ಬ್ರೇಕಿಂಗ್ ನ್ಯೂಸ್
22-09-24 02:37 pm HK News Desk ಕ್ರೈಂ
ಕಾರವಾರ, ಸೆ 22: ತಾಲ್ಲೂಕಿನ ಹಣಕೋಣ ಗ್ರಾಮದಲ್ಲಿ ಭಾನುವಾರ ನಸುಕಿನ ಜಾವ ಉದ್ಯಮಿ ವಿನಾಯಕ ನಾಯ್ಕ ಯಾನೆ ರಾಜು ನಾಯ್ಕ (58) ಎಂಬುವವರನ್ನು ದುಷ್ಕರ್ಮಿಗಳ ಗುಂಪೊಂದು ತಲ್ವಾರ್ನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದೆ.
ಮಹಾರಾಷ್ಟ್ರದ ಪುಣೆಯಲ್ಲಿ ಎಲೆಕ್ಟ್ರಾನಿಕ್ ವಸ್ತುಗಳ ಆಮದು, ರಫ್ತು ವಹಿವಾಟು ನಡೆಸುತ್ತಿರುವ ಉದ್ಯಮಿ ತನ್ನ ಊರಾದ ಹಣಕೋಣಕ್ಕೆ ವಾರದ ಹಿಂದೆ ಬಂದಿದ್ದರು. ಭಾನುವಾರ ಪುಣೆಗೆ ಹೊರಡಲು ಸಿದ್ದರಾಗಿದ್ದರು. ನಸುಕಿನ ಜಾವ 5.30ರ ಸುಮಾರಿಗೆ ಅವರ ಹತ್ಯೆ ಮಾಡಲಾಗಿದೆ.
ನಾಲ್ಕರಿಂದ ಐದು ಜನರಿದ್ದ ಗುಂಪೊಂದು ಮನೆಗೆ ನುಗ್ಗಿ ಕೃತ್ಯ ನಡೆಸಿದೆ. ವಿನಾಯಕ ಅವರ ಪತ್ನಿ ವೃಶಾಲಿ ಅವರ ಮೇಲೆಯೂ ಹಲ್ಲೆ ನಡೆಸಲಾಗಿದೆ. ಇವರಿಬ್ಬರೇ ಮನೆಯಲ್ಲಿದ್ದರು ಎಂದು ಚಿತ್ತಾಕುಲ ಠಾಣೆ ಪೊಲೀಸರು ತಿಳಿಸಿದ್ದಾರೆ.
ಹತ್ಯೆಗೆ ಕಾರಣ ಏನು ಎಂಬುದು ತಿಳಿದಿಲ್ಲ. ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದೆ.
ಸಾತೇರಿ ಜಾತ್ರೆಗೆ ಬಂದ ಇವರು ಭಾನುವಾರ ಬೆಳಗ್ಗೆ ಮರಳಿ ಹೊರಡಲು ಸಿದ್ದರಾಗಿದ್ದರು. ಈ ವೇಳೆ ಬೆಳಗಿನಜಾವ 5.30ರ ಸುಮಾರಿಗೆ ಐದು ಜನ ಅಪರಿಚಿತರು ಮನಗೆ ನುಗ್ಗಿ ಅಡುಗೆ ಮನೆಯಲ್ಲಿದ್ದ ವಿನಾಯಕನನ್ನು ಮನ ಬಂದಂತೆ ಚಾಕು ಹಾಗೂ ತಲ್ವಾರ್ನಿಂದ ಕಡಿದು ಹತ್ಯೆ ಮಾಡಲಾಗಿದೆ. ಮನೆಯಲ್ಲಿ ಆತನ ಪತ್ನಿ ಕೂಡ ಇದ್ದು ಅವರಿಗೂ ತಲೆಗೆ ಹೊಡೆಯಲಾಗಿದೆ. ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮನೆಯಂಗಳದಲ್ಲಿ ಚಾಕು ಹಾಗೂ ರಾಡ್ ಬಿದ್ದಿದ್ದು, ತನಿಖೆಯ ಬಳಿಕವೇ ನಿಜಾಂಶ ಹೊರಬರಬೇಕಿದೆ. ಸದ್ಯ ವಿನಾಯಕ ಅವರ ಪತ್ನಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಕರಣ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಕಳೆದ 10 ದಿನಗಳಿಂದ ಹಣಕೋಣ ಗ್ರಾಮದಲ್ಲಿ ಉದ್ಯಮಿ ಕುಟುಂಬ ಉಳಿದುಕೊಂಡಿತ್ತು. ಗ್ರಾಮದ ಸಾತೇರಿದೇವಿ ಜಾತ್ರೆಗೆಂದು ಪತ್ನಿಯೊಂದಿಗೆ ಉದ್ಯಮಿ ವಿನಾಯಕ ಊರಿಗೆ ಬಂದಿದ್ದರು. ಜಾತ್ರೆ ಮುಗಿಸಿ ಭಾನುವಾರ ಬೆಳಗ್ಗೆ ಪುಣೆಗೆ ವಾಪಸ್ಸಾಗಲು ಸಿದ್ಧವಾಗಿದ್ದರು. ಉದ್ಯಮಿ ವಿನಾಯಕ ನಾಯ್ಕ ಕಾರಿನಲ್ಲಿ ಬ್ಯಾಗ್ ಇರಿಸಲು ಬಾಗಿಲು ತೆರೆದಿದ್ದರು. ಈ ವೇಳೆ ಏಕಾಏಕಿ ರಾಡ್ನಿಂದ ಹಲ್ಲೆ ನಡೆಸಿ ಐವರು ಆಗಂತುಕರು ಒಳನುಗ್ಗಿದ್ದರು.
ರಾಡ್ ಸೇರಿ ಮಾರಕಾಸ್ತ್ರಗಳಿಂದ ಉದ್ಯಮಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಉದ್ಯಮಿ ವಿನಾಯಕ ಭುಜಕ್ಕೆ ತೀವ್ರ ಹಲ್ಲೆ ಮಾಡಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ವೇಳೆ ತಪ್ಪಿಸಲು ಅಡ್ಡಬಂದ ಪತ್ನಿ ವೃಷಾಲಿ ಮೇಲೂ ಹಲ್ಲೆ ಮಾಡಿದ್ದಾರೆ. ಚಿಕಿತ್ಸೆ ಪಡೆದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಿನ ಜಾವ 5:30 ರಿಂದ 6 ಗಂಟೆ ವೇಳೆಗೆ ಘಟನೆ ನಡೆದಿದೆ. ಪೂಣಾದಲ್ಲಿ ಆಮದು ರಫ್ತು ಉದ್ಯಮ ನಡೆಸುತ್ತಿದ್ದರು. ತನಿಖೆ ಬಳಿಕ ಹಲ್ಲೆಗೆ ನಿಖರ ಕಾರಣ ತಿಳಿದುಬರಬೇಕಿದೆ. ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಹತ್ಯೆ, ಹತ್ಯೆ ಯತ್ನ ಪ್ರಕರಣ ದಾಖಲಾಗಿದೆ ಎಂದು ಉತ್ತರಕನ್ನಡ ಎಸ್ಪಿ ಎಂ.ನಾರಾಯಣ ತಿಳಿಸಿದರು.
Karwar Pune based businessman brutal murder, wife too attacked. The deceased has been identified as Raju Naik. He had come to Karwar to attend som religious program in the temple.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm