ಬ್ರೇಕಿಂಗ್ ನ್ಯೂಸ್
07-12-24 09:48 pm Mangalore Correspondent ಕ್ರೈಂ
ಮಂಗಳೂರು, ಡಿ.7 : ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ದುಪ್ಪಟ್ಟು ಲಾಭ ಸಿಗುತ್ತದೆ ಎಂದು ನಂಬಿಸಿದ ಸೈಬರ್ ವಂಚಕರು ವ್ಯಕ್ತಿಯೊಬ್ಬರಿಗೆ 46 ಲಕ್ಷ ರೂ. ವಂಚಿಸಿದ ಪ್ರಸಂಗ ನಡೆದಿದ್ದು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವ್ಯಕ್ತಿಯೊಬ್ಬರ ವಾಟ್ಸಾಪ್ ನಂಬರ್ ಗೆ ಮೆಸೇಜ್ ಮಾಡಿದ್ದ ಶ್ರದ್ಧಾ ಬೆಲಾನಿ ಎಂದು ಪರಿಚಯಿಸಿಕೊಂಡ ವ್ಯಕ್ತಿಯೊಬ್ಬ ಷೇರು ಟ್ರೇಡಿಂಗ್ನಲ್ಲಿ ಹಣ ತೊಡಗಿಸಿದರೆ ಶೇ.500ರಷ್ಟು ಲಾಭಾಂಶ ಬರುವುದಾಗಿ ನಂಬಿಸಿದ್ದರು. ಅದರಂತೆ ಈ ವ್ಯಕ್ತಿ ಆತ ಕಳುಹಿಸಿದ ಲಿಂಕ್ ಒತ್ತಿ ಷೇರು ಮಾರುಕಟ್ಟೆಗೆ ರಿಜಿಸ್ಟ್ರೇಷನ್ ಮಾಡಿಕೊಂಡಿದ್ದರು. ನಂತರ ಇವರನ್ನು H 777 ARES Stock Exchange Group ಎಂಬ ವಾಟ್ಸಾಪ್ ಗ್ರೂಪ್ ಸೇರಿಸಿದ್ದರು.
ಗ್ರೂಪ್ನಲ್ಲಿ ಶ್ರದ್ಧಾ ಬೆಲಾನಿ ಎಂಬವರು ಗ್ರೂಪ್ ಅಡ್ಮಿನ್ ಆಗಿದ್ದರು. ಮೊದಲಿಗೆ ಈ ವ್ಯಕ್ತಿ ಸ್ಟಾಕ್ ಖರೀದಿ ಮಾಡಲು ತನ್ನ ಬ್ಯಾಂಕ್ನಿಂದ 2 ಲಕ್ಷ ರೂ. ಹಣವನ್ನು ಆರ್ಟಿಜಿಎಸ್ ಮಾಡಿದ್ದರು. ಮರುದಿನ ಆ ಸ್ಟಾಕ್ ಅನ್ನು ಸೇಲ್ ಮಾಡಿದ್ದು, ಇದರಿಂದ 50,000 ರೂ. ಲಾಭವಾಗಿ ಬಂದಿರುತ್ತದೆ. ಇದನ್ನು ನಂಬಿದ ವ್ಯಕ್ತಿ ಇನ್ನೂ ಹೆಚ್ಚಿನ ಲಾಭ ಪಡೆಯುವ ಉದ್ದೇಶದಿಂದ ಅದೇ ಖಾತೆಗೆ ಪುನಃ 5 ಲಕ್ಷ ರೂ. ಹಣವನ್ನು ಹೂಡಿಕೆ ಮಾಡಿದ್ದಾರೆ. ನಂತರ 9,00,000 ರೂ. ಹಣ ಸೇರಿದಂತೆ ನವೆಂಬರ್ 1 ರಿಂದ 19 ರ ವರೆಗೆ ಒಟ್ಟು 29 ಲಕ್ಷ ರೂ. ಹಾಗೂ ನವೆಂಬರ್ 27ರಂದು ಮತ್ತೆ 1 ಲಕ್ಷ ಹಣ ಹೂಡಿಕೆ ಮಾಡಿದ್ದಾರೆ. ಹೀಗೆ ಒಟ್ಟು 46 ಲಕ್ಷ ರೂ. ಹಣವನ್ನು ವರ್ಗಾವಣೆ ಮಾಡಿದ್ದರು.
ನವೆಂಬರ್ 29 ರಂದು ಈ ವ್ಯಕ್ತಿಗೆ ಹಣದ ಅವಶ್ಯಕತೆ ಇದ್ದುದರಿಂದ 20 ಲಕ್ಷ ಹಣವನ್ನು ಹಿಂಪಡೆಯಲು ಪ್ರಯತ್ನಿಸಿದ್ದರು. ಆದರೆ ಹಣ ವಿತ್ ಡ್ರಾ ಮಾಡಲು ಆಗಿರಲಿಲ್ಲ. ಈ ಬಗ್ಗೆ ಶ್ರದ್ಧಾ ಬೆಲಾನಿ ಹಾಗೂ ಗ್ರೂಪ್ ಅಡ್ಮಿನ್ ಆಗಿದ್ದ ಅಭಿಷೇಕ್ ರಾಮ್ ಜೀ ಅವರನ್ನು ಸಂಪರ್ಕಿಸಿದಾಗ ಅವರು ಹಣವನ್ನು ವಾಪಾಸ್ ತೆಗೆಯಬೇಕಾದರೆ ಮತ್ತೆ 8.78 ಲಕ್ಷ ರೂ. ಹಣ ವರ್ಗಾವಣೆ ಮಾಡಿ ನಿಮ್ಮ ಖಾತೆಯನ್ನು ಮುಕ್ತಾಯ ಮಾಡಿಕೊಳ್ಳಬಹುದಾಗಿ ತಿಳಿಸಿದ್ದರು. ಈ ಬಗ್ಗೆ ಅನುಮಾನ ಬಂದ ಈ ವ್ಯಕ್ತಿ ಪೊಲೀಸ್ ದೂರು ದಾಖಲಿಸಿದ್ದಾರೆ.
ಶ್ರದ್ದಾ ಬೆಲಾನಿ ಮತ್ತು ಅಭಿಷೇಕ್ ರಾಮ್ ಜೀ ಎಂಬವರು ಖಾಸಗಿ ಶೇರು ಕಂಪನಿಯ ಹೆಸರಿನಲ್ಲಿ ಆನ್ಲೈನ್ ಮೂಲಕ ಅಕ್ಟೋಬರ್ 24 ರಿಂದ ನವೆಂಬರ್ 27ರ ವರೆಗೆ ಹಂತ ಹಂತವಾಗಿ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು 46 ಲಕ್ಷ ಹಣ ಪಾವತಿಸಿ ಬಳಿಕ ಮರು ಪಾವತಿ ಮಾಡದೆ ಮೋಸ ಮಾಡಿದ್ದಾರೆ ಎಂದವರು ದೂರು ನೀಡಿದ್ದಾರೆ.
Fraud in the name of high returns in stock market, Mangalore man looses 46 lakhs. A case has been registered at the cyber crime police station.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm