್ರ ಕಾರಾಗೃಹಕ್ಕೆ ಕಳುಹಿಸಿಕೊಟ್ಟಿದ್ದಾರೆ.
The District Principal and Special Session Court here on Tuesday sentenced a Deputy Superintendent of Police to four years' imprisonment and slapped a fine of Rs 10,000 for accepting a bribe.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm