ಬ್ರೇಕಿಂಗ್ ನ್ಯೂಸ್
23-10-24 08:38 pm Mangalore Correspondent ಕ್ರೈಂ
ಮಂಗಳೂರು, ಅ.23: ಹರ್ಯಾಣದಲ್ಲಿ ಏಡ್ ಏಜನ್ಸಿ ತೆಗೆಸಿಕೊಡುವುದಾಗಿ ಹೇಳಿ ಮಂಗಳೂರಿನ ಏಡ್ ಏಜನ್ಸಿಯೊಂದಕ್ಕೆ 50 ಸಾವಿರ ರೂ. ಪಡೆದು ಸೈಬರ್ ವಂಚನೆ ಮಾಡಿರುವ ಬಗ್ಗೆ ಮಂಗಳೂರಿನ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನಲ್ಲಿ ಜಾಹೀರಾತು ಏಜನ್ಸಿ ಹೊಂದಿರುವ ವ್ಯಕ್ತಿಯೊಬ್ಬರು, ಬೇರೆ ಬೇರೆ ಕಡೆಗಳಿಂದ ಜಾಹೀರಾತು ಪಡೆಯಲು ಏಜನ್ಸಿ ಪಡೆದಿರುತ್ತಾರೆ. ಬೇರೆ ರಾಜ್ಯಗಳ ಏಡ್ ಏಜನ್ಸಿ ಕುರಿತಾಗಿ ಮಾಹಿತಿ ಪಡೆಯಲು ಗೂಗಲ್ ನಲ್ಲಿ ಸರ್ಚ್ ಮಾಡಿದ್ದರು. ಜೂನ್ 6ರಂದು ಸಂಜೆ ನಾಲ್ಕು ಗಂಟೆಗೆ ತನ್ನ ಕಚೇರಿಯಲ್ಲಿದ್ದಾಗ, ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಹಿಂದಿಯಲ್ಲಿ ಮಾತನಾಡಿದ್ದು ತನ್ನನ್ನು ಹರ್ಯಾಣ ಮೂಲದ ಸಂಜಯ್ ಎಂದು ಪರಿಚಯ ಮಾಡಿಕೊಂಡಿದ್ದ. ಹರ್ಯಾಣದಿಂದ ಏಡ್ ಏಜನ್ಸಿ ಮಾಡಿಕೊಡುವುದಾಗಿ ಹೇಳಿದ್ದಾನೆ.
ಅದಕ್ಕೆ ಮಂಗಳೂರಿನ ವ್ಯಕ್ತಿ ಹರ್ಯಾಣದ್ದು ನಮಗೆ ಬೇಡ ಎಂದು ನಿರಾಕರಿಸಿದ್ದಾರೆ. ಆನಂತರವೂ ಅಪರಿಚಿತ ವ್ಯಕ್ತಿ ಕರೆ ಮಾಡಿದ್ದು, ನೀವು ಒಪ್ಪಿದರೆ ಹರ್ಯಾಣದಿಂದ ಜಾಹೀರಾತುಗಳನ್ನು ತೆಗೆಸಿಕೊಡುತ್ತೇನೆ, ಏಡ್ ಏಜನ್ಸಿಯನ್ನೂ ಮಾಡಿಸುತ್ತೇನೆ ಎಂದು ನಂಬಿಸಿದ್ದಾನೆ. ಇದನ್ನು ನಂಬಿದ ವ್ಯಕ್ತಿಗೆ ಏಜನ್ಸಿ ಆರಂಭಿಸಬೇಕಿದ್ದಲ್ಲಿ 50 ಸಾವಿರ ಡಿಪಾಸಿಟ್ ನೀಡಬೇಕೆಂದು ಹೇಳಿದ್ದಾನೆ. ಒಂದು ವೇಳೆ ಏಜನ್ಸಿ ಇಷ್ಟವಾಗದಿದ್ದರೆ, ಹಣವನ್ನು ಮರಳಿಸುವುದಾಗಿಯೂ ಹೇಳಿದ್ದಾನೆ. ನಂತರ, ವಾಟ್ಸಾಪ್ ನಲ್ಲಿ ಎಚ್ ಡಿಎಫ್ ಸಿ ಬ್ಯಾಂಕಿನ ಖಾತೆಯನ್ನು ಕಳಿಸಿಕೊಟ್ಟಿದ್ದ. ಇದನ್ನು ನಂಬಿದ ವ್ಯಕ್ತಿಯು ಜೂನ್ 16ರಂದು ಸಂಜೆ ತನ್ನ ಯೂನಿಯನ್ ಬ್ಯಾಂಕ್ ಖಾತೆಯಿಂದ ಆನ್ಲೈನ್ ಮೂಲಕ 50 ಸಾವಿರ ಹಣವನ್ನು ಕಳಿಸಿದ್ದರು.
ಸ್ವಲ್ಪ ಹೊತ್ತಿಗೆ ಆ ವ್ಯಕ್ತಿಗೆ ಕರೆ ಮಾಡಿದರೆ, ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಆನಂತರವೂ ತುಂಬಾ ಸಲ ಕರೆ ಮಾಡಿದರೂ, ಸ್ವಿಚ್ ಆಫ್ ಎಂದೇ ಬಂದಿತ್ತು. ಇದರಿಂದ ತಾನು ಏಡ್ ಏಜನ್ಸಿಯೆಂದು ಹೇಳಿ 50 ಸಾವಿರ ಕೊಟ್ಟು ಮೋಸ ಹೋಗಿದ್ದೇನೆಂದು ತಿಳಿದು ಘಟನೆ ನಡೆದು ನಾಲ್ಕು ತಿಂಗಳ ಬಳಿಕ ಅಕ್ಟೋಬರ್ 20ರಂದು 1930 ಸೈಬರ್ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದಾರೆ.
Add agency in Mangalore cheated of 50 thousand in the name of opening branch at haryana. A case has been registered at the cyber crime police station.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm