ಬ್ರೇಕಿಂಗ್ ನ್ಯೂಸ್
13-09-24 09:08 pm Mangalore Correspondent ಕ್ರೈಂ
ಬಂಟ್ವಾಳ, ಸೆ.13: ನಿವೃತ್ತ ಸೈನಿಕರೊಬ್ಬರು ಕಾರ್ಯ ನಿಮಿತ್ತ ಬ್ಯಾಂಕಿನಿಂದ ಹಣ ಡ್ರಾ ಮಾಡಿ ನಗದು ಇದ್ದ ಬ್ಯಾಗನ್ನು ಇರಿಸಿ ಪಾಸ್ ಬುಕ್ ಎಂಟ್ರಿ ಮಾಡುತ್ತಿದ್ದಾಗಲೇ 1.30 ಲಕ್ಷ ರೂ. ಇದ್ದ ಬ್ಯಾಗನ್ನು ಕಳ್ಳರು ಎಗರಿಸಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ.
ಈ ಬಗ್ಗೆ ಹಣ ಕಳಕೊಂಡ ಅಡ್ಯಾರ್ ನಿವಾಸಿ ಅಂಬ್ರೋಸ್ ಡಿ’ಸೋಜ( 72) ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದಾರೆ. ಸೆ.4ರಂದು ಬೆಳಗ್ಗೆ 30,000 ನಗದು ಹಾಗೂ ರೂ. 20,000 ನಗದು ಹಣವಿದ್ದ ತನ್ನ ಪರ್ಸನ್ನು ಹ್ಯಾಂಡ್ ಬ್ಯಾಗ್ ನಲ್ಲಿರಿಸಿ ಮನೆಯಿಂದ ಹೊರಟಿದ್ದು, ಬಿ.ಸಿ ರೋಡ್ ನಲ್ಲಿ ಸದ್ರಿಯವರ ಖಾತೆಯಿರುವ ಬ್ಯಾಂಕ್ ಗೆ ತೆರಳಿ, ಬ್ಯಾಂಕ್ ನಿಂದ ರೂ. 80,000/- ಹಣವನ್ನು ಡ್ರಾ ಮಾಡಿದ್ದು, ಅದೇ ಹ್ಯಾಂಡ್ ಬ್ಯಾಗ್ ನಲ್ಲಿ ಇರಿಸಿದ್ದರು. ಬಳಿಕ ಸದ್ರಿ ಹ್ಯಾಂಡ್ ಬ್ಯಾಗ್ ಅನ್ನು ಬ್ಯಾಂಕಿನ ಟೇಬಲ್ ಮೇಲೆ ಇರಿಸಿ, ಪಾಸ್ ಬುಕ್ ಎಂಟ್ರಿ ಮಾಡಿಸಿ ಮರಳಿ ಹ್ಯಾಂಡ್ ಬ್ಯಾಗ್ ತೆಗೆದುಕೊಳ್ಳಲು ಬಂದಾಗ, ಅವರು ಇರಿಸಿದ್ದ ಸ್ಥಳದಲ್ಲಿ ಹ್ಯಾಂಡ್ ಬ್ಯಾಗ್ ಕಾಣದಾಗಿತ್ತು.
ಬ್ಯಾಂಕ್ ಕಚೇರಿಯ ಒಳಗಡೆ ಎಲ್ಲ ಕಡೆ ಹುಡುಕಾಡಿ ವಿಚಾರಿಸಿದ್ದು ಬ್ಯಾಗ್ ಸಿಕ್ಕಿರುವುದಿಲ್ಲ. ಅವರ ಬಾಬ್ತು ಹಣ ಇದ್ದ ಹ್ಯಾಂಡ್ ಬ್ಯಾಗ್ ಅನ್ನು ಯಾರಾದರೂ ಕೈ ತಪ್ಪಿನಿಂದ ಹಿಡಿದುಕೊಂಡು ಹೋಗಿರಬಹುದು, ಅದನ್ನು ಮರಳಿ ಕೊಡಬಹುದೆಂದು ಭಾವಿಸಿ ಮನೆಗೆ ಹಿಂತಿರುಗಿದ್ದರು. ಈ ನಡುವೆ ಹಣ, ಪಾಸ್ ಬುಕ್ ಹಾಗೂ ಇತರೆ ದಾಖಲೆಗಳಿದ್ದ ಹ್ಯಾಂಡ್ ಬ್ಯಾಗ್ ಬಿ.ಸಿ ರೋಡು ಕೈಕುಂಜೆಗೆ ಹೋಗುವ ರಸ್ತೆ ಬದಿಯಲ್ಲಿ ಪತ್ತೆಯಾಗಿದೆ. ಆದರೆ ಅದರಲ್ಲಿದ್ದ ನಗದು ಹಣ ಸಿಕ್ಕಿರುವುದಿಲ್ಲ. ಪಿರ್ಯಾದಿದಾರರ ಬಾಬ್ತು ಒಟ್ಟು ರೂ. 1,30,000/- ನಗದು ಹಣವಿದ್ದ ಹ್ಯಾಂಡ್ ಬ್ಯಾಗ್ ಅನ್ನು ಯಾರೋ ಕಳ್ಳರು ಕಳವು ಮಾಡಿದ್ದು ಅದರಲ್ಲಿದ್ದ ಹಣವನ್ನು ಕಳವು ಮಾಡಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Thieves flee with 1lakh 30 thousand bag from bank from customer at Bantwal in Mangalore.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am