ಬ್ರೇಕಿಂಗ್ ನ್ಯೂಸ್
05-09-24 02:55 pm Mangalore Correspondent ಕ್ರೈಂ
ಪುತ್ತೂರು, ಸೆ.5: ತನ್ನನ್ನು ಸಿಆರ್ ಪಿಎಫ್ ಯೋಧನೆಂದು ಫೇಸ್ಬುಕ್ ನಲ್ಲಿ ಪರಿಚಯಿಸಿಕೊಂಡ ವ್ಯಕ್ತಿಯೊಬ್ಬ, ತನಗೆ ಕಾಶ್ಮೀರಕ್ಕೆ ವರ್ಗಾವಣೆಯಾಗಿದೆ, ಫರ್ನಿಚರ್ ಗಳನ್ನು ಮಾರಾಟ ಮಾಡುತ್ತೇನೆಂದು ಹೇಳಿ ಅಡ್ವಾನ್ಸ್ ಹಣ ಪಡೆದು ಪುತ್ತೂರಿನ ವ್ಯಕ್ತಿಗೆ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ.
ಪುತ್ತೂರು ತಾಲೂಕು ಪಂಚಾಯಿತಿ ನರೇಗಾ ಸಂಯೋಜಕ ಭರತ್ ಕುಮಾರ್ ಹಣ ಕಳಕೊಂಡವರು. ಇವರಿಗೆ ಫೇಸ್ಬುಕ್ ಮೆಸೆಂಜರ್ ನಲ್ಲಿ ಗೆಳೆಯ ರಾಧಾಕೃಷ್ಣ ಹೆಸರಿನಲ್ಲಿ ಮೆಸೇಜ್ ಬಂದಿತ್ತು. ನನ್ನ ಗೆಳೆಯ ಸಂತೋಷ್ ಸಿಆರ್ ಪಿಎಫ್ ಯೋಧನಾಗಿದ್ದು, ಕಾಶ್ಮೀರಕ್ಕೆ ವರ್ಗಾವಣೆಯಾಗುತ್ತಿದ್ದಾನೆ. ಆತನ ಮನೆಯಲ್ಲಿರುವ ಪೀಠೋಪಕರಣ, ಇಲೆಕ್ಟ್ರಾನಿಕ್ ವಸ್ತುಗಳನ್ನು ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿದ್ದಾನೆ ಎಂದು ಸಂದೇಶ ಬಂದಿತ್ತು.
ಬಳಿಕ ಸಂತೋಷ್ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ಭರತ್ ಗೆ ಕರೆ ಮಾಡಿದ್ದು ಮನೆ ಸಾಮಗ್ರಿಗಳನ್ನು ಕಳಿಸಿಕೊಡುವುದಾಗಿ ಹೇಳಿ ಫೋಟೋ ಕಳಿಸಿದ್ದಾನೆ. ಸಾಮಗ್ರಿಗೆ 95 ಸಾವಿರ ರೂ. ಎಂದು ಹೇಳಿದ ಆ ವ್ಯಕ್ತಿಯ ಜೊತೆಗೆ ಭರತ್ ಚೌಕಾಶಿ ಮಾಡಿದ್ದು, ಹತ್ತು ಸಾವಿರ ರೂ. ಅಡ್ವಾನ್ಸ್ ಮಾಡಿದ್ದಾರೆ. ಬಳಿಕ ಬೆಂಗಳೂರಿನಿಂದ ಸಿಆರ್ ಪಿಎಫ್ ಲಾರಿಯಲ್ಲಿ ಸಾಮಗ್ರಿ ಕಳಿಸಿಕೊಡುತ್ತಿದ್ದೇನೆ, ಕೂಡಲೇ ಉಳಿಕೆ ಹಣ ಕಳಿಸುವಂತೆ ವ್ಯಕ್ತಿ ಒತ್ತಡ ಹೇರಿದ್ದ. ಈ ಹಂತದಲ್ಲಿ ಸಂಶಯಕ್ಕೀಡಾದ ಭರತ್, ಫೇಸ್ಬುಕ್ ಗೆಳೆಯ ರಾಧಾಕೃಷ್ಣ ಅವರಿಗೆ ಕರೆ ಮಾಡಿದಾಗ, ತಾನೇನೂ ಮೆಸೇಜ್ ಹಾಕಿಲ್ಲ ಎಂದುತ್ತರ ಬಂದಿದೆ. ಇದರಿಂದ ಮೋಸ ಹೋಗಿದ್ದು ಅರಿವಾಗುತ್ತಲೇ ಭರತ್ ಪೊಲೀಸರಿಗೆ ದೂರು ನೀಡಿದ್ದಾರೆ.
ಮೆಸೇಜ್ ಕಳಿಸಿದ್ದ ಫೇಸ್ಬುಕ್ ಖಾತೆ ಬ್ಲಾಕ್ ಆಗಿದೆ. ಹಣ ಕಳಿಸಿದ್ದ ಫೋನ್ ಪೇ ನಂಬರ್ ಚಾಲ್ತಿಯಲ್ಲಿದ್ದು, ಫೋನ್ ಮಾಡಿದರೆ ರಿಂಗ್ ಆಗುತ್ತಿದೆ. ಫೋನ್ ಪೇ ಮಾಡಿದಾಗ ಬಾಬುಲಾಲ್ ಎಂದು ಆ ಹೆಸರನ್ನು ತೋರಿಸಿತ್ತು. ಅವರಲ್ಲಿ ಕೇಳಿದಾಗ, ಅದು ತನ್ನ ತಂದೆಯದೆಂದು ಸಂತೋಷ್ ಹೇಳಿದ್ದ ಎಂದು ಭರತ್ ಕುಮಾರ್ ತಿಳಿಸಿದ್ದಾರೆ.
Online fraud in the name of CRSF solider, puttur man cheated of 10 thousand rs.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am