ಬ್ರೇಕಿಂಗ್ ನ್ಯೂಸ್
09-12-20 05:48 pm Headline Karnataka News Network ಕ್ರೈಂ
ಕಲಬುರಗಿ, ಡಿ.9 : ಲಂಚ ಸ್ವೀಕಾರ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಕಲಬುರಗಿಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (ಸಿಆರ್ ಇ ಸೆಲ್)ದಲ್ಲಿ ಡಿವೈಎಸ್ಪಿ ಆಗಿರುವ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಜಿಲ್ಲಾ ಪ್ರಧಾನ ಹಾಗೂ ವಿಶೇಷ ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ವಿಜಯಲಕ್ಷ್ಮೀ ಶಿಕ್ಷೆಗೆ ಗುರಿಯಾದವರು. ಇವರಿಗೆ 4 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ಜಿಲ್ಲಾ ವಿಶೇಷ ಸತ್ರ ನ್ಯಾಯಾಧೀಶ ಸತೀಶ್ ಸಿಂಗ್ ಆದೇಶ ಮಾಡಿದ್ದಾರೆ.
ವಿಜಯಲಕ್ಷ್ಮಿ ಶಹಾಬಾದ್ ಠಾಣೆ ಇನ್ಸ್ ಪೆಕ್ಟರ್ ಆಗಿದ್ದ ವೇಳೆ ಲಂಚ ಸ್ವೀಕಾರ ವಿಚಾರದಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಅವರು ಕಲಬುರಗಿಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (ಸಿಆರ್ಇ ಸೆಲ್)ದಲ್ಲಿ ಡಿವೈಎಸ್ಪಿಯಾಗಿದ್ದಾರೆ.
2015ರ ಡಿಸೆಂಬರ್ ತಿಂಗಳಲ್ಲಿ ಪೆಟ್ರೋಲ್ ಬಂಕ್ ಒಂದರಲ್ಲಿ ವಾಹನಕ್ಕೆ ಡೀಸೆಲ್ ಹಾಕಿಸಲು ತೆರಳಿದಾಗ ಸಿಬ್ಬಂದಿ ಜತೆ ಜಗಳವಾಡಿದ್ದ ಆರೋಪದಲ್ಲಿ ರಾಜು ಎಂಬುವರ ವಿರುದ್ಧ ಶಹಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ರಾಜುನನ್ನು ಬಂಧಿಸಿ ಅವರ ವಾಹನವನ್ನು ಜಪ್ತಿ ಮಾಡಲಾಗಿತ್ತು. ನ್ಯಾಯಾಲಯದಿಂದ ಜಾಮೀನು ಪಡೆದು ವಾಹನ ಬಿಡಿಸಿಕೊಳ್ಳಲು ಶಹಾಬಾದ್ ಠಾಣೆಗೆ ರಾಜು ಬಂದಿದ್ದರು. ಈ ವೇಳೆ, ವಿಜಯಲಕ್ಷ್ಮೀ 25 ಸಾವಿರ ರೂ. ಬೇಡಿಕೆ ಇಟ್ಟಿದ್ದರೆನ್ನಲಾಗಿತ್ತು. ರಾಜು ಲೋಕಾಯುಕ್ತರಿಗೆ ದೂರು ನೀಡಿದ್ದರಿಂದ ದಾಳಿ ನಡೆಸಿದ್ದು ಹಣದ ಸಮೇತ ವಿಜಯಲಕ್ಷ್ಮೀ ಸಿಕ್ಕಿಬಿದ್ದಿದ್ದರು.
ಕಲಬುರಗಿ ಲೋಕಾಯುಕ್ತ ಕಚೇರಿಯಲ್ಲಿ ಪ್ರಕರಣದ ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು. ನ್ಯಾಯಾಧೀಶರು ತೀರ್ಪು ಪ್ರಕಟಿಸಿದ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರು ಡಿವೈಎಸ್ಪಿ ವಿಜಯಲಕ್ಷ್ಮೀ ಅವರನ್ನು ವಶಕ್ಕೆ ಪಡೆದು, ಕೇಂದ್ರ ಕಾರಾಗೃಹಕ್ಕೆ ಕಳುಹಿಸಿಕೊಟ್ಟಿದ್ದಾರೆ.
The District Principal and Special Session Court here on Tuesday sentenced a Deputy Superintendent of Police to four years' imprisonment and slapped a fine of Rs 10,000 for accepting a bribe.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 04:54 pm
HK News Staffer
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm