ಬ್ರೇಕಿಂಗ್ ನ್ಯೂಸ್
13-09-24 09:08 pm Mangalore Correspondent ಕ್ರೈಂ
ಬಂಟ್ವಾಳ, ಸೆ.13: ನಿವೃತ್ತ ಸೈನಿಕರೊಬ್ಬರು ಕಾರ್ಯ ನಿಮಿತ್ತ ಬ್ಯಾಂಕಿನಿಂದ ಹಣ ಡ್ರಾ ಮಾಡಿ ನಗದು ಇದ್ದ ಬ್ಯಾಗನ್ನು ಇರಿಸಿ ಪಾಸ್ ಬುಕ್ ಎಂಟ್ರಿ ಮಾಡುತ್ತಿದ್ದಾಗಲೇ 1.30 ಲಕ್ಷ ರೂ. ಇದ್ದ ಬ್ಯಾಗನ್ನು ಕಳ್ಳರು ಎಗರಿಸಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ.
ಈ ಬಗ್ಗೆ ಹಣ ಕಳಕೊಂಡ ಅಡ್ಯಾರ್ ನಿವಾಸಿ ಅಂಬ್ರೋಸ್ ಡಿ’ಸೋಜ( 72) ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದಾರೆ. ಸೆ.4ರಂದು ಬೆಳಗ್ಗೆ 30,000 ನಗದು ಹಾಗೂ ರೂ. 20,000 ನಗದು ಹಣವಿದ್ದ ತನ್ನ ಪರ್ಸನ್ನು ಹ್ಯಾಂಡ್ ಬ್ಯಾಗ್ ನಲ್ಲಿರಿಸಿ ಮನೆಯಿಂದ ಹೊರಟಿದ್ದು, ಬಿ.ಸಿ ರೋಡ್ ನಲ್ಲಿ ಸದ್ರಿಯವರ ಖಾತೆಯಿರುವ ಬ್ಯಾಂಕ್ ಗೆ ತೆರಳಿ, ಬ್ಯಾಂಕ್ ನಿಂದ ರೂ. 80,000/- ಹಣವನ್ನು ಡ್ರಾ ಮಾಡಿದ್ದು, ಅದೇ ಹ್ಯಾಂಡ್ ಬ್ಯಾಗ್ ನಲ್ಲಿ ಇರಿಸಿದ್ದರು. ಬಳಿಕ ಸದ್ರಿ ಹ್ಯಾಂಡ್ ಬ್ಯಾಗ್ ಅನ್ನು ಬ್ಯಾಂಕಿನ ಟೇಬಲ್ ಮೇಲೆ ಇರಿಸಿ, ಪಾಸ್ ಬುಕ್ ಎಂಟ್ರಿ ಮಾಡಿಸಿ ಮರಳಿ ಹ್ಯಾಂಡ್ ಬ್ಯಾಗ್ ತೆಗೆದುಕೊಳ್ಳಲು ಬಂದಾಗ, ಅವರು ಇರಿಸಿದ್ದ ಸ್ಥಳದಲ್ಲಿ ಹ್ಯಾಂಡ್ ಬ್ಯಾಗ್ ಕಾಣದಾಗಿತ್ತು.
ಬ್ಯಾಂಕ್ ಕಚೇರಿಯ ಒಳಗಡೆ ಎಲ್ಲ ಕಡೆ ಹುಡುಕಾಡಿ ವಿಚಾರಿಸಿದ್ದು ಬ್ಯಾಗ್ ಸಿಕ್ಕಿರುವುದಿಲ್ಲ. ಅವರ ಬಾಬ್ತು ಹಣ ಇದ್ದ ಹ್ಯಾಂಡ್ ಬ್ಯಾಗ್ ಅನ್ನು ಯಾರಾದರೂ ಕೈ ತಪ್ಪಿನಿಂದ ಹಿಡಿದುಕೊಂಡು ಹೋಗಿರಬಹುದು, ಅದನ್ನು ಮರಳಿ ಕೊಡಬಹುದೆಂದು ಭಾವಿಸಿ ಮನೆಗೆ ಹಿಂತಿರುಗಿದ್ದರು. ಈ ನಡುವೆ ಹಣ, ಪಾಸ್ ಬುಕ್ ಹಾಗೂ ಇತರೆ ದಾಖಲೆಗಳಿದ್ದ ಹ್ಯಾಂಡ್ ಬ್ಯಾಗ್ ಬಿ.ಸಿ ರೋಡು ಕೈಕುಂಜೆಗೆ ಹೋಗುವ ರಸ್ತೆ ಬದಿಯಲ್ಲಿ ಪತ್ತೆಯಾಗಿದೆ. ಆದರೆ ಅದರಲ್ಲಿದ್ದ ನಗದು ಹಣ ಸಿಕ್ಕಿರುವುದಿಲ್ಲ. ಪಿರ್ಯಾದಿದಾರರ ಬಾಬ್ತು ಒಟ್ಟು ರೂ. 1,30,000/- ನಗದು ಹಣವಿದ್ದ ಹ್ಯಾಂಡ್ ಬ್ಯಾಗ್ ಅನ್ನು ಯಾರೋ ಕಳ್ಳರು ಕಳವು ಮಾಡಿದ್ದು ಅದರಲ್ಲಿದ್ದ ಹಣವನ್ನು ಕಳವು ಮಾಡಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Thieves flee with 1lakh 30 thousand bag from bank from customer at Bantwal in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm