ಬ್ರೇಕಿಂಗ್ ನ್ಯೂಸ್
29-10-24 12:38 pm Mangalore Correspondent ಕ್ರೈಂ
ಮಂಗಳೂರು, ಅ.29: ಕಟೀಲು ಬಳಿಯ ಕೊಂಡೆಮೂಲ ಗ್ರಾಮದಲ್ಲಿ ತಾರನಾಥ (45) ಎಂಬ ವ್ಯಕ್ತಿಯೊಬ್ಬರು ಮನೆ ಬಳಿಯ ಗುಡ್ಡದಲ್ಲಿ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಬಗ್ಗೆ ಮನೆಮಂದಿ ಕೊಲೆ ಶಂಕೆ ವ್ಯಕ್ತಪಡಿಸಿ ಬಜ್ಪೆ ಠಾಣೆಗೆ ದೂರು ನೀಡಿದ್ದಾರೆ.
ತಾರನಾಥ್ ತೀವ್ರ ಕುಡಿತದ ಚಟ ಹೊಂದಿದ್ದು, ಶನಿವಾರ ಸಂಜೆ ಮನೆಯಲ್ಲಿ ಪತ್ನಿ ಜೊತೆಗೆ ಗಲಾಟೆ ಮಾಡಿ ತೆರಳಿದ್ದರು ಎನ್ನಲಾಗಿದೆ. ಅಂದು ರಾತ್ರಿ ವೇಳೆ ಮನೆಗೆ ಮರಳಿರಲಿಲ್ಲ. ಹೀಗಾಗಿ ಮನೆಯ ಮಕ್ಕಳು ಹತ್ತಿರದ ಸಂಬಂಧಿಕರ ಮನೆಗಳಿಗೆ ಫೋನ್ ಮಾಡಿ, ತಂದೆ ಬಂದಿದ್ದಾರೆಯೇ ಎಂದು ವಿಚಾರಿಸಿದ್ದರು. ಮರುದಿನ ಬೆಳಗ್ಗೆ ಮನೆ ಬಳಿಯ ಗುಡ್ಡದಲ್ಲಿ ತಾರನಾಥ ಅವರ ಶವ ಪತ್ತೆಯಾಗಿದ್ದು, ಕುತ್ತಿಗೆ ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದೆ.
ಕುತ್ತಿಗೆಯನ್ನು ಕೇಬಲ್ ವಯರ್ ಮಾದರಿಯ ಹಗ್ಗದಿಂದ ಬಿಗಿದಿರುವಂತೆ ಕಂಡುಬಂದಿದ್ದು, ಹೀಗಾಗಿ ಯಾರೋ ಕೊಲೆ ಮಾಡಿರಬೇಕೆಂದು ಶಂಕಿಸಲಾಗಿದೆ. ಮುನ್ನಾ ದಿನ ಸಂಜೆ 6.30ರ ವೇಳೆಗೆ ಆ ದಾರಿಯಲ್ಲಿ ತೆರಳಿದ್ದನ್ನು ಇವರ ಅಣ್ಣ ನೋಡಿದ್ದರು. ಮರುದಿನ ಇವರ ಶವ ನಾಲಗೆ ಎಳೆದುಕೊಂಡು ಕುತ್ತಿಗೆಯನ್ನು ಕೇಬಲ್ ವಯರಿನಲ್ಲಿ ಬಿಗಿದ ರೀತಿ ಪತ್ತೆಯಾಗಿದೆ. ಈ ಬಗ್ಗೆ ತಾರನಾಥ ಅವರ ಪುತ್ರಿ ಬಜ್ಪೆ ಠಾಣೆಗೆ ದೂರು ನೀಡಿದ್ದು, ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಪೊಲೀಸರು ಆಸುಪಾಸಿನವರನ್ನು ವಿಚಾರಣೆ ನಡೆಸಿದ್ದು, ಕೊಲೆಯೋ, ಆತ್ಮಹತ್ಯೆಯೋ ಎನ್ನುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಕುತ್ತಿಗೆ ಬಿಗಿದ ರೀತಿ ಇದ್ದು, ಆತ್ಮಹತ್ಯೆ ಆಗಿರಲಿಕ್ಕಿಲ್ಲ ಎಂದು ಹೇಳಲು ಬರುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Body of 45 year old man found in mysterious way at Kateel in Mangalore, murder suspected. The deceased has been identified as Taranath.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
15-05-26 08:54 am
HK News Staffer
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm