ಬ್ರೇಕಿಂಗ್ ನ್ಯೂಸ್
05-09-24 02:55 pm Mangalore Correspondent ಕ್ರೈಂ
ಪುತ್ತೂರು, ಸೆ.5: ತನ್ನನ್ನು ಸಿಆರ್ ಪಿಎಫ್ ಯೋಧನೆಂದು ಫೇಸ್ಬುಕ್ ನಲ್ಲಿ ಪರಿಚಯಿಸಿಕೊಂಡ ವ್ಯಕ್ತಿಯೊಬ್ಬ, ತನಗೆ ಕಾಶ್ಮೀರಕ್ಕೆ ವರ್ಗಾವಣೆಯಾಗಿದೆ, ಫರ್ನಿಚರ್ ಗಳನ್ನು ಮಾರಾಟ ಮಾಡುತ್ತೇನೆಂದು ಹೇಳಿ ಅಡ್ವಾನ್ಸ್ ಹಣ ಪಡೆದು ಪುತ್ತೂರಿನ ವ್ಯಕ್ತಿಗೆ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ.
ಪುತ್ತೂರು ತಾಲೂಕು ಪಂಚಾಯಿತಿ ನರೇಗಾ ಸಂಯೋಜಕ ಭರತ್ ಕುಮಾರ್ ಹಣ ಕಳಕೊಂಡವರು. ಇವರಿಗೆ ಫೇಸ್ಬುಕ್ ಮೆಸೆಂಜರ್ ನಲ್ಲಿ ಗೆಳೆಯ ರಾಧಾಕೃಷ್ಣ ಹೆಸರಿನಲ್ಲಿ ಮೆಸೇಜ್ ಬಂದಿತ್ತು. ನನ್ನ ಗೆಳೆಯ ಸಂತೋಷ್ ಸಿಆರ್ ಪಿಎಫ್ ಯೋಧನಾಗಿದ್ದು, ಕಾಶ್ಮೀರಕ್ಕೆ ವರ್ಗಾವಣೆಯಾಗುತ್ತಿದ್ದಾನೆ. ಆತನ ಮನೆಯಲ್ಲಿರುವ ಪೀಠೋಪಕರಣ, ಇಲೆಕ್ಟ್ರಾನಿಕ್ ವಸ್ತುಗಳನ್ನು ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿದ್ದಾನೆ ಎಂದು ಸಂದೇಶ ಬಂದಿತ್ತು.
ಬಳಿಕ ಸಂತೋಷ್ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ಭರತ್ ಗೆ ಕರೆ ಮಾಡಿದ್ದು ಮನೆ ಸಾಮಗ್ರಿಗಳನ್ನು ಕಳಿಸಿಕೊಡುವುದಾಗಿ ಹೇಳಿ ಫೋಟೋ ಕಳಿಸಿದ್ದಾನೆ. ಸಾಮಗ್ರಿಗೆ 95 ಸಾವಿರ ರೂ. ಎಂದು ಹೇಳಿದ ಆ ವ್ಯಕ್ತಿಯ ಜೊತೆಗೆ ಭರತ್ ಚೌಕಾಶಿ ಮಾಡಿದ್ದು, ಹತ್ತು ಸಾವಿರ ರೂ. ಅಡ್ವಾನ್ಸ್ ಮಾಡಿದ್ದಾರೆ. ಬಳಿಕ ಬೆಂಗಳೂರಿನಿಂದ ಸಿಆರ್ ಪಿಎಫ್ ಲಾರಿಯಲ್ಲಿ ಸಾಮಗ್ರಿ ಕಳಿಸಿಕೊಡುತ್ತಿದ್ದೇನೆ, ಕೂಡಲೇ ಉಳಿಕೆ ಹಣ ಕಳಿಸುವಂತೆ ವ್ಯಕ್ತಿ ಒತ್ತಡ ಹೇರಿದ್ದ. ಈ ಹಂತದಲ್ಲಿ ಸಂಶಯಕ್ಕೀಡಾದ ಭರತ್, ಫೇಸ್ಬುಕ್ ಗೆಳೆಯ ರಾಧಾಕೃಷ್ಣ ಅವರಿಗೆ ಕರೆ ಮಾಡಿದಾಗ, ತಾನೇನೂ ಮೆಸೇಜ್ ಹಾಕಿಲ್ಲ ಎಂದುತ್ತರ ಬಂದಿದೆ. ಇದರಿಂದ ಮೋಸ ಹೋಗಿದ್ದು ಅರಿವಾಗುತ್ತಲೇ ಭರತ್ ಪೊಲೀಸರಿಗೆ ದೂರು ನೀಡಿದ್ದಾರೆ.
ಮೆಸೇಜ್ ಕಳಿಸಿದ್ದ ಫೇಸ್ಬುಕ್ ಖಾತೆ ಬ್ಲಾಕ್ ಆಗಿದೆ. ಹಣ ಕಳಿಸಿದ್ದ ಫೋನ್ ಪೇ ನಂಬರ್ ಚಾಲ್ತಿಯಲ್ಲಿದ್ದು, ಫೋನ್ ಮಾಡಿದರೆ ರಿಂಗ್ ಆಗುತ್ತಿದೆ. ಫೋನ್ ಪೇ ಮಾಡಿದಾಗ ಬಾಬುಲಾಲ್ ಎಂದು ಆ ಹೆಸರನ್ನು ತೋರಿಸಿತ್ತು. ಅವರಲ್ಲಿ ಕೇಳಿದಾಗ, ಅದು ತನ್ನ ತಂದೆಯದೆಂದು ಸಂತೋಷ್ ಹೇಳಿದ್ದ ಎಂದು ಭರತ್ ಕುಮಾರ್ ತಿಳಿಸಿದ್ದಾರೆ.
Online fraud in the name of CRSF solider, puttur man cheated of 10 thousand rs.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm