ಬ್ರೇಕಿಂಗ್ ನ್ಯೂಸ್
29-11-24 12:20 pm Mangalore Correspondent ಕ್ರೈಂ
ಬೆಳ್ತಂಗಡಿ, ನ.29: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದ ಕುಟುಂಬವೊಂದರ ಮಹಿಳೆಯ ಬ್ಯಾಗ್ ನಲ್ಲಿದ್ದ ನಗದು ಸಹಿತ ಸುಮಾರು 12.80 ಲಕ್ಷ ರೂ. ಮೌಲ್ಯದ 40 ಪವನ್ ಚಿನ್ನಾಭರಣಗಳನ್ನು ಕಳ್ಳರು ಎಗರಿಸಿದ ಘಟನೆ ನ.24ರಂದು ನಡೆದಿದ್ದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲೆಯ ಕಾಪು ಕೋಟೆ ಗ್ರಾಮದ ಜೋಗಿ ಕಂಪೌಂಡ್ ನಿವಾಸಿ ಗಾಯತ್ರಿ ಆರ್. ಜೋಗಿ ಅವರಿಗೆ ಸೇರಿದ ಬ್ಯಾಗ್ ನಲ್ಲಿದ್ದ 10 ಸಾವಿರ ರೂ. ನಗದು ಹಾಗೂ 12.80 ಲಕ್ಷ ರೂ. ಮೌಲ್ಯದ 40 ಪವನ್ ಚಿನ್ನಾಭರಣಗಳನ್ನು ಕಳ್ಳರು ಕಳವು ಮಾಡಿದ್ದಾರೆ.
ಗಾಯತ್ರಿ ಅವರು ತನ್ನ ಮಗಳು ರಜಿತಾ, ಆಕೆಯ 7 ತಿಂಗಳ ಮಗು ಹಾಗೂ ತಾಯಿ ತಾರಾ ಜೋಗಿ ಜೊತೆ ನ.24ರಂದು ಬೆಳಗ್ಗೆ 10 ಗಂಟೆಗೆ ಮನೆಯಿಂದ ಕಾರಿನಲ್ಲಿ ಧರ್ಮಸ್ಥಳಕ್ಕೆ ಬಂದಿದ್ದರು. ಬರುವಾಗ ತಮ್ಮ ಬ್ಯಾಗ್ ನಲ್ಲಿ ಮಗಳ ಹಾಗೂ ಮಗುವಿನ ಹಾಗೂ ತನಗೆ ಸೇರಿದ 40 ಪವನ್ ಚಿನ್ನಾಭರಣಗಳನ್ನು ಎರಡು ಪರ್ಸ್ ನಲ್ಲಿ ಇಟ್ಟು 10 ಸಾವಿರ ನಗದನ್ನು ಇನ್ನೊಂದು ಬ್ಯಾಗ್ ನಲ್ಲಿಟ್ಟು ಬಂದಿದ್ದರು. ಮಧ್ಯಾಹ್ನ 1.45ರ ಸುಮಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ಕಾರನ್ನು ವಾಹನ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದರು. ಬಳಿಕ ದೇವರ ದರ್ಶನಕ್ಕೆ ದೇವಸ್ಥಾನದ ಒಳಗಡೆ ಹೋಗಿ ದೇವರ ದರ್ಶನ ಮುಗಿಸಿ ಮಧ್ಯಾಹ್ನ 2.30 ಗಂಟೆಯ ಸಮಯಕ್ಕೆ ಬ್ಯಾಗನ್ನು ನೋಡಿದಾಗ, ಜಿಪ್ ತೆರೆದುಕೊಂಡಿರುವುದು ಕಂಡುಬಂದಿತ್ತು.
ಬ್ಯಾಗ್ ನಲ್ಲಿಟ್ಟಿದ್ದ ಸುಮಾರು 40 ಪವನ್ ಚಿನ್ನಾಭರಣಗಳನ್ನು ಇರಿಸಿದ್ದ ಎರಡು ಪರ್ಸ್ ಹಾಗೂ ನಗದು ನಾಪತ್ತೆಯಾಗಿತ್ತು. ಕೂಡಲೇ ಪಾರ್ಕ್ ಮಾಡಿದ್ದ ಕಾರಿನತ್ತ ತೆರಳಿ ಹುಡುಕಾಡಿದಾಗ ಅಲ್ಲಿಯೂ ಚಿನ್ನಾಭರಣ ಪತ್ತೆಯಾಗಿರಲಿಲ್ಲ. ದೇವರ ದರ್ಶನ ಸಂದರ್ಭದಲ್ಲಿಯೇ ಬ್ಯಾಗಿನಲ್ಲಿದ್ದ ಚಿನ್ನಾಭರಣವನ್ನು ಯಾರೋ ಕಳವುಗೈದಿರಬೇಕೆಂದು ಗಾಯತ್ರಿ ಜೋಗಿ ಅವರು ಧರ್ಮಸ್ಥಳ ಠಾಣೆಯಲ್ಲಿ ದೂರು ನೀಡಿದ್ದಾರೆ.
Family from Udupi lost 40 pound gold after robbers steal stolen gold during visit to Dharmasthala in Mangalore.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 04:48 pm
VK Mangalore
Dharmasthala Skeleton Mystery: ಧರ್ಮಸ್ಥಳ ಅಸ್ತಿ...
04-08-25 01:58 pm
Dharmasthala Case: ಧರ್ಮಸ್ಥಳ ಪ್ರಕರಣ ; ಆರನೇ ಪಾಯ...
04-08-25 01:24 pm
MCC Bank Inaugurates 20th Branch in Byndoor,...
04-08-25 12:40 pm
New Witness, Dharmasthala Case, Jayan: ನನ್ನ ಕ...
02-08-25 10:51 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm