ಬ್ರೇಕಿಂಗ್ ನ್ಯೂಸ್
05-11-24 12:50 pm Mangaluru Correspondent ಕ್ರೈಂ
ಬಂಟ್ವಾಳ, ನ.5: ಬಂಟ್ವಾಳ ತಾಲೂಕಿನ ಪುದು ಗ್ರಾಮದ ಸುಜೀರ್ ಎಂಬಲ್ಲಿ ಶ್ರೀ ದೇವಕಿಕೃಷ್ಣ ರವಳನಾಥ ದೇವಸ್ಥಾನದ ಬಾಗಿಲು ಮುರಿದು ದೇವರ ಗರ್ಭಗುಡಿಯಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಕಳ್ಳರು ಕಳವು ಮಾಡಿದ್ದು ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ನೂರಾರು ವರ್ಷ ಹಳೆಯದಾದ ಸುಮಾರು ಒಂದೂವರೆ ಕೇಜಿ ತೂಕದ ದೇವರ ಬೆಳ್ಳಿಯ ಪೀಠ, ಚಿನ್ನದ ಮೂಗುತಿ, ದೇವರ ಕೊಡೆ ಸೇರಿದಂತೆ ಒಟ್ಟು 2 ಕೇಜಿ ಬೆಳ್ಳಿಯ ಆಭರಣಗಳು ಹಾಗೂ ಅಂದಾಜು ಮೂರು ಪವನ್ ತೂಕದ ಚಿನ್ನದ ಆಭರಣ ಕಳವಾಗಿದೆ. ಅ.4ರ ಸೋಮವಾರ ನಸುಕಿನಲ್ಲಿ 3.3ರ ವೇಳೆಗೆ ಮೂವರು ಆಗಂತುಕರು ದೇವಸ್ಥಾನದ ಹಿಂಬಾಗಿಲು ಮುರಿದು ಒಳನುಗ್ಗಿದ್ದಾರೆ. ಬಳಿಕ ದೇವಸ್ಥಾನದೊಳಗೆ ಸುತ್ತಾಡಿ ಗರ್ಭಗುಡಿಯೊಳಗೆ ನುಗ್ಗಿ ದೇವರ ಬೆಳ್ಳಿಯ ಪೀಠ ಹಾಗೂ ಬಂಗಾರದ ವಸ್ತುಗಳನ್ನು ತೆಗೆದು ಹೊರತಂದು ಗೋಣಿಯಲ್ಲಿ ತುಂಬಿಸಿದ್ದಾರೆ.





ಗೋಣಿಯನ್ನು ನೆಲದಲ್ಲಿ ಹಾಸಿ ಕಳವುಗೈದ ಆಭರಣಗಳನ್ನು ಒಂದರಲ್ಲಿಯೇ ತುಂಬಿಸಿ, ಅದನ್ನು ಕಟ್ಟಿ ಹೆಗಲಿಗೇರಿಸಿಕೊಂಡು ಹೋಗುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಳ್ಳರು ಕೈಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ತಿರುಗಾಡುತ್ತಿರುವುದು ಕಂಡುಬಂದಿದೆ. ಕಳ್ಳರು ದೇವಸ್ಥಾನಕ್ಕೆ ನುಗ್ಗಿದ್ದನ್ನು ದೇವಸ್ಥಾನದ ಸಮೀಪದಲ್ಲೇ ಇದ್ದ ಅರ್ಚಕರ ಸಾಕು ನಾಯಿ ಗಮನಿಸಿದ್ದು, ಜೋರಾಗಿ ಬೊಗಳಲಾರಂಭಿಸಿದೆ. ನಾಯಿಯ ನಿರಂತರ ಅರಚಾಟಕ್ಕೆ ಎಚ್ಚರಗೊಂಡ ಅರ್ಚಕರು ದೇವಸ್ಥಾನದತ್ತ ವೀಕ್ಷಿಸಿದಾಗ ಮತ್ತಷ್ಟು ಬೊಗಳಲಾರಂಭಿಸಿದೆ. ಬಳಿಕ ಅರ್ಚಕರು ಸಿಸಿಟಿವಿ ಗಮನಿಸಿದಾಗ, ಒಳಗೆ ಮೂವರು ಆಗಂತುಕರು ಚಿನ್ನಾಭರಣಗಳನ್ನು ಕಳವುಗೈಯುತ್ತಿರುವ ದೃಶ್ಯ ಕಂಡುಬಂದಿತ್ತು.
ಕೂಡಲೇ ಅರ್ಚಕರು ದೇವಸ್ಥಾನದ ಆಡಳಿತ ಸಂಚಾಲಕರಿಗೆ ಕರೆ ಮಾಡಿದ್ದು ಕೈಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದ ಮೂವರು ದೇವಸ್ಥಾನದೊಳಗಿದ್ದಾರೆ. ಒಬ್ಬನಿಗೆ ಹೋಗಲು ಭಯವಾಗುತ್ತಿದೆ, ತಕ್ಷಣ ನೀವು ಬನ್ನಿ ಎಂದು ಹೇಳಿದ್ದಾರೆ. ಅದರಂತೆ, ಅವರು ಬರುವಷ್ಟರಲ್ಲಿ ಕಳ್ಳರು ತಮ್ಮ ಕೃತ್ಯ ಮುಗಿಸಿ ಪರಾರಿಯಾಗಿದ್ದಾರೆ. ಘಟನೆ ಬಗ್ಗೆ ದೇವಸ್ಥಾನದ ಆಡಳಿತ ಸಂಚಾಲಕ ರಮೇಶ್ ನಾಯಕ್ ಬಂಟ್ವಾಳ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಸಿಸಿಟಿವಿ ಆಧರಿಸಿ ತನಿಖೆ ನಡೆಸುತ್ತಿದ್ದಾರೆ.
#Mangalore Gold ornaments worth Rs 2.3 lac stolen from #temple in #bantwal, CCTV footage captures #robbery #mangalorenews #templerobbery pic.twitter.com/AyZD6l7MjX
— Headline Karnataka (@hknewsonline) November 5, 2024
A gang of thieves broke into the Sajeeru Sri Devakikrishna Ravalanatha Temple near Farangipete and made off with cash and gold ornaments worth Rs 2.3 lac in the early hours of Monday. The incident occurred around 3 am, when the gang broke through the back door and entered the sanctum sanctorum. They stole items including a 1.5 kg silver pedestal, a gold nose ring, a ceremonial umbrella, and various other valuables. I
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm