ಬ್ರೇಕಿಂಗ್ ನ್ಯೂಸ್
01-10-24 11:18 pm Mangalore Correspondent ಕ್ರೈಂ
ಮಂಗಳೂರು, ಅ.1: ನೀವು ಕಳಿಸಿದ್ದ ಪಾರ್ಸೇಲ್ ನಲ್ಲಿ ಡ್ರಗ್ಸ್ ಇದೆ ಎಂದು ಹೇಳಿ ವ್ಯಕ್ತಿಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ ಅವರಿಂದ 39.30 ಲಕ್ಷ ರೂ. ಕಿತ್ತುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದ್ದು ಈ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆಪ್ಟೆಂಬರ 23 ರಂದು ತನ್ನ ಮೊಬೈಲ್ಗೆ ಕರೆ ಬಂದಿದ್ದು ಡಿಎಚ್ಎಲ್ ಕೊರಿಯರ್ ಸಂಸ್ಥೆಯ ಕಚೇರಿಯಿಂದ ಶ್ರೇಯಾ ಶರ್ಮಾ ಮಾತನಾಡುತ್ತಿದ್ದೇನೆ ಎಂದು ತಿಳಿಸಿದ್ದರು. ನಿಮ್ಮ ಹೆಸರಿನಲ್ಲಿ ಚೀನಾಕ್ಕೆ ಕಳುಹಿಸಿದ್ದ ಪಾರ್ಸೆಲ್ ರವಾನೆಯಾಗದೇ ಕಚೇರಿಯಲ್ಲೇ ಉಳಿದಿದೆ. ಅದರಲ್ಲಿ 5 ಪಾಸ್ಪೋರ್ಟ್, ಒಂದು ಲ್ಯಾಪ್ಟಾಪ್, 400 ಗ್ರಾಂ ಎಂಡಿಎಂಎ ಡ್ರಗ್ ಹಾಗೂ ಕೆಲವು ಬ್ಯಾಂಕ್ ದಾಖಲೆಗಳು ಹಾಗೂ ಮೂರೂವರೆ ಕೆ.ಜಿ. ಬಟ್ಟೆ ಇದೆ ಎಂದು ಆಕೆ ತಿಳಿಸಿದ್ದರು. ಆ ಪಾರ್ಸೆಲ್ ತನ್ನದಲ್ಲ ಎಂದರೂ ಕೇಳಲಿಲ್ಲ.
ಕಸ್ಟಮ್ಸ್ ಅಧಿಕಾರಿಗಳು ನಿಮ್ಮನ್ನು ಬಂಧಿಸುತ್ತಾರೆ ಎಂದು ಹೇಳಿ ಯಾಮಾರಿಸಿದ್ದಾರೆ ಎಂದು ವ್ಯಕ್ತಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಸೆ.24ರಂದು ಬೆಳಗ್ಗೆ 9ರಿಂದ ವಿಡಿಯೋ ಕಾಲ್ ಮೂಲಕ ವಿಚಾರಣೆ ನಡೆಸುತ್ತೇವೆ ಎಂದು ಹೇಳಿದ ಕಸ್ಟಮ್ಸ್ ಸೋಗಿನಲ್ಲಿದ್ದ ಅಪರಿಚಿತರು, ನನ್ನನ್ನು ಯಾರ ಜೊತೆಗೂ ಮಾತನಾಡದಂತೆ (ಡಿಜಿಟಲ್ ಅರೆಸ್ಟ್) ನಿರ್ಬಂಧಿಸಿದ್ದರು. ನಿಷೇಧಿತ ಎಂಡಿಎಂಎ ಸಾಗಾಟ ಪ್ರಕರಣದಲ್ಲಿ ಬಂಧನ ಮಾಡಬೇಕಾಗುತ್ತದೆ. ಅಷ್ಟು ದೊಡ್ಡ ಪ್ರಮಾಣದಲ್ಲಿ ಡ್ರಗ್ಸ್ ಸಿಕ್ಕಿದೆ ಎಂದಿದ್ದರು. ಬಂಧನ ಮಾಡದೇ ಇರಬೇಕಾದರೆ ನಾವು ಕೇಳಿದಷ್ಟು ಹಣ ನೀಡುವಂತೆ ಕೇಳಿದ್ದರು. ಮೊದಲು ರು. 37 ಲಕ್ಷ ಪಾವತಿಸಿದ್ದು ಮರುದಿನ ನನ್ನ ಸೊತ್ತುಗಳ ವಿಚಾರಣೆಯನ್ನು ಆಡಿಟರ್ ಒಬ್ಬರು ನಡೆಸುತ್ತಾರೆ ಎಂದು ನಂಬಿಸಿ ಅದಕ್ಕೂ ರೂ. 2.30 ಲಕ್ಷವನ್ನು ಪಡೆದಿದ್ದಾರೆ.
ವಿಚಾರಣೆ ಪೂರ್ಣಗೊಂಡ ಬಳಿಕ ಪಡೆದ ಅಷ್ಟೂ ಹಣವನ್ನು ಸೆ.28 ರಂದು ಮರಳಿಸುವುದಾಗಿ ಭರವಸೆ ನೀಡಿದ್ದರು. ಆದರೆ ನಂತರ ಕರೆ ಮಾಡಿದರೆ ಅವರು ಸ್ವೀಕರಿಸುತ್ತಿಲ್ಲ. ನನಗೆ ಅಪರಿಚಿತರ ಮೋಸ ಮಾಡಿದ್ದಾರೆ ಎಂದು ಹಣ ಕಳಕೊಂಡ ವ್ಯಕ್ತಿ ದೂರು ನೀಡಿದ್ದಾರೆ.
Digital arrest scam in the name of drugs parcel, Mangalore man looses 39 lakhs rs.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am