ಬ್ರೇಕಿಂಗ್ ನ್ಯೂಸ್
20-10-24 11:47 am Mangaluru Correspondent ಕ್ರೈಂ
ಉಳ್ಳಾಲ, ಅ-20: ರೈಲ್ವೇ ಹಳಿಯ ಎರಡೂ ಬದಿಗಳಲ್ಲಿ ಆಗಂತುಕರಿಬ್ಬರು ಜಲ್ಲಿ ಕಲ್ಲುಗಳನ್ನಿಟ್ಟು ಪರಾರಿಯಾದ ಘಟನೆ ಉಳ್ಳಾಲ ತಾಲೂಕಿನ ತೊಕ್ಕೊಟ್ಟು ರೈಲ್ವೇ ಓವರ್ ಬ್ರಿಡ್ಜ್ ಕೆಳಭಾಗದಲ್ಲಿ ನಿನ್ನೆ ರಾತ್ರಿ ನಡೆದಿದೆ. ಹಳಿಯಲ್ಲಿ ರೈಲುಗಳು ಚಲಿಸುವಾಗ ಭಾರೀ ಸದ್ದು ಕೇಳಿಸಿದ್ದು ಸ್ಥಳೀಯರು ಘಟನೆಯಿಂದ ಆತಂಕಕ್ಕೀಡಾಗಿದ್ದಾರೆ.
ನಿನ್ನೆ ತಡರಾತ್ರಿ 8 ಗಂಟೆ ಸುಮಾರಿಗೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ನ ನಿವಾಸಿ ಮಹಿಳೆಯರು ಹಳಿಯಲ್ಲಿ ಇಬ್ಬರು ಅಪರಿಚಿತರನ್ನ ಕಂಡಿದ್ದರು. ಮಹಿಳೆಯರು ಮನೆ ತಲುಪಿದಾಗ ರೈಲೊಂದು ಕೇರಳ ಕಡೆಗೆ ತೆರಳಿದ್ದು, ಈ ವೇಳೆ ಭಾರೀ ಸದ್ದು ಕೇಳಿಸಿತ್ತು. ಇದನ್ನ ಸ್ಥಳೀಯರು ಅಷ್ಟು ಗಂಭೀರವಾಗಿ ಪರಿಗಣಿಸಿರಲಿಲ್ಲ. ಬಳಿಕ ಎರಡು ರೈಲು ಚಲಿಸಿದಾಗಲೂ ಮತ್ತೆ ಅಂತಹದ್ದೇ ಭಾರಿ ಸದ್ದು ಕೇಳಿಸಿದೆ. ಘಟನೆಯಿಂದ ಸ್ಥಳೀಯರ ಮನೆಗಳೂ ಕಂಪಿಸಿದೆ. ತಕ್ಷಣವೇ ಸ್ಥಳೀಯರು ರೈಲು ಅಪಘಾತವೆಂದು ಭಾವಿಸಿ ಹಳಿಯತ್ತ ದೌಡಾಯಿಸಿದಾಗ ಹಳಿ ಮೇಲಿರಿಸಲಾದ ಜಲ್ಲಿಕಲ್ಲುಗಳು ತುಂಡಾಗಿರುವುದು ಕಂಡು ಬಂದಿದೆ. ಅನೇಕ ವರ್ಷಗಳಿಂದ ತೊಕ್ಕೊಟ್ಟು ಪರಿಸರದಲ್ಲಿ ನಾವು ನೆಲೆಸಿದ್ದು ರೈಲು ಹಳಿಯಲ್ಲಿ ಕಂಪನದ ಅನುಭವ ಇದೇ ಮೊದಲ ಬಾರಿಗೆ ಆಗಿದೆ ಅನ್ನುವ ಅಭಿಪ್ರಾಯವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.




ಈ ಕುರಿತು ರೈಲ್ವೇ ಪೊಲೀಸ್ ಠಾಣೆ ಮತ್ತು ಉಳ್ಳಾಲ ಪೊಲೀಸ್ ಠಾಣೆಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಓವರ್ ಬ್ರಿಡ್ಜ್ ಕೆಳಗಡೆಯ ರೈಲ್ವೇ ಹಳಿಗಳಲ್ಲಿ ನಿತ್ಯವೂ ಅಪರಿಚಿತರು ಪಾನಮತ್ತರಾಗಿ ಬಂದು ಕುಳಿತು ಕೊಳ್ಳುತ್ತಾರೆಂದು ಸ್ಥಳೀಯರು ಆರೋಪಿಸಿದ್ದಾರೆ. ರೈಲ್ವೇ ಹಳಿಯಲ್ಲಿ ಸಂಭವನೀಯ ಅನಾಹುತವೊಂದು ತಪ್ಪಿದ್ದು, ರೈಲ್ವೇ ಇಲಾಖೆಯು ಘಟನೆಯನ್ನ ಗಂಭೀರ ಪರಿಗಣಿಸಿ ಈ ಪ್ರದೇಶದಲ್ಲಿ ಸಿಸಿಟಿವಿ ಅಳವಡಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಉಳ್ಳಾಲ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಬಾಲಕೃಷ್ಣ ಅವರು ಆದಿತ್ಯವಾರ ಬೆಳಗ್ಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇತ್ತೀಚಿಗೆ ಪಾಕ್ ಭಯೋತ್ಪಾದಕ ಫರ್ಹಾತುಲ್ಲಾ ಘೋರಿ ಭಾರತದಾದ್ಯಂತ ರೈಲುಗಳನ್ನು ಹಳಿ ತಪ್ಪಿಸುವ ಎಚ್ಚರಿಕೆ ನೀಡಿದ್ದ ಬೆನ್ನಲ್ಲೇ ತೊಕ್ಕೊಟ್ಟಿನ ಘಟನೆ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.
On Saturday night, miscreants placed stones on the railway tracks near Ganesh Nagar, Thokkottu overbridge, causing an incident that left locals startled when the train passed over them.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm