ಬ್ರೇಕಿಂಗ್ ನ್ಯೂಸ್
29-10-24 12:38 pm Mangalore Correspondent ಕ್ರೈಂ
ಮಂಗಳೂರು, ಅ.29: ಕಟೀಲು ಬಳಿಯ ಕೊಂಡೆಮೂಲ ಗ್ರಾಮದಲ್ಲಿ ತಾರನಾಥ (45) ಎಂಬ ವ್ಯಕ್ತಿಯೊಬ್ಬರು ಮನೆ ಬಳಿಯ ಗುಡ್ಡದಲ್ಲಿ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಬಗ್ಗೆ ಮನೆಮಂದಿ ಕೊಲೆ ಶಂಕೆ ವ್ಯಕ್ತಪಡಿಸಿ ಬಜ್ಪೆ ಠಾಣೆಗೆ ದೂರು ನೀಡಿದ್ದಾರೆ.
ತಾರನಾಥ್ ತೀವ್ರ ಕುಡಿತದ ಚಟ ಹೊಂದಿದ್ದು, ಶನಿವಾರ ಸಂಜೆ ಮನೆಯಲ್ಲಿ ಪತ್ನಿ ಜೊತೆಗೆ ಗಲಾಟೆ ಮಾಡಿ ತೆರಳಿದ್ದರು ಎನ್ನಲಾಗಿದೆ. ಅಂದು ರಾತ್ರಿ ವೇಳೆ ಮನೆಗೆ ಮರಳಿರಲಿಲ್ಲ. ಹೀಗಾಗಿ ಮನೆಯ ಮಕ್ಕಳು ಹತ್ತಿರದ ಸಂಬಂಧಿಕರ ಮನೆಗಳಿಗೆ ಫೋನ್ ಮಾಡಿ, ತಂದೆ ಬಂದಿದ್ದಾರೆಯೇ ಎಂದು ವಿಚಾರಿಸಿದ್ದರು. ಮರುದಿನ ಬೆಳಗ್ಗೆ ಮನೆ ಬಳಿಯ ಗುಡ್ಡದಲ್ಲಿ ತಾರನಾಥ ಅವರ ಶವ ಪತ್ತೆಯಾಗಿದ್ದು, ಕುತ್ತಿಗೆ ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದೆ.
ಕುತ್ತಿಗೆಯನ್ನು ಕೇಬಲ್ ವಯರ್ ಮಾದರಿಯ ಹಗ್ಗದಿಂದ ಬಿಗಿದಿರುವಂತೆ ಕಂಡುಬಂದಿದ್ದು, ಹೀಗಾಗಿ ಯಾರೋ ಕೊಲೆ ಮಾಡಿರಬೇಕೆಂದು ಶಂಕಿಸಲಾಗಿದೆ. ಮುನ್ನಾ ದಿನ ಸಂಜೆ 6.30ರ ವೇಳೆಗೆ ಆ ದಾರಿಯಲ್ಲಿ ತೆರಳಿದ್ದನ್ನು ಇವರ ಅಣ್ಣ ನೋಡಿದ್ದರು. ಮರುದಿನ ಇವರ ಶವ ನಾಲಗೆ ಎಳೆದುಕೊಂಡು ಕುತ್ತಿಗೆಯನ್ನು ಕೇಬಲ್ ವಯರಿನಲ್ಲಿ ಬಿಗಿದ ರೀತಿ ಪತ್ತೆಯಾಗಿದೆ. ಈ ಬಗ್ಗೆ ತಾರನಾಥ ಅವರ ಪುತ್ರಿ ಬಜ್ಪೆ ಠಾಣೆಗೆ ದೂರು ನೀಡಿದ್ದು, ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಪೊಲೀಸರು ಆಸುಪಾಸಿನವರನ್ನು ವಿಚಾರಣೆ ನಡೆಸಿದ್ದು, ಕೊಲೆಯೋ, ಆತ್ಮಹತ್ಯೆಯೋ ಎನ್ನುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಕುತ್ತಿಗೆ ಬಿಗಿದ ರೀತಿ ಇದ್ದು, ಆತ್ಮಹತ್ಯೆ ಆಗಿರಲಿಕ್ಕಿಲ್ಲ ಎಂದು ಹೇಳಲು ಬರುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Body of 45 year old man found in mysterious way at Kateel in Mangalore, murder suspected. The deceased has been identified as Taranath.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
21-12-25 11:04 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am