ಬ್ರೇಕಿಂಗ್ ನ್ಯೂಸ್
12-12-20 10:57 am Mangalore Correspondent ಕ್ರೈಂ
ಬಂಟ್ವಾಳ, ಡಿ.12 : ಮದುವೆ ಹಾಲ್ ಗಳಲ್ಲಿ ಮಹಿಳೆಯರ ಬ್ಯಾಗ್, ಮಕ್ಕಳ ಕತ್ತಿನಿಂದ ಚಿನ್ನಾಭರಣ ಲಪಟಾಯಿಸುವುದನ್ನೇ ಕಾಯಕ ಮಾಡಿಕೊಂಡಿದ್ದ ಆರೋಪದಲ್ಲಿ ಫಾತಿಮಾ ಶಹನಾಝ್ ಎಂಬಾಕೆಯನ್ನು ಬಂಟ್ವಾಳ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಮದುವೆ ಹಾಲ್ ಗಳಲ್ಲಿ ಮಹಿಳೆಯರ ಬ್ಯಾಗ್, ಚಿಕ್ಕ ಮಕ್ಕಳ ಕತ್ತಿನಿಂದ ಚಿನ್ನದ ಸರ ಕಳವಾಗುತ್ತಿರುವ ಬಗ್ಗೆ ಬಿ.ಸಿ.ರೋಡಿನ ಹಾಲ್ ಮಾಲೀಕರೊಬ್ಬರು ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದರು. ಎರಡು ದಿನಗಳ ಹಿಂದೆ ಪಾಣೆಮಂಗಳೂರಿನ ಆಡಿಟೋರಿಯಂ ಒಂದರಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಹೆಣ್ಣು ಮಗುವನ್ನು ಪುಸಲಾಯಿಸಿ ಕತ್ತಿನಿಂದ ಚಿನ್ನದ ಸರ ಕಸಿಯಲು ಮಹಿಳೆಯೊಬ್ಬಳು ಯತ್ನಿಸಿದಾಗ ಮಗು ಕಿರುಚಿತ್ತು. ತಕ್ಷಣ ಅಲ್ಲಿ ಸೇರಿದ್ದವರು ಮಹಿಳೆಯನ್ನು ಹಿಡಿದು ಬಂಟ್ವಾಳ ನಗರ ಠಾಣೆ ಪೊಲೀಸರಿಗೆ ಒಪ್ಪಿಸಿದ್ದರು. ಬಳಿಕ ಅಪರಾಧ ವಿಭಾಗದ ಎಸ್ ಐ ಕಲೈಮಾರ್ ಮತ್ತವರ ಸಿಬ್ಬಂದಿ ಮಹಿಳೆಯನ್ನು ವಿಚಾರಣೆಗೆ ಒಳಪಡಿಸಿದಾಗ ಹಲವು ಕಡೆ ಈ ಕೃತ್ಯ ನಡೆಸಿರುವುದನ್ನು ಬಾಯಿಬಿಟ್ಟಿದ್ದಾಳೆ.
ಕಳವುಗೈದ ಚಿನ್ನಾಭರಣ ಕರಗಿಸಿ ಹೊಸ ರೂಪ ನೀಡಿದ್ದ ಸುಮಾರು 234 ಗ್ರಾಂ ಚಿನ್ನವನ್ನು ಫಾತಿಮಾಳಿಂದ ವಶಕ್ಕೆ ಪಡೆಯಲಾಗಿದೆ. ಉಳಿದಂತೆ ಒಂದಷ್ಟು ಚಿನ್ನ ಮಾರಿದ ಹಣವನ್ನು ಬ್ಯಾಂಕ್ ಖಾತೆಯಲ್ಲಿ ಜಮೆ ಮಾಡಿದ್ದು ತಿಳಿದು ಬಂದಿದೆ. 10 ವರ್ಷಗಳಿಂದ ಆಕೆ ಈ ಕೃತ್ಯದಲ್ಲಿ ತೊಡಗಿರುವುದು ಪೊಲೀಸರ ತನಿಖೆ ವೇಳೆ ಬಯಲಾಗಿದೆ. ಆರೋಪಿಯನ್ನು ಕೋರ್ಟ್ ಗೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ದ.ಕ ಜಿಲ್ಲಾ ಎಸ್ಪಿ ಲಕ್ಷ್ಮೀನಾರಾಯಣ ಮಾರ್ಗದರ್ಶನ, ಡಿವೈಎಸ್ಪಿ ವೆಲೆಂಟಿನ್ ಡಿಸೋಜ,ಇನ್ಸ್ ಪೆಕ್ಟರ್ ನಾಗರಾಜ್ ಅವರ ನಿರ್ದೇಶನದಂತೆ ಅಪರಾಧ ವಿಭಾಗದ ಎಸ್ ಐ ಕಲೈಮಾರ್ ಮತ್ತವರ ತಂಡ ಮುಂದಿನ ತನಿಖೆ ನಡೆಸುತ್ತಿದ್ದಾರೆ.
Bantwal town police personnel have arrested a woman who is accused of stealing jewellery from the necks of the children and ornaments from women's handbags at wedding functions.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm