ಬ್ರೇಕಿಂಗ್ ನ್ಯೂಸ್
14-09-24 06:54 pm Bengaluru correspondent ಕ್ರೈಂ
ಬೆಂಗಳೂರು, ಸೆ.14: ತಿಂಗಳಿಗೆ 30 ಲಕ್ಷ ಲಂಚ ಕೇಳಿದ್ದಲ್ಲದೆ, ಪತ್ನಿಯನ್ನು ತನ್ನ ಜೊತೆಗೆ ಮಲಗಲು ಕಳಿಸು ಎಂದು ಅವಾಚ್ಯವಾಗಿ ನಿಂದಿಸಿ ಎಫ್ಐಆರ್ ದಾಖಲಾಗುತ್ತಿದ್ದಂತೆ ಆಂಧ್ರಕ್ಕೆ ಎಸ್ಕೇಪ್ ಆಗಲು ಯತ್ನಿಸಿದ ಬೆಂಗಳೂರಿನ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಕೋಲಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಎಂಬವರ ಜೊತೆಗೆ ಅವಾಚ್ಯ ಪದಗಳಿಂದ ನಿಂದಿಸಿ ಮಾತನಾಡಿದ್ದ ಆಡಿಯೋ ವೈರಲ್ ಆಗಿತ್ತು.
ಇದರ ಬೆನ್ನಲ್ಲೇ ಮುನಿರತ್ನ ವಿರುದ್ಧ ಕೊಲೆ ಬೆದರಿಕೆ, ಜಾತಿ ನಿಂದನೆ ಆರೋಪದಡಿ ವಯಾಲಿಕಾವಲ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಬಂಧನ ಭೀತಿ ಎದುರಿಸುತ್ತಿದ್ದ ಶಾಸಕ ಮುನಿರತ್ನ ಕೋಲಾರ ಮೂಲಕ ಆಂಧ್ರಪ್ರದೇಶಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದರು. ಕೋಲಾರ ಮೂಲಕ ಕಾರಿನಲ್ಲಿ ತೆರಳುತ್ತಿದ್ದಾಗಲೇ ಖಚಿತ ಮಾಹಿತಿ ಪಡೆದು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೊಬೈಲ್ ಟವರ್ ಲೊಕೇಶನ್ ಟ್ರೇಸ್ ಮಾಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು ಸಿಟಿ ಪೊಲೀಸ್ ಕಮೀಷನರ್ ಸೂಚನೆ ಮೇರೆಗೆ ಮುನಿರತ್ನ ಅವರನ್ನು ವಶಕ್ಕೆ ಪಡೆಯಲಾಗಿದೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದು, ಅವರನ್ನು ಬೆಂಗಳೂರಿಗೆ ಕರೆತರುತ್ತಿದ್ದಾರೆ.
ಘನತ್ಯಾಜ್ಯ ಗುತ್ತಿಗೆ ನೀಡುವ ವಿಚಾರದಲ್ಲಿ ತಿಂಗಳಿಗೆ 36 ಲಕ್ಷ ನೀಡಬೇಕೆಂದು ಶಾಸಕ ಮುನಿರತ್ನ ಡಿಮ್ಯಾಂಡ್ ಇಟ್ಟಿದ್ದು ಅಷ್ಟು ಹಣ ಇಲ್ಲವೆಂದು ಗುತ್ತಿಗೆದಾರ ಬೇಡಿಕೊಳ್ಳುವ ಆಡಿಯೋ ವೈರಲ್ ಆಗಿತ್ತು. ಇದು ಮಾಧ್ಯಮದಲ್ಲಿ ಬರುತ್ತಿದ್ದಂತೆ ಮುನಿರತ್ನ ವಿರುದ್ಧ ಆಕ್ರೋಶ ಕೇಳಿಬಂದಿತ್ತು. ಆನಂತರ, ಸ್ವತಃ ಗುತ್ತಿಗೆದಾರನೇ ಶಾಸಕ ಮುನಿರತ್ನ, ಸರ್ಕಾರಿ ಅಧಿಕಾರಿ ವಿಜಯಕುಮಾರ್, ಕಾರ್ಯದರ್ಶಿ ಅಭಿಷೇಕ್, ಶಾಸಕರ ಆಪ್ತ ವಸಂತ ಕುಮಾರ್ ವಿರುದ್ಧ ವಯ್ಯಾಲಿಕಾವಲ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಹೊಲೆಯನ ರೀತಿ ಮಾಡ್ತಿದ್ದೀಯಲ್ಲಾ ಎಂದು ಜಾತಿ ನಿಂದನೆ ಮಾಡಿರುವುದೂ ಆಡಿಯೋದಲ್ಲಿತ್ತು. ಈ ಬಗ್ಗೆ ಅದೇ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿ ಶಾಸಕನನ್ನು ಬಂಧಿಸಿದ್ದಾರೆ.
Karnataka BJP MLA Munirathna was arrested in Kolar on Saturday on charges of making a death threat to a contractor and using casteist slurs against him. Two FIRs were filed against Munirathna, an MLA from Rajarajeshwari Nagar in Bengaluru, based on complaints filed by Chelvaraju, who accused the BJP leader of harassing and threatening him
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
15-05-26 08:54 am
HK News Staffer
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm