ಬ್ರೇಕಿಂಗ್ ನ್ಯೂಸ್
26-11-24 03:10 pm Mangalore Correspondent ಕ್ರೈಂ
ಉಳ್ಳಾಲ, ನ.26: ಪಜೀರು ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿ ನಿಷೇಧಿತ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರನ್ನ ಎಸಿಪಿ ಧನ್ಯ ನಾಯಕ್ ನೇತೃತ್ವದ ಆಂಟಿ ಡ್ರಗ್ ಟೀಮ್ ಕಾರ್ಯಾಚರಣೆ ನಡೆಸಿ ಬಂಧಿಸಿದ್ದು, ಸುಮಾರು ಒಂದೂವರೆ ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ ವಶ ಪಡಿಸಿಕೊಳ್ಳಲಾಗಿದೆ.
ತಲಪಾಡಿಯ ಮರಿಯ ಚರ್ಚ್ ಕಂಪೌಂಡ್ ನಿವಾಸಿ ಗೌತಮ್ (22) , ಕುಂಪಲ ಹನುಮಾನ್ ದೇವಸ್ಥಾನ ಬಳಿಯ ನಿವಾಸಿ ಕಾರ್ತಿಕ್ (27), ತೊಕ್ಕೊಟ್ಟು ಗಣೇಶ ನಗರದ ಗಣೇಶ ಮಂದಿರದ ಬಳಿ ನಿವಾಸಿ ನಿಖಿಲ್ (28) ಬಂಧಿತ ಆರೋಪಿಗಳು. ಸೋಮವಾರ ಕೊಣಾಜೆ ಠಾಣೆ ವ್ಯಾಪ್ತಿಯ ಪಜೀರಿನ ಕೈಗಾರಿಕಾ ನಿರ್ಜನ ಪ್ರದೇಶದಲ್ಲಿ ಆರೋಪಿಗಳು ಕಾರಿನಲ್ಲಿ ಎಂಡಿಎ ಡ್ರಗ್ಸ್ ಮಾರುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ.

ಬಂಧಿತರಿಂದ 1,50,000/- ಅಂದಾಜು ಮೌಲ್ಯದ 50 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು ಹಾಗೂ ಮಾರಾಟ ಮಾಡಲು ಉಪಯೋಗಿಸಿದ ಬಿಳಿ ಬಣ್ಣದ ಬೆಲೆನೋ ಕಾರು ಮತ್ತು 03 ಮೊಬೈಲ್ ಫೋನ್ಗಳು, ಡಿಜಿಟಲ್ ತೂಕ ಮಾಪನ ಹಾಗೂ ಗಾಜಿನ ನಳಿಕೆಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿದ ಸೊತ್ತಿನ ಒಟ್ಟು ಮೌಲ್ಯ 7,76,980/- ಮೌಲ್ಯ ಆಗಿದೆ. ಆರೋಪಿಗಳ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 138/2024 ಕಲಂ 8(c) 22(c) NDPS act 1985 ರಂತೆ ಪ್ರಕರಣ ದಾಖಲಾಗಿದೆ.
ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಧನ್ಯ ಎನ್.ನಾಯಕ್ ನೇತೃತ್ವದಲ್ಲಿ ಕೊಣಾಜೆ ಪೊಲೀಸ್ ಠಾಣೆಯ ನಿರೀಕ್ಷಕರಾದ ರಾಜೇಂದ್ರ,ಬಿ. ಪಿಎಸ್ಸೈ ನಾಗರಾಜ.ಎಸ್, ಮತ್ತು "ಆಂಟಿ ಡ್ರಗ್" ತಂಡದ ಪಿಎಸ್ಐ ಪುನೀತ್ , ಸಿಬ್ಬಂದಿಗಳಾದ ಸಾಜು ನಾಯರ್, ಮಹೇಶ್, ರೇಜಿ ,ಶಿವಕುಮಾರ್, ಅಕ್ಬರ್ ,ರೇಷ್ಮಾ, ರಾಮ ನಾಯಕ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Acp Dhanya Nayak along with anti drugs team raid, three drug peddlers arrested in Pajir Mangalore. car and drugs worth 1.5 lakhs has been seized
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 06:51 am
Mangaluru Staffer
ಅಕ್ರಮ ಸಂಬಂಧ ಶಂಕೆ ; ತಾಯಿಯನ್ನ ನಿಂದಿಸಿದ್ದಕ್ಕೆ ಇಬ...
26-03-26 06:48 pm
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm