ಬ್ರೇಕಿಂಗ್ ನ್ಯೂಸ್
05-10-24 08:26 pm Mangalore Correspondent ಕ್ರೈಂ
ಮಂಗಳೂರು, ಅ.5: ಪಾವೂರು ಉಳಿಯ ದ್ವೀಪದಲ್ಲಿ ಅಕ್ರಮ ಮರಳುಗಾರಿಕೆ ವಿರೋಧಿಸಿ ಹೋರಾಟಕ್ಕೆ ನೇತೃತ್ವ ನೀಡಿದ್ದ ಕೆಥೋಲಿಕ್ ಸಭಾ ಮುಖಂಡ ಆಲ್ವಿನ್ ಡಿಸೋಜ ಅವರ ಮೇಲೆ ಹಲ್ಲೆ ನಡೆಸಲಾಗಿದೆ.
ಆಲ್ವಿನ್ ಡಿಸೋಜ ಅವರು ಯೂಟ್ಯೂಬ್ ಚಾನೆಲ್ಲಿನ ಪತ್ರಕರ್ತರೊಬ್ಬರನ್ನು ಕರೆತಂದು ಅಕ್ರಮ ಮರಳುಗಾರಿಕೆ ಬಗ್ಗೆ ಕವರೇಜ್ ಮಾಡಿಸುತ್ತಿದ್ದರು. ದ್ವೀಪದ ಆಸುಪಾಸಿನಲ್ಲಿ ವಿಡಿಯೋ ಮಾಡಿದ ಬಳಿಕ ಇವರು ಹಿಂತಿರುಗುತ್ತಿದ್ದಾಗ ರಸ್ತೆ ಬದಿಯಲ್ಲಿ ಅಡ್ಡ ಹಾಕಿದ ತಂಡವೊಂದು ಆಲ್ವಿನ್ ಮೇಲೆ ಹಲ್ಲೆ ನಡೆಸಿದೆ. ಹಲ್ಲೆಯಿಂದ ಗಾಯಗೊಂಡ ಆಲ್ವಿನ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
ಆಲ್ವಿನ್ ಡಿಸೋಜ ಮೇಲೆ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದವರೇ ಸೇರಿಕೊಂಡು ಹಲ್ಲೆ ನಡೆಸಿದ್ದಾರೆಂದು ಆರೋಪ ಕೇಳಿಬಂದಿದೆ. ಆಲ್ವಿನ್ ಕೂಡ ಬೇರೆ ಪ್ರದೇಶದಲ್ಲಿ ಮರಳುಗಾರಿಕೆ ನಡೆಸುತ್ತಿದ್ದಾರೆ ಎನ್ನಲಾಗಿದ್ದು ಪಾವೂರು ಉಳಿಯದಲ್ಲಿ ಮರಳುಗಾರಿಕೆ ವಿರೋಧಿಸಿ ಹೋರಾಟ ನಡೆಸುತ್ತಿರುವುದಕ್ಕೆ ಅಲ್ಲಿನ ದಂಧೆಕೋರರು ಆಕ್ಷೇಪಿಸಿದ್ದಾರೆ. ನೀನು ಬೇರೆ ಕಡೆ ಮಾಡ್ತೀಯಲ್ಲಾ.. ಇಲ್ಲಿ ಯಾಕೆ ವಿರೋಧ ಮಾಡ್ತೀಯಾ ಎಂದು ಪ್ರಶ್ನೆ ಮಾಡಿ ಹಲ್ಲೆ ನಡೆಸಿದ್ದಾರೆ. ಒಂದು ದಿನದ ಹಿಂದೆ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಬೋಟುಗಳನ್ನು ಗಣಿ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದರು.
ಪಾವೂರು ಉಳಿಯ ದ್ವೀಪದ ಸುತ್ತ ಮಣ್ಣನ್ನು ಅಗೆದು ಮರಳುಗಾರಿಕೆ ನಡೆಸಲಾಗುತ್ತಿದ್ದು ಇದರಿಂದ ದ್ವೀಪದ ಅಸ್ತಿತ್ವಕ್ಕೆ ತೊಂದರೆಯಾಗಿದೆ. ದ್ವೀಪದ ವ್ಯಾಪ್ತಿ ಕಿರಿದಾಗಿದ್ದು ಇದನ್ನು ವಿರೋಧಿಸಿ ಕೆಥೋಲಿಕ್ ಸಭಾದಿಂದ ಇತ್ತೀಚೆಗೆ ಬೃಹತ್ ಪ್ರತಿಭಟನೆ ನಡೆದಿತ್ತು. ದ್ವೀಪದಲ್ಲಿ 40ರಷ್ಟು ಕ್ರಿಸ್ತಿಯನ್ ಕುಟುಂಬಗಳು ವಾಸವಿದ್ದು ಇವರ ಗೋಳು ಅರಣ್ಯ ರೋದನವಾಗಿದೆ.
Mangalore Alwyn DSouza president of Catholic Sabha attacked thrashed by illegal sand goons for taking youtube journalist to film the illegal sand mining at Pavoor uliya. Alwyn DSouza was beaten near Adyar by miscreants. A case has been registered at the Kankandy rural police station.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 09:51 pm
Mangalore Correspondent
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
VK Furniture & Electronics Launches 4th Annua...
04-08-25 04:48 pm
Dharmasthala Skeleton Mystery: ಧರ್ಮಸ್ಥಳ ಅಸ್ತಿ...
04-08-25 01:58 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm