ಬ್ರೇಕಿಂಗ್ ನ್ಯೂಸ್
02-11-24 10:35 pm Udupi Correspondent ಕ್ರೈಂ
ಉಡುಪಿ, ನ.2: ಐಟಿ ಅಧಿಕಾರಿಗಳು ದಾಳಿ ನಡೆಸುತ್ತಾರೆ ಎಂದು ನಂಬಿಸಿ ಮನೆ ಯಜಮಾನಿಯನ್ನು ಕೆಲಸದಾಕೆಯೇ ಯಾಮಾರಿಸಿ, 7.50 ಲಕ್ಷ ರೂ. ನಗದು ಹಾಗೂ 3 ಲಕ್ಷ ಬೆಲೆಬಾಳುವ ಡೈಮಂಡ್ ನಕ್ಲೇಸನ್ನು ತೆಗೆದುಕೊಂಡು ಹೋಗಿ ಮೋಸ ಮಾಡಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ.
ಶಿವಳ್ಳಿ ಗ್ರಾಮದ ನಿವಾಸಿ ಜ್ಯೂಲಿಯಟ್ ಎಂಬವರು 4 ತಿಂಗಳಿನಿಂದ ಪೆರಂಪಳ್ಳಿಯ ಸುನೀತಾ ಅವರನ್ನು ಮನೆ ಕೆಲಸಕ್ಕೆ ಇಟ್ಟುಕೊಂಡಿದ್ದರು. ಕೆಲಸದಾಕೆ ಬಳಿ ಮನೆಯ ಯಜಮಾನಿ ತನ್ನ ಮತ್ತು ಗಂಡನ ನಡುವೆ ಇದ್ದ ಮನಸ್ತಾಪದ ಬಗ್ಗೆ ಹೇಳಿಕೊಂಡಿದ್ದರು. ಸುನೀತಾ ಅವರು ಜೂಲಿಯೆಟ್ಗೆ ಗಂಡನಿಗೆ ವಿಚ್ಛೇದನ ಕೊಡುವಂತೆ ಸಲಹೆ ನೀಡಿದ್ದರು. ಬೇಸರಗೊಂಡ ಜ್ಯೂಲಿಯೆಟ್ ಮನೆ ಬಿಟ್ಟು ಹೋಗಲು ನಿರ್ಧರಿಸಿದ್ದರು. ಈ ನಡುವೆ, ತಾಯಿಯನ್ನು ಮನೆಗೆ ಬರಲು ಹೇಳಿ ಅ.10ರಂದು ತಾಯಿಯಲ್ಲಿ ಬಟ್ಟೆಬರೆ ಹಾಗೂ ಸ್ವಲ್ಪ ಚಿನ್ನ ಹಾಗೂ ಗಂಡನ ಮನೆಯ ಲಾಕರ್ನಲ್ಲಿ ಇರಿಸಿದ್ದ 10 ಲಕ್ಷ ರೂಪಾಯಿಯಲ್ಲಿ 1 ಲಕ್ಷ ರೂ. ಹಣವನ್ನು ನೀಡಿದ್ದರು.
ಅ.29ರಂದು ಬೆಳಗ್ಗೆ ಜ್ಯೂಲಿಯೆಟ್ ಮನೆಯಲ್ಲಿದ್ದಾಗಲೇ ಸುನೀತಾ ಅವರು ಸ್ಟ್ಯಾನಿ ಎಂಬವರೊಂದಿಗೆ ಮನೆಗೆ ಬಂದು ಐ.ಟಿ. ಅಧಿಕಾರಿಗಳು ಬಂದಿದ್ದಾರೆ. ನಿಮ್ಮ ಮನೆಗೆ ರೈಡ್ ಮಾಡುತ್ತಾರೆ. ಲಾಕರ್ನಲ್ಲಿ ಇದ್ದ ಹಣ ಹಾಗೂ ಒಡವೆಯನ್ನು ತೆಗೆದುಕೊಡಿ, ಇಲ್ಲಾಂದ್ರೆ ಎತ್ಕೊಂಡು ಹೋಗುತ್ತಾರೆ ಎಂದು ಹೇಳಿ ಲಾಕರ್ ಕೀ ಪಡೆದಿದ್ದಾಳೆ. ಬಳಿಕ ಲಾಕರಿನಲ್ಲಿದ್ದ ಹಣದಲ್ಲಿ 1.50 ಲಕ್ಷ ರೂ.ಗಳನ್ನು ಜ್ಯೂಲಿಯೆಟ್ ಅವರ ಬ್ಯಾಗ್ ಗೆ ಹಾಕಿ ಉಳಿದ 7 ಲಕ್ಷ 50 ಸಾವಿರ ರೂ. ಹಾಗೂ 3 ಲಕ್ಷ ಬೆಲೆಬಾಳುವ ಡೈಮಂಡ್ ನೆಕ್ಲೆಸ್ ಅನ್ನು ತನ್ನ ಚೀಲದಲ್ಲಿ ಹಾಕಿಕೊಂಡು, ಸದ್ಯಕ್ಕೆ ಇದು ನನ್ನಲ್ಲಿ ಇರಲಿ, ಆನಂತರ ಕೊಡುತ್ತೇನೆ ಎಂದು ಹೇಳಿ ಒಯ್ದಿದ್ದರು.
ಐ.ಟಿ. ಅಧಿಕಾರಿಗಳು ದಾಳಿ ನಡೆಸುತ್ತಾರೆ ಎಂದು ನಂಬಿಸಿ ಸುನೀತಾ ಹಾಗೂ ಸ್ಟಾನಿ 7.50 ಲಕ್ಷ ರೂ. ನಗದು ಹಾಗೂ 3 ಲಕ್ಷ ಬೆಲೆಬಾಳುವ ಡೈಮಂಡ್ ಸರವನ್ನು ತೆಗೆದುಕೊಂಡು ಹೋಗಿ ಮೋಸ ಮಾಡಿರುವುದಾಗಿ ಜೂಲಿಯೆಟ್ ಪೊಲೀಸ್ ದೂರು ನೀಡಿದ್ದಾರೆ.
A housemaid allegedly made off with Rs 7.5 lac in cash and a diamond necklace valued at Rs 3 lac, deceiving her employer by claiming an impending IT raid at her residence under the jurisdiction of Manipal police station.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm