ಬ್ರೇಕಿಂಗ್ ನ್ಯೂಸ್
12-09-24 01:37 pm Mangaluru Correspondent ಕ್ರೈಂ
ಮಂಡ್ಯ, ಸೆ.12: ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ನಿನ್ನೆ ರಾತ್ರಿ ಗಣಪತಿ ವಿಸರ್ಜನೆ ಮೆರವಣಿ ನಡೆಯುತ್ತಿದ್ದಾಗ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು ಕೋಮು ದ್ವೇಷದ ಗಲಭೆ ಹೊತ್ತುಕೊಂಡಿದೆ. ಮಂಡ್ಯ- ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಬುಧವಾರ ರಾತ್ರಿ ಘಟನೆ ನಡೆದಿದ್ದು ಪಟ್ಟಣದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿದೆ.
ಘಟನೆಯಲ್ಲಿ ಮಾಜಿ ಶಾಸಕ ಸುರೇಶ್ ಗೌಡರ ನಿವಾಸ ಸೇರಿದಂತೆ ಹಿಂದೂಗಳ ಮನೆಗಳಿಗೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಘಟನೆಯಲ್ಲಿ 10ಕ್ಕೆ ಹೆಚ್ಚು ಬೈಕ್ ಸುಟ್ಟು ಕರಕಲಾಗಿವೆ, 13ಕ್ಕೂ ಹೆಚ್ಚು ಅಂಗಡಿಗಳಿಗೆ ಬೆಂಕಿ ಇಡಲಾಗಿದೆ. ಎರಡು ಗುಂಪಿನವರೂ ಪರಸ್ಪರ ಕಲ್ಲು ತೂರಾಟ ನಡೆಸಿದ್ದು ರಾತ್ರೋರಾತ್ರಿ ಕೋಮು ಘರ್ಷಣೆ ಉಂಟಾಗಿದೆ. ಎಂಟು ಮಂದಿ ಗಾಯಗೊಂಡಿದ್ದು ಓರ್ವ ಪಿಎಸ್ಐ ಸಿಬಂದಿಯೂ ಗಾಯಗೊಂಡಿದ್ದಾರೆ. ಘಟನೆಗೆ ರಾಜ್ಯಾದ್ಯಂತ ಹಿಂದು ಸಂಘಟನೆಗಳು, ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಆಕಸ್ಮಿಕ ರೀತಿ ನಡೆದುಹೋಗಿದೆ, ಇದಕ್ಕೆ ದೊಡ್ಡ ಪ್ರಚಾರ ಕೊಡಬೇಡಿ !
ಈ ಬಗ್ಗೆ ಬೆಂಗಳೂರಿನಲ್ಲಿ ಹೇಳಿಕೆ ನೀಡಿರುವ ಗೃಹ ಸಚಿವ ಪರಮೇಶ್ವರ್, ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ಒಬ್ಬರಿಗೊಬ್ಬರು ಘರ್ಷಣೆ ಕಲ್ಲು ತೂರಾಟ ಮಾಡಿಕೊಂಡಿದ್ದಾರೆ. ಆ ನಂತರ ಎಲ್ಲವೂ ಸರಿಹೋಯ್ತು ಅಂತ ವಾಪಸ್ ಹೋಗುವಾಗ, ಕೆಲವರು ವಾಹನಗಳಿಗೆ ಬೆಂಕಿ ಇಟ್ಟರು. ಅಷ್ಟರೊಳಗೆ ಪೊಲೀಸರು ಎಚ್ಚೆತ್ತುಕೊಂಡು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ. ಈ ರೀತಿಯ ಘಟನೆ ನಡೆಯಬಾರದಿತ್ತು. ಈ ಘಟನೆಯನ್ನು ಕೋಮು ಗಲಭೆ ಅಂತ ಹೇಳಲಾಗದು. ಇದನ್ನು ಹೆಚ್ಚು ಬೆಳೆಯಲು ಪೊಲೀಸರು ಬಿಟ್ಟಿಲ್ಲ. ಹೆಚ್ಚು ಪ್ರಚಾರ ನೀಡುವುದೂ ಬೇಡ. ಆಕಸ್ಮಿಕ ರೀತಿಯಲ್ಲಿ ನಡೆದುಹೋಗಿದೆ ಎಂದು ಹೇಳಿದ್ದಾರೆ.
52 ಜನ ಬಂಧನ, ಪೊಲೀಸರಿಗೂ ಕಲ್ಲೇಟು
ಘಟನೆಯಲ್ಲಿ ಹೆಚ್ಚು ಜನರಿಗೆ ಗಾಯಗಳಾಗಿಲ್ಲ. ಗಲಭೆಗೆ ಸಂಬಂಧಿಸಿದಂತೆ ಎರಡೂ ಗುಂಪಿನ ಒಟ್ಟು 52 ಜನರನ್ನು ಬಂಧಿಸಲಾಗಿದೆ. ಸಿಸಿ ಕ್ಯಾಮರಾದಲ್ಲಿ ಘಟನೆಯ ದೃಶ್ಯಗಳು ಸೆರೆಯಾಗಿವೆ. ಅದನ್ನು ಆಧರಿಸಿ ಕಲ್ಲು ತೂರಿದವರು ಹಾಗು ಬೆಂಕಿ ಹಚ್ಚಿದವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಪೊಲೀಸರಿಗೂ ಕಲ್ಲೇಟು ಬಿದ್ದಿದ್ದು, ಓರ್ವ ಎಸ್ಐ ಗಾಯಗೊಂಡಿದ್ದಾರೆ. ಇದರಲ್ಲಿ ರಾಜಕೀಯ ಪ್ರಚೋದನೆ ಕಾಣುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
Communal tensions gripped Nagamangala town in Karnataka's Mandya district on Wednesday after clashes erupted between two groups during the Ganpati procession, news agency PTI reported.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm