ಬ್ರೇಕಿಂಗ್ ನ್ಯೂಸ್
21-09-24 10:24 pm Bangalore Correspondent ಕ್ರೈಂ
ಬೆಂಗಳೂರು, ಸೆ.21: ನಗರದ ವೈಯ್ಯಾಲಿ ಕಾವಲ್ ನ ಮನೆಯೊಂದರಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಮಹಾಲಕ್ಷ್ಮೀ (26) ಎಂಬ ಯುವತಿಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಕಳೆದ 19 ದಿನಗಳ ಹಿಂದೆಯೇ ಆಕೆಯನ್ನು ಹತ್ಯೆ ಮಾಡಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಹಂತಕರು ಆಕೆಯ ದೇಹವನ್ನು 30 ತುಂಡುಗಳಾಗಿ ಕತ್ತರಿಸಿ, ಆ ತುಂಡುಗಳನ್ನು ಫ್ರಿಡ್ಜ್ ನಲ್ಲಿ ಇಟ್ಟು ಹೋಗಿದ್ದಾರೆ. ಆಕೆಯ ದೇಹದ ತುಂಡುಗಳಿಂದ ಬಂದ ರಕ್ತ ಫ್ರಿಡ್ಜ್ ನಿಂದ ಸೋರಿಕೆಯಾಗಿ ಮನೆಯ ತುಂಬೆಲ್ಲಾ ಹರಡಿತ್ತು. ಶುಕ್ರವಾರದಂದು ಆಕೆಯಿದ್ದ ಮನೆಯಿಂದ ಕೆಟ್ಟ ವಾಸನೆ ಬರುತ್ತಿತ್ತು. ಮೊದಮೊದಲಿಗೆ, ಯಾವುದೋ ಹೆಗ್ಗಣ ಸತ್ತಿರುವ ವಾಸನೆ ಇರಬಹುದು ಎಂದು ನೆರೆಯವರು ತಿಳಿದಿದ್ದರು.

ಆದರೆ, ದಿನಗಳೆದಂತೆ ವಾಸನೆ ಮಹಾಲಕ್ಷ್ಮಿಯಿದ್ದ ಮನೆಯಿಂದಲೇ ಬರುತ್ತಿದ್ದ ಕಾರಣಕ್ಕೆ ನೆರೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಪೊಲೀಸರು ಬಂದು ಪರಿಶೀಲಿಸಿ ಬಾಗಿಲು ಒಡೆದು ಹೋದಾಗ ಮನೆಯಲ್ಲಿ ಹರಡಿದ್ದ ರಕ್ತದಲ್ಲಿ ಅದಾಗಲೇ ಹುಳ ಬಿದ್ದಿದ್ದವು. ರಕ್ತ ಎಲ್ಲಿಂದ ಸೋರಿದೆ ಎಂದು ಪರಿಶೀಲಿಸಿದಾಗ ಆ ರಕ್ತ ಪೊಲೀಸರನ್ನು ಮನೆಯಲ್ಲಿದ್ದ ಫ್ರಿಡ್ಜ್ ಕಡೆಗೆ ಕರೆದೊಯ್ದಿದೆ. ಫ್ರಿಡ್ಜ್ ಬಾಗಿಲು ತೆಗೆದಾಗ ಪೊಲೀಸರು ಫ್ರಿಡ್ಜ್ ನಲ್ಲಿದ್ದ ಯುವತಿಯ ದೇಹದ 30 ಪೀಸ್ ಗಳನ್ನು ನೋಡಿ ದಂಗಾಗಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಆಕೆ ನೇಪಾಳದವಳು ಎಂದು ಹೇಳಲಾಗಿದೆ. ಆಕೆಯು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಮಂತ್ರಿ ಮಾಲ್ ನಲ್ಲಿ ಕೆಲಸ ಮಾಡುತ್ತಿದ್ದಳು. ಪ್ರತಿ ದಿನ ಬೆಳಗ್ಗೆ 9.30ಕ್ಕೆ ಕೆಲಸಕ್ಕೆ ಹೋದರೆ ರಾತ್ರಿ 9 ಗಂಟೆಗೆ ಮನೆಗೆ ಬರುತ್ತಿದ್ದಳು. ಒಮ್ಮೆ ಮನೆಯೊಳಗೆ ಹೋದರೆ ಪುನಃ ಆಕೆ ಹೊರಕ್ಕೆ ಬರುತ್ತಿದ್ದುದು ಮರುದಿನ ಡ್ಯುಟಿಗೆ ಹೋಗಬೇಕಾದಾಗ ಮಾತ್ರ ಎಂದು ನೆರೆಯವರು ಹೇಳಿದ್ದಾರೆ.
ಮತ್ತೊಂದು ಮೂಲದ ಪ್ರಕಾರ, ಆಕೆಯು ನೇಪಾಳದವಳಾಗಿದ್ದು ವಿವಾಹಿತೆಯಾಗಿದ್ದಳು. ದಂಪತಿಯಿಬ್ಬರೂ ಮುನೇಶ್ವರನಗರದಲ್ಲಿರುವ ಮನೆಯೊಂದರಲ್ಲಿ ವಾಸವಾಗಿದ್ದರು. ಆಕೆ, ಹುಕುಂ ಸಿಂಗ್ ಎಂಬಾತನನ್ನು ಮದುವೆಯಾಗಿದ್ದಳು. ಆ ದಂಪತಿಗೊಂದು ಮಗುವೂ ಇದೆ. ಆದರೆ, ಆಕೆ ತನ್ನ ಪತಿ ಹಾಗೂ ಮಗುವನ್ನು ತೊರೆದಿದ್ದಳು. ಪತಿ ಹಾಗೂ ಮಗುವನ್ನು ತೊರೆದ ನಂತರ ಆಕೆ ವೈಯ್ಯಾಲಿ ಕಾವಲ್ ನಲ್ಲಿ ಬಂದು ಬಾಡಿಗೆ ಮನೆಯಲ್ಲಿ ವಾಸವಾಗಿದ್ದಳು ಎಂದು ಹೇಳಲಾಗಿದೆ.
In a shocking incident, a 26-year-old home-alone woman was murdered and her body parts cut into several pieces and stuffed in the fridge of the house she was living in at Vinayaka Nagar in Vyalikaval here on Saturday.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm