ಬ್ರೇಕಿಂಗ್ ನ್ಯೂಸ್
17-11-24 09:54 pm Bangalore Correspondent ಕ್ರೈಂ
ಬೆಂಗಳೂರು, ನ 17: ವಿದೇಶಕ್ಕೆ ಮಾದಕದ್ರವ್ಯ ಸಾಗಾಟದ ಪ್ರಕರಣದಲ್ಲಿ ಸಿಲುಕಿರುವಂತೆ ನಂಬಿಸಿ, ಪೊಲೀಸರ ಸೋಗಿನಲ್ಲಿ ಸಹಾಯ ಮಾಡುವುದಾಗಿ ಸಾಫ್ಟ್ವೇರ್ ಉದ್ಯೋಗಿಯೊಬ್ಬರಿಗೆ ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ. 30 ವರ್ಷ ವಯಸ್ಸಿನ ಯುವತಿಯೊಬ್ಬರು ನೀಡಿರುವ ದೂರಿನನ್ವಯ ಮುಂಬೈ ಏರ್ ಕಸ್ಟಮ್ಸ್ ಅಧಿಕಾರಿಗಳ ಹೆಸರಿನಲ್ಲಿ 40.18 ಲಕ್ಷ ರೂ. ವರ್ಗಾಯಿಸಿಕೊಂಡು ವಂಚಿಸಿರುವ ವಂಚಕರ ವಿರುದ್ಧ ಬೆಂಗಳೂರು ಪಶ್ಚಿಮ ವಿಭಾಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವೆಂಬರ್ 7ರಂದು ಅಪರಿಚಿತ ನಂಬರ್ನಿಂದ ದೂರುದಾರ ಯುವತಿಗೆ ಕರೆ ಮಾಡಿದ್ದ ವಂಚಕನೊಬ್ಬ ತನ್ನನ್ನು ಕೋರಿಯರ್ ಕಂಪನಿಯೊಂದರ ಪ್ರತಿನಿಧಿ ಎಂದು ಪರಿಚಯಿಸಿಕೊಂಡಿದ್ದ. ಬಳಿಕ "ನಿಮ್ಮ ಹೆಸರಿನಲ್ಲಿ ಮುಂಬೈನಿಂದ ಇರಾನ್ಗೆ ಕಳುಹಿಸಿರುವ ಪಾರ್ಸೆಲ್ನಲ್ಲಿ ಎಂಡಿಎಂಎ ಸೇರಿದಂತೆ ಇತರೆ ಮಾದಕ ಪದಾರ್ಥಗಳಿವೆ. ನಿಮ್ಮ ವೈಯಕ್ತಿಕ ದಾಖಲಾತಿಗಳು ಮತ್ತು ಫೋನ್ ನಂಬರ್ ಕೋರಿಯರ್ಗೆ ಲಿಂಕ್ ಆಗಿದೆ. ಈ ಕುರಿತು ನಿಮಗೆ ಏನಾದರೂ ಗೊತ್ತಾ?" ಎಂದು ಕೇಳಿದ್ದಾನೆ. ದೂರುದಾರ ಯುವತಿ ತನಗೆ ಗೊತ್ತಿಲ್ಲ ಎಂದಾಗ "ಮುಂಬೈ ಏರ್ ಕಸ್ಟಮ್ಸ್ ಕಂಟ್ರೋಲ್ ರೂಂಗೆ ಕರೆ ಕನೆಕ್ಟ್ ಮಾಡುತ್ತೇನೆ" ಎಂದು ಮತ್ತೋರ್ವ ವಂಚಕನಿಗೆ ಕರೆಯನ್ನು ವರ್ಗಾಯಿಸಿದ್ದನು.
ಏರ್ ಕಸ್ಟಮ್ಸ್ ಅಧಿಕಾರಿಯ ಸೋಗಿನಲ್ಲಿ ಮಾತನಾಡಿದ ಮತ್ತೋರ್ವ ವಂಚಕ, ದೂರುದಾರಳಿಗೆ ಟೆಲಿಗ್ರಾಂ ಆ್ಯಪ್ ಡೌನ್ಲೋಡ್ ಮಾಡಿಸಿ ವಿಡಿಯೋ ಕರೆ ಮಾಡಿದ್ದಾನೆ. ನಂತರ "ನಾವು 6 ತಿಂಗಳ ಹಿಂದೆ ಬಂಧಿಸಿದ್ದ ಓರ್ವ ಕ್ರಿಮಿನಲ್ ವ್ಯಕ್ತಿ ಸಾರ್ವಜನಿಕರ ದಾಖಲೆಗಳನ್ನು ಪಡೆದು ಕೋರಿಯರ್/ಪಾರ್ಸೆಲ್ ರವಾನೆಗೆ ಬಳಸುತ್ತಿದ್ದ. ನಿಮಗೂ ಸಹ ಹಾಗೆಯೇ ಆಗಿರಬಹುದು. ನಾವು 3 ರೀತಿಯಲ್ಲಿ ತನಿಖೆ ನಡೆಸಿ ನಿಮಗೆ PCC (ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೆಟ್) ಕೊಡುತ್ತೇವೆ" ಎಂದು ನಂಬಿಸಿದ್ದ. ನಂತರ ದೂರುದಾರಳ ವೈಯಕ್ತಿಕ ದಾಖಲೆಗಳು, ಕುಟುಂಬ ಸದಸ್ಯರ ವಿವರ, ಬ್ಯಾಂಕ್ ಖಾತೆಯ ವಿವರಗಳನ್ನು ಪಡೆದುಕೊಂಡು, "ನಿಮ್ಮ ಖಾತೆಯಲ್ಲಿರುವ ಹಣವನ್ನು ನಾವು ಹೇಳಿದ ಖಾತೆಗೆ ವರ್ಗಾಯಿಸಿ, ಆರ್ಬಿಐನಿಂದ ಪರಿಶೀಲನೆ ನಡೆಸಿ ವಾಪಸ್ ನಿಮ್ಮ ಖಾತೆಗೆ ಮರು ವರ್ಗಾವಣೆ ಮಾಡಲಿದ್ದೇವೆ" ಎಂದು ತಿಳಿಸಿದ್ದ.
ಆರೋಪಿಗಳ ಮಾತು ನಿಜವೆಂದು ನಂಬಿದ್ದ ದೂರುದಾರ ಯುವತಿ ತನ್ನ ಮೂರು ವಿವಿಧ ಬ್ಯಾಂಕ್ ಖಾತೆಗಳಲ್ಲಿದ್ದ ಒಟ್ಟು 40.18 ಲಕ್ಷ ರೂ. ಹಣವನ್ನು ಅವರು ಹೇಳಿದ ಖಾತೆಗಳಿಗೆ ವರ್ಗಾಯಿಸಿದ್ದರು. ತನ್ನ ಖಾತೆಗೆ ಹಣ ಮರು ವರ್ಗಾವಣೆಯಾಗದಿದ್ದಾಗ ತಾನು ವಂಚನೆಗೊಳಗಾಗಿರುವುದು ತಿಳಿದ ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಬೆಂಗಳೂರು ಪಶ್ಚಿಮ ವಿಭಾಗದ ಸಿಇಎನ್ ಪೊಲೀಸರು ತನಿಖೆ ಆರಂಭಿಸಿದ್ದು, ಹಣ ಜಮೆಯಾದ ಖಾತೆಗಳ ವಿವರಗಳನ್ನು ಕಲೆಹಾಕುತ್ತಿರುವುದಾಗಿ ತಿಳಿಸಿದ್ದಾರೆ.
Bangalore software engineer girl cheated of 40 lakhs in the name of fake police by online fraud. A case has been registered at the CEN Police station in Bangalore
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am