ಬ್ರೇಕಿಂಗ್ ನ್ಯೂಸ್
05-11-24 05:05 pm HK News Desk ಕ್ರೈಂ
ಹಾಸನ, ನ 05: ಪೊಲೀಸ್ ಕಾನ್ಸ್ಟೇಬಲ್ವೋರ್ವರನ್ನು ಬೀಕರವಾಗಿ ಕೊಚ್ಚಿ ಕೊಲೆಗೈದಿರುವ ಪ್ರಕರಣ ಹಾಸನ ತಾಲೂಕಿನ ದುದ್ದ ಸಮೀಪ ಸೋಮವಾರ ರಾತ್ರಿ ನಡೆದಿದೆ. ಅರಸೀಕೆರೆ ತಾಲೂಕಿನ ಬಾಗೇಶಪುರ ಗ್ರಾಮದ ಹರೀಶ್ (32) ಕೊಲೆಯಾದವರು.
ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯ ಕಾನ್ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಹರೀಶ್, ಇದೇ ನವೆಂಬರ್ 11ರಂದು ನಿಶ್ಚಯವಾಗಿದ್ದ ಯುವತಿಯ ಜೊತೆ ಸಪ್ತಪದಿ ತುಳಿಯಬೇಕಿತ್ತು.
ಸೋಮವಾರ ರಾತ್ರಿ ತನ್ನ ಸ್ನೇಹಿತರಿಗೆ, ಸಂಬಂಧಿಕರಿಗೆ ಲಗ್ನಪತ್ರಿಕೆ ಕೊಟ್ಟು ಹರೀಶ್ ಮನೆಗೆ ವಾಪಸಾಗುತ್ತಿದ್ದರು. ಈ ವೇಳೆ ದುದ್ದ ಹೊರವಲಯದ ಸ್ಕೈ ಲ್ಯಾಂಡ್ ಹೋಟೆಲ್ ಸಮೀಪ ದ್ವಿಚಕ್ರ ವಾಹನವನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಮನಸೋಇಚ್ಛೆ ಹಲ್ಲೆ ಮಾಡಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.
ಎಸ್ಪಿ ಮಹಮದ್ ಸುಜಿತಾ ಹಾಗೂ ದುದ್ದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹಾಸನದ ಜಯಚಾಮರಾಜೇಂದ್ರ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ದುದ್ದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಈಗಾಗಲೇ ಮೂವರು ಆರೋಪಿಗಳನ್ನು ಗುರುತಿಸಿರುವ ಪೊಲೀಸರು, ಇಂದು ಸಂಜೆಯೊಳಗೆ ಪ್ರಮುಖ ಆರೋಪಿಯನ್ನು ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Police constable brutal murder in Hassan. The deceased has been identified as Harish. He was about to get married and was on his way home giving wedding invitation cards to his family members.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm