ಬ್ರೇಕಿಂಗ್ ನ್ಯೂಸ್
12-12-20 10:57 am Mangalore Correspondent ಕ್ರೈಂ
ಬಂಟ್ವಾಳ, ಡಿ.12 : ಮದುವೆ ಹಾಲ್ ಗಳಲ್ಲಿ ಮಹಿಳೆಯರ ಬ್ಯಾಗ್, ಮಕ್ಕಳ ಕತ್ತಿನಿಂದ ಚಿನ್ನಾಭರಣ ಲಪಟಾಯಿಸುವುದನ್ನೇ ಕಾಯಕ ಮಾಡಿಕೊಂಡಿದ್ದ ಆರೋಪದಲ್ಲಿ ಫಾತಿಮಾ ಶಹನಾಝ್ ಎಂಬಾಕೆಯನ್ನು ಬಂಟ್ವಾಳ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಮದುವೆ ಹಾಲ್ ಗಳಲ್ಲಿ ಮಹಿಳೆಯರ ಬ್ಯಾಗ್, ಚಿಕ್ಕ ಮಕ್ಕಳ ಕತ್ತಿನಿಂದ ಚಿನ್ನದ ಸರ ಕಳವಾಗುತ್ತಿರುವ ಬಗ್ಗೆ ಬಿ.ಸಿ.ರೋಡಿನ ಹಾಲ್ ಮಾಲೀಕರೊಬ್ಬರು ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದರು. ಎರಡು ದಿನಗಳ ಹಿಂದೆ ಪಾಣೆಮಂಗಳೂರಿನ ಆಡಿಟೋರಿಯಂ ಒಂದರಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಹೆಣ್ಣು ಮಗುವನ್ನು ಪುಸಲಾಯಿಸಿ ಕತ್ತಿನಿಂದ ಚಿನ್ನದ ಸರ ಕಸಿಯಲು ಮಹಿಳೆಯೊಬ್ಬಳು ಯತ್ನಿಸಿದಾಗ ಮಗು ಕಿರುಚಿತ್ತು. ತಕ್ಷಣ ಅಲ್ಲಿ ಸೇರಿದ್ದವರು ಮಹಿಳೆಯನ್ನು ಹಿಡಿದು ಬಂಟ್ವಾಳ ನಗರ ಠಾಣೆ ಪೊಲೀಸರಿಗೆ ಒಪ್ಪಿಸಿದ್ದರು. ಬಳಿಕ ಅಪರಾಧ ವಿಭಾಗದ ಎಸ್ ಐ ಕಲೈಮಾರ್ ಮತ್ತವರ ಸಿಬ್ಬಂದಿ ಮಹಿಳೆಯನ್ನು ವಿಚಾರಣೆಗೆ ಒಳಪಡಿಸಿದಾಗ ಹಲವು ಕಡೆ ಈ ಕೃತ್ಯ ನಡೆಸಿರುವುದನ್ನು ಬಾಯಿಬಿಟ್ಟಿದ್ದಾಳೆ.
ಕಳವುಗೈದ ಚಿನ್ನಾಭರಣ ಕರಗಿಸಿ ಹೊಸ ರೂಪ ನೀಡಿದ್ದ ಸುಮಾರು 234 ಗ್ರಾಂ ಚಿನ್ನವನ್ನು ಫಾತಿಮಾಳಿಂದ ವಶಕ್ಕೆ ಪಡೆಯಲಾಗಿದೆ. ಉಳಿದಂತೆ ಒಂದಷ್ಟು ಚಿನ್ನ ಮಾರಿದ ಹಣವನ್ನು ಬ್ಯಾಂಕ್ ಖಾತೆಯಲ್ಲಿ ಜಮೆ ಮಾಡಿದ್ದು ತಿಳಿದು ಬಂದಿದೆ. 10 ವರ್ಷಗಳಿಂದ ಆಕೆ ಈ ಕೃತ್ಯದಲ್ಲಿ ತೊಡಗಿರುವುದು ಪೊಲೀಸರ ತನಿಖೆ ವೇಳೆ ಬಯಲಾಗಿದೆ. ಆರೋಪಿಯನ್ನು ಕೋರ್ಟ್ ಗೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ದ.ಕ ಜಿಲ್ಲಾ ಎಸ್ಪಿ ಲಕ್ಷ್ಮೀನಾರಾಯಣ ಮಾರ್ಗದರ್ಶನ, ಡಿವೈಎಸ್ಪಿ ವೆಲೆಂಟಿನ್ ಡಿಸೋಜ,ಇನ್ಸ್ ಪೆಕ್ಟರ್ ನಾಗರಾಜ್ ಅವರ ನಿರ್ದೇಶನದಂತೆ ಅಪರಾಧ ವಿಭಾಗದ ಎಸ್ ಐ ಕಲೈಮಾರ್ ಮತ್ತವರ ತಂಡ ಮುಂದಿನ ತನಿಖೆ ನಡೆಸುತ್ತಿದ್ದಾರೆ.
Bantwal town police personnel have arrested a woman who is accused of stealing jewellery from the necks of the children and ornaments from women's handbags at wedding functions.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm