ಬ್ರೇಕಿಂಗ್ ನ್ಯೂಸ್
02-11-24 12:36 pm Mangalore Correspondent ಕ್ರೈಂ
ಮಂಗಳೂರು, ನ.2: ಥೈಲ್ಯಾಂಡ್ ನಿಂದ ಗಾಂಜಾ ತರಿಸಿ ಮಂಗಳೂರಿನಲ್ಲಿ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನಿಂದ 30 ಲಕ್ಷ ರೂ. ಮೌಲ್ಯದ ಹೈಡ್ರೋವೀಡ್ ಗಾಂಜಾ, 2.5 ಕೆಜಿ ಗಾಂಜಾ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ತೊಕ್ಕೊಟ್ಟು ಚೊಂಬುಗುಡ್ಡೆ ನಿವಾಸಿ ಎಚ್. ಮೊಹಮ್ಮದ್ ಹಫೀಜ್ (23) ಬಂಧಿತ ಆರೋಪಿ. ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ನಗರದ ಕುದ್ರೋಳಿ ಪರಿಸರದಲ್ಲಿ ಹೈಡ್ರೋವೀಡ್ ಗಾಂಜಾ ಮತ್ತು ಗಾಂಜಾವನ್ನು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದಾಗ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಆರೋಪಿ ವಶದಿಂದ 30 ಲಕ್ಷ ರೂಪಾಯಿ ಮೌಲ್ಯದ 300 ಗ್ರಾಂ ಹೈಡ್ರೋವೀಡ್ ಗಾಂಜಾ ಹಾಗೂ 75,000 ರೂ. ಮೌಲ್ಯದ 2.5 ಕೆಜಿ ಗಾಂಜಾ, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪಕವನ್ನು ವಶಪಡಿಸಲಾಗಿದೆ. ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೈಡ್ರೋವೀಡ್ ಗಾಂಜಾವನ್ನು ಥೈಲ್ಯಾಂಡ್ನಿಂದ ತಂದಿರುವ ಬಗ್ಗೆ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಅಕ್ರಮ ಮಾದಕ ವಸ್ತು ಮಾರಾಟ ದಂಧೆಯಲ್ಲಿ ಹಲವಾರು ಮಂದಿ ಭಾಗಿಯಾಗಿದ್ದು, ಈ ನಿಟ್ಟಿನಲ್ಲಿ ಪತ್ತೆ ಕಾರ್ಯ ಮುಂದುವರಿಯಲಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
In an effort to make Mangaluru drug-free, the Mangaluru Central Crime Branch (CCB) police conducted an operation that led to the arrest of an individual accused of supplying narcotics to the city from abroad. During the operation, the police successfully seized Rs 30 lac worth of hydro weed ganja, 2.5 kg of regular ganja, and other items.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 07:38 pm
Mangalore Correspondent
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
VK Furniture & Electronics Launches 4th Annua...
04-08-25 04:48 pm
Dharmasthala Skeleton Mystery: ಧರ್ಮಸ್ಥಳ ಅಸ್ತಿ...
04-08-25 01:58 pm
Dharmasthala Case: ಧರ್ಮಸ್ಥಳ ಪ್ರಕರಣ ; ಆರನೇ ಪಾಯ...
04-08-25 01:24 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm