ಬ್ರೇಕಿಂಗ್ ನ್ಯೂಸ್
10-11-24 10:53 pm Mangalore Correspondent ಕ್ರೈಂ
ಮಂಗಳೂರು, ನ.10: ಹುಡುಗಿ ಹುಡುಕಿ ಬಂದನೆಂಬ ಕಾರಣಕ್ಕೆ ಮುಸ್ಲಿಂ ಯುವಕನೊಬ್ಬನಿಗೆ ಯುವಕರ ತಂಡವೊಂದು ಕಟ್ಟಿ ಹಾಕಿ ಥಳಿಸಿ ಚಿತ್ರಹಿಂಸೆ ಕೊಟ್ಟು ನೈತಿಕ ಪೊಲೀಸ್ ಗೂಂಡಾಗಿರಿ ಮೆರೆದ ಘಟನೆ ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಕಂಚಿನಡ್ಕ ಪದವಿನಲ್ಲಿ ನಡೆದಿದೆ.
ಮಹಮ್ಮದ್ ಮುಸ್ತಾಫ (21) ಎಂಬ ಯುವಕನಿಗೆ ಕಟ್ಟಿ ಹಾಕಿ ಅರೆಬೆತ್ತಲೆ ಮಾಡಿ ಚಿತ್ರಹಿಂಸೆ ನೀಡಿದ್ದು ಇದರ ವಿಡಿಯೋ ವೈರಲ್ ಆಗಿದೆ. ನ.8ರಂದು ಘಟನೆ ನಡೆದಿದ್ದು ರಾತ್ರಿ ವೇಳೆ ಸ್ಥಳೀಯರು ಗುಂಪು ಸೇರಿ ಹಲ್ಲೆಗೈದಿದ್ದಾರೆ. ಮಹಮ್ಮದ್ ಮುಸ್ತಾಫ ದೂರಿನಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಮ್ಮದ್ ಮುಸ್ತಾಫನಿಗೆ ದೂರದ ಸಂಬಂಧಿಯಾಗಿರುವ ಹುಡುಗಿಯೊಬ್ಬಳು ಕಂಚಿನಡ್ಕ ಪದವಿನ ತನ್ನ ಮನೆಗೆ ಬರಹೇಳಿದ್ದು ಅದರಂತೆ ತೆರಳಿದ್ದ ಯುವಕನಿಗೆ ಸ್ಥಳೀಯ ಯುವಕರು ಸೇರಿ ಕಟ್ಟಿ ಹಾಕಿ ಥಳಿಸಿದ್ದಾರೆ. ಮುಖ, ಕೈಯಲ್ಲಿ ರಕ್ತ ಬರುವಷ್ಟು ಥಳಿಸಿದ್ದು ಆತ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ.
ಗುಂಪು ಹಲ್ಲೆ ನಡೆಸಿದ ಕಂಚಿನಡ್ಕಪದವು ನಿವಾಸಿಗಳಾದ ಮಹಮ್ಮದ್ ಸಫ್ವಾನ್ (25), ಮಹಮ್ಮದ್ ರಿಜ್ವಾನ್ (25), ಇರ್ಫಾನ್ (27), ಅನೀಸ್ ಅಹ್ಮದ್(19), ನಾಸೀರ್ (27) ಮತ್ತು ಶಾಕೀರ್ (18) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿರುವ ವಿಡಿಯೋ ವೈರಲ್ ಆಗಿದೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯಡಿ ಕಲಂ 115(2), 126(2), 189(2), 190, 191(2), 351 (2), 352, 109, 117 (4) ಸೆಕ್ಷನ್ ಪ್ರಕಾರ ಕೇಸು ದಾಖಲಾಗಿದೆ.
Youth stripped naked, assulted for visiting girls house at night at bengare in Mangalore, Video viral. Mohammed Mustafa, a resident of Bengare in Mangaluru, was reportedly attacked by a mob who tied him to a pole, stripped him half-naked.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm